AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತಾಯಿಯೊಂದಿಗೆ ಶ್ರೀ ಕೃಷ್ಣ ಮಂತ್ರ ಪಠಿಸಿದ ಎಂಟು ತಿಂಗಳ ಕಂದಮ್ಮ

ಮುದ್ದಾದ ಮಕ್ಕಳ ಮಾತನ್ನು ಕೇಳುವುದೇ ಕಿವಿಗೆ ಆನಂದ. ಮಾತನಾಡಲು ಕಲಿಯುವ ವಯಸ್ಸಿನಲ್ಲಿ ಒಂದೊಂದೇ ಪದಗಳನ್ನಾಡುವಾಗ ಆ ಕಂದಮ್ಮನನ್ನು ಮುದ್ದಿಸಬೇಕು ಎನಿಸುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಎಂಟು ತಿಂಗಳ ಮಗುವೊಂದು ತನ್ನ ತಾಯಿಯೊಂದಿಗೆ ಶ್ರೀ ಕೃಷ್ಣ ದಾಮೋದರಾಷ್ಟಕಂ ಮಂತ್ರವನ್ನು ಪಠಿಸಿದೆ. ಈ ವಿಡಿಯೋವೊಂದು ನೆಟ್ಟಿಗರ ವಲಯದಲ್ಲಿ ಗಮನ ಸೆಳೆದಿದ್ದು, ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ.

ಸಾಯಿನಂದಾ
| Edited By: |

Updated on: Oct 05, 2024 | 4:32 PM

Share

ಮುದ್ದು ಮಕ್ಕಳ ಜೊತೆಗೆ ಇದ್ದು ಬಿಟ್ಟರೆ ಅದರಸಷ್ಟು ಖುಷಿ ನೀಡುವ ಘಳಿಗೆಯು ಮತ್ತೊಂದಿಲ್ಲ. ಮುಗ್ಧ ಮನಸ್ಸುಗಳ, ಸ್ವಾರ್ಥವಿಲ್ಲದ ಮಕ್ಕಳು ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಈ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Vaidik Gyaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ತಾಯಿಯ ಪಕ್ಕದಲ್ಲಿ ಮಲಗಿರುವ ಮಗುವು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುವುದನ್ನು ಕಾಣಬಹುದು. ಶ್ರೀ ಕೃಷ್ಣ ದಾಮೋದರಾಷ್ಟಕಂನ ಕೊನೆಯ ಪದವನ್ನು ಮಗುವೇ ಪೂರ್ಣಗೊಳಿಸುತ್ತಿರುವುದು ವಿಶೇಷ. ಹೌದು, ತಾಯಿಯು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಹೇಳುತ್ತಿದ್ದಾಳೆ. ಆದರೆ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು, ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪಾಗಿದೆ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ