AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸಿದ ಕಲಾವಿದನಿಗೆ ಕಿರು ಕಾಣಿಕೆ ನೀಡಿದ ಅಜ್ಜ 

ಇದೀಗ ಸುಂದರವಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗುಮ್ಮಟ ನಗರಿ ವಿಜಯಪುರದ  ಸಿಂಗದಿಯ  ಬೈಪಾಸ್ ಬ್ರಿಡ್ಜ್  ಗೋಡೆಯ ಮೇಲೆ  ಶತಮಾನದ ಸಂತ ಮತ್ತು ಆಧ್ಯಾತ್ಮಕ ದಿವ್ಯ ಚೇತನ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಚಿತ್ರವನ್ನು ಕಲಾವಿದರೊಬ್ಬರು ಬಿಡಿಸುತ್ತಿದ್ದರು. ಈ ಸಂದರ್ಭದಲ್ಲಿ  ಸಿದ್ದೇಶ್ವರ  ಸ್ವಾಮಿಗಳ  ಅದ್ಭುತ ಚಿತ್ರವನ್ನು ಬಿಡಿಸಿದ ಕಲಾವಿದನ ಕಲೆಯನ್ನು ಮೆಚ್ಚಿದಂತಹ ಮುಗ್ಧ ಮನಸಿನ ತಾತಪ್ಪ ಅವರಿಗೆ  ಕಿರು ಕಾಣಿಕೆಯನ್ನು ನೀಡಿದ್ದಾರೆ. 

Viral Video: ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸಿದ ಕಲಾವಿದನಿಗೆ ಕಿರು ಕಾಣಿಕೆ ನೀಡಿದ ಅಜ್ಜ 
ಮಾಲಾಶ್ರೀ ಅಂಚನ್​
| Edited By: |

Updated on:Mar 01, 2024 | 5:37 PM

Share

ಸಮಾಜವನ್ನು ತಿದ್ದುವ ಸ್ವಾಮೀಜಿಗಳು ಹೇಗಿರಬೇಕು ಎನ್ನುವುದಕ್ಕೆ ಉತ್ತಮ ನಿದರ್ಶನದಂತಿದ್ದವರು ಸಿದ್ದೇಶ್ವರ ಸ್ವಾಮಿಜಿ. .  ಶ್ರೀಗಳ ಪ್ರವಚನಗಳು, ಅವರ ಸರಳ ಜೀವನ ನಮಗೆಲ್ಲರಿಗೂ ದಾರಿ ದೀಪವಾಗಿದೆ.  ಗುಮ್ಮಟ ನಗರಿ ವಿಜಯಪುರದ ಜ್ಞಾನಯೋಗಾಶ್ರಮದ ಶತಮಾನದ ಶ್ರೇಷ್ಠ ಸಂತ, ಸರಳ ಜೀವಿ, ನಡೆದಾಡುವ ಸಂತ, ಕಾಯಕ ಯೋಗಿ  ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು ನಮ್ಮೆಲ್ಲರನ್ನ ಅಗಲಿ ಹಲವು ಮಾಸಗಳೇ ಕಳೆದಿವೆ. ಆದರೆ ಇಂದಿಗೂ ಅವರ ವಿಚಾರಧಾರೆಗಳು ಶ್ರೀಗಳ ಭಕ್ತರ ಮನದಲ್ಲಿ ಅಚ್ಚೊತ್ತಿ ಬಿಟ್ಟಿದೆ. ಅದೆಷ್ಟೋ ಭಕ್ತರು ಶ್ರೀಗಳ ಭಾವಚಿತ್ರವನ್ನು ಕಂಡರೆ ಕೈ ಮುಗಿದು ನಮಿಸುತ್ತಾರೆ. ಇದ್ದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಭಕ್ತರೊಬ್ಬರು   ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸುತ್ತಿದ್ದಂತ ಕಲಾವಿದನ ಕಲೆಯನ್ನು ಮೆಚ್ಚಿ ಕಿರು ಕಾಣಿಕೆಯನ್ನು ನೀಡಿದ್ದಾರೆ. ಈ ಸುಂದರ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಸಿದ್ದೇಶ್ವರ ಶ್ರೀಗಳ  ಚಿತ್ರವನ್ನು ಬಿಡಿಸುತ್ತಿರುವ ಕಲಾವಿದನಿಗೆ ಹಿರಿಯರೊಬ್ಬರು ಕಿರು ಕಾಣಿಕೆಯನ್ನು ನೀಡಿದಂತಹ ಸುಂದರ ದೃಶ್ಯವನ್ನು ಕಾಣಬಹುದು. ಈ ವಿಡಿಯೋವನ್ನು @belagavika ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಸಿದ್ದೇಶ್ವರ ಅಜ್ಜಾರ ಅಂದ್ರಾ ನಮ್ಮ ಜನಕ್ಕಾ ಎಷ್ಟ್ ಪ್ರೀತಿ ನೋಡ್ರಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ವಿಜಯಪುರ ನಗರದ ಸಿಂಗದಿಯ ಬೈಪಾಸ್ ಬ್ರಿಡ್ಜ್ ಗೋಡೆಯ ಮೇಲೆ ಕಲಾವಿದರೊಬ್ಬರು  ಶತಮಾನದ ಸಂತ ಮತ್ತು ಆಧ್ಯಾತ್ಮಿಕ ದಿವ್ಯ ಚೇತನ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಚಿತ್ರವನ್ನು ಬಿಡಿಸುತ್ತಿರುವ ದೃಶ್ಯವನ್ನು ಕಾಣಬಹುದು.  ಆ ಸಂದರ್ಭದಲ್ಲಿ ಅಯ್ಯೋ ಈ ಯುವಕ ಗುರುಗಳ ಚಿತ್ರವನ್ನು ಅದೆಷ್ಟು ಸುಂದರವಾಗಿ ಬಿಡಿಸಿದ್ದಾನಲ್ಲವೇ  ಎನ್ನುತ್ತಾ ಬಸ್ಸಿನಲ್ಲಿ ಕುಳಿತಿದ್ದಂತಹ ಹಿರಿಯರೊಬ್ಬರು ಶ್ರೀಗಳ  ಚಿತ್ರವನ್ನೇ ನೋಡುತ್ತಾ ಕುಳಿತಿರುತ್ತಾರೆ. ನಂತರ  ನಮ್ಮ ಗುರುಗಳ ಅದ್ಭುತ ಚಿತ್ರ ಬಿಡಿಸಿದ ಕಲಾವಿದನಿಗೆ  ನನ್ನ ಕೈಲಾಗುವಷ್ಟು ಕಿರು ಕಾಣಿಕೆಯನ್ನು ನೀಡಬೇಕೆಂದು ಒಬ್ಬ ಯುವಕನ ಕೈಯಲ್ಲಿ 20 ರೂಪಾಯಿ ಕೊಟ್ಟು ಈ ಕಾಣಿಕೆಯನ್ನು ಆ ಕಲಾವಿದನಿಗೆ ಕೊಡಿ ಎಂದು ಹೇಳುತ್ತಾರೆ. ಚಿತ್ರ ಕಲಾವಿದ ಮನಸ್ಪೂರ್ವಕವಾಗಿ ತಾತಪ್ಪನ ಕಾಣಿಕೆಯನ್ನು ಸ್ವೀಕಾರ ಮಾಡುವಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  ಒಂದುವರೆ ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಲವಾರು ಕಾಮೆಂಟ್ಸ್ಗಳೂ ಹರಿದು ಬಂದಿವೆ.  ಒಬ್ಬ ಬಳಕೆದಾರರು ʼಅವರ ಮನಸಲ್ಲಿ ಅಷ್ಟೇ ಅಲ್ಲ ನಮ್ಮೆಲ್ಲರ ಮನಸಲ್ಲಿ ಸದಾ ಶಾಶ್ವತ ಸಿದ್ದೇಶ್ವರ ಸ್ವಾಮಿಗಳುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಕೊಟ್ಟಿರುವ ಹಣ ಸಣ್ಣ ಮೌಲ್ಯದ್ದಾಗಿರಬಹುದು, ಆದರೆ ಕಾಣಿಕೆ ಕೊಟ್ಟವರು ಹೃದಯವಂತರುʼ ಎಂದು ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಹೃದಯವಂತʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಸುಂದರವಾದ ವಿಡಿಯೋಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 1 March 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ