AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತಾಯಿಯೊಂದಿಗೆ ಶ್ರೀ ಕೃಷ್ಣ ಮಂತ್ರ ಪಠಿಸಿದ ಎಂಟು ತಿಂಗಳ ಕಂದಮ್ಮ

ಮುದ್ದಾದ ಮಕ್ಕಳ ಮಾತನ್ನು ಕೇಳುವುದೇ ಕಿವಿಗೆ ಆನಂದ. ಮಾತನಾಡಲು ಕಲಿಯುವ ವಯಸ್ಸಿನಲ್ಲಿ ಒಂದೊಂದೇ ಪದಗಳನ್ನಾಡುವಾಗ ಆ ಕಂದಮ್ಮನನ್ನು ಮುದ್ದಿಸಬೇಕು ಎನಿಸುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಎಂಟು ತಿಂಗಳ ಮಗುವೊಂದು ತನ್ನ ತಾಯಿಯೊಂದಿಗೆ ಶ್ರೀ ಕೃಷ್ಣ ದಾಮೋದರಾಷ್ಟಕಂ ಮಂತ್ರವನ್ನು ಪಠಿಸಿದೆ. ಈ ವಿಡಿಯೋವೊಂದು ನೆಟ್ಟಿಗರ ವಲಯದಲ್ಲಿ ಗಮನ ಸೆಳೆದಿದ್ದು, ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ.

ಸಾಯಿನಂದಾ
| Edited By: |

Updated on: Oct 05, 2024 | 4:32 PM

Share

ಮುದ್ದು ಮಕ್ಕಳ ಜೊತೆಗೆ ಇದ್ದು ಬಿಟ್ಟರೆ ಅದರಸಷ್ಟು ಖುಷಿ ನೀಡುವ ಘಳಿಗೆಯು ಮತ್ತೊಂದಿಲ್ಲ. ಮುಗ್ಧ ಮನಸ್ಸುಗಳ, ಸ್ವಾರ್ಥವಿಲ್ಲದ ಮಕ್ಕಳು ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಈ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Vaidik Gyaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ತಾಯಿಯ ಪಕ್ಕದಲ್ಲಿ ಮಲಗಿರುವ ಮಗುವು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುವುದನ್ನು ಕಾಣಬಹುದು. ಶ್ರೀ ಕೃಷ್ಣ ದಾಮೋದರಾಷ್ಟಕಂನ ಕೊನೆಯ ಪದವನ್ನು ಮಗುವೇ ಪೂರ್ಣಗೊಳಿಸುತ್ತಿರುವುದು ವಿಶೇಷ. ಹೌದು, ತಾಯಿಯು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಹೇಳುತ್ತಿದ್ದಾಳೆ. ಆದರೆ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು, ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪಾಗಿದೆ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ