AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ತಾಯಿಯೊಂದಿಗೆ ಶ್ರೀ ಕೃಷ್ಣ ಮಂತ್ರ ಪಠಿಸಿದ ಎಂಟು ತಿಂಗಳ ಕಂದಮ್ಮ

ಮುದ್ದಾದ ಮಕ್ಕಳ ಮಾತನ್ನು ಕೇಳುವುದೇ ಕಿವಿಗೆ ಆನಂದ. ಮಾತನಾಡಲು ಕಲಿಯುವ ವಯಸ್ಸಿನಲ್ಲಿ ಒಂದೊಂದೇ ಪದಗಳನ್ನಾಡುವಾಗ ಆ ಕಂದಮ್ಮನನ್ನು ಮುದ್ದಿಸಬೇಕು ಎನಿಸುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಎಂಟು ತಿಂಗಳ ಮಗುವೊಂದು ತನ್ನ ತಾಯಿಯೊಂದಿಗೆ ಶ್ರೀ ಕೃಷ್ಣ ದಾಮೋದರಾಷ್ಟಕಂ ಮಂತ್ರವನ್ನು ಪಠಿಸಿದೆ. ಈ ವಿಡಿಯೋವೊಂದು ನೆಟ್ಟಿಗರ ವಲಯದಲ್ಲಿ ಗಮನ ಸೆಳೆದಿದ್ದು, ಮೆಚ್ಚುಗೆಯ ಸುರಿಮಳೆಯೇ ಹರಿದು ಬರುತ್ತಿದೆ.

ಸಾಯಿನಂದಾ
| Edited By: |

Updated on: Oct 05, 2024 | 4:32 PM

Share

ಮುದ್ದು ಮಕ್ಕಳ ಜೊತೆಗೆ ಇದ್ದು ಬಿಟ್ಟರೆ ಅದರಸಷ್ಟು ಖುಷಿ ನೀಡುವ ಘಳಿಗೆಯು ಮತ್ತೊಂದಿಲ್ಲ. ಮುಗ್ಧ ಮನಸ್ಸುಗಳ, ಸ್ವಾರ್ಥವಿಲ್ಲದ ಮಕ್ಕಳು ಆಡುವ ಪ್ರತಿಯೊಂದು ತೊದಲು ಮಾತನ್ನು ಕೇಳುವಾಗ ಕಿವಿಗೆ ಇಂಪೆನಿಸುತ್ತದೆ. ಮಕ್ಕಳ ಮುದ್ದಾದ ವಿಡಿಯೋಗಳು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ತಾಯಿಯೊಂದಿಗೆ ಎಂಟು ತಿಂಗಳ ಮಗುವೊಂದು ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಿಸಿದ್ದು, ಈ ವಿಡಿಯೋ ನೋಡಿ ನೆಟ್ಟಿಗರು ಮೆಚ್ಚುಗೆಯ ಸುರಿಮಳೆಗೈದಿದ್ದಾರೆ.

Vaidik Gyaan ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ತಾಯಿಯ ಪಕ್ಕದಲ್ಲಿ ಮಲಗಿರುವ ಮಗುವು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಪಠಿಸುವುದನ್ನು ಕಾಣಬಹುದು. ಶ್ರೀ ಕೃಷ್ಣ ದಾಮೋದರಾಷ್ಟಕಂನ ಕೊನೆಯ ಪದವನ್ನು ಮಗುವೇ ಪೂರ್ಣಗೊಳಿಸುತ್ತಿರುವುದು ವಿಶೇಷ. ಹೌದು, ತಾಯಿಯು ಶ್ರೀ ಕೃಷ್ಣ ದಾಮೋದರಾಷ್ಟಕಂ ಶ್ಲೋಕ ಹೇಳುತ್ತಿದ್ದಾಳೆ. ಆದರೆ ಕೊನೆಯ ಪದವನ್ನು ಮಗುವು ಮುದ್ದಾಗಿ ಉಚ್ಚರಿಸುತ್ತಿದೆ.

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆಯ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು, ಮಗುವಿನ ಈ ಆಧ್ಯಾತ್ಮಕ ಸಾಧನೆಯನ್ನು ಹೊಗಳಿದ್ದಾರೆ. ಮತ್ತೊಬ್ಬರು, ಜೈ ಸನಾತನ ಧರ್ಮ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮಗುವಿನ ಬಾಯಿಂದ ಶ್ರೀ ಕೃಷ್ಣ ದಾಮೋದರಾಷ್ಟಕಂ ಪಠಣ ಕೇಳುವುದೇ ಕಿವಿಗೆ ಇಂಪಾಗಿದೆ ಎಂದಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು