AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸಿದ ಕಲಾವಿದನಿಗೆ ಕಿರು ಕಾಣಿಕೆ ನೀಡಿದ ಅಜ್ಜ 

ಇದೀಗ ಸುಂದರವಾದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗುಮ್ಮಟ ನಗರಿ ವಿಜಯಪುರದ  ಸಿಂಗದಿಯ  ಬೈಪಾಸ್ ಬ್ರಿಡ್ಜ್  ಗೋಡೆಯ ಮೇಲೆ  ಶತಮಾನದ ಸಂತ ಮತ್ತು ಆಧ್ಯಾತ್ಮಕ ದಿವ್ಯ ಚೇತನ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಚಿತ್ರವನ್ನು ಕಲಾವಿದರೊಬ್ಬರು ಬಿಡಿಸುತ್ತಿದ್ದರು. ಈ ಸಂದರ್ಭದಲ್ಲಿ  ಸಿದ್ದೇಶ್ವರ  ಸ್ವಾಮಿಗಳ  ಅದ್ಭುತ ಚಿತ್ರವನ್ನು ಬಿಡಿಸಿದ ಕಲಾವಿದನ ಕಲೆಯನ್ನು ಮೆಚ್ಚಿದಂತಹ ಮುಗ್ಧ ಮನಸಿನ ತಾತಪ್ಪ ಅವರಿಗೆ  ಕಿರು ಕಾಣಿಕೆಯನ್ನು ನೀಡಿದ್ದಾರೆ. 

Viral Video: ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸಿದ ಕಲಾವಿದನಿಗೆ ಕಿರು ಕಾಣಿಕೆ ನೀಡಿದ ಅಜ್ಜ 
ಮಾಲಾಶ್ರೀ ಅಂಚನ್​
| Edited By: |

Updated on:Mar 01, 2024 | 5:37 PM

Share

ಸಮಾಜವನ್ನು ತಿದ್ದುವ ಸ್ವಾಮೀಜಿಗಳು ಹೇಗಿರಬೇಕು ಎನ್ನುವುದಕ್ಕೆ ಉತ್ತಮ ನಿದರ್ಶನದಂತಿದ್ದವರು ಸಿದ್ದೇಶ್ವರ ಸ್ವಾಮಿಜಿ. .  ಶ್ರೀಗಳ ಪ್ರವಚನಗಳು, ಅವರ ಸರಳ ಜೀವನ ನಮಗೆಲ್ಲರಿಗೂ ದಾರಿ ದೀಪವಾಗಿದೆ.  ಗುಮ್ಮಟ ನಗರಿ ವಿಜಯಪುರದ ಜ್ಞಾನಯೋಗಾಶ್ರಮದ ಶತಮಾನದ ಶ್ರೇಷ್ಠ ಸಂತ, ಸರಳ ಜೀವಿ, ನಡೆದಾಡುವ ಸಂತ, ಕಾಯಕ ಯೋಗಿ  ಶ್ರೀ ಸಿದ್ದೇಶ್ವರ ಸ್ವಾಮಿಜಿಗಳು ನಮ್ಮೆಲ್ಲರನ್ನ ಅಗಲಿ ಹಲವು ಮಾಸಗಳೇ ಕಳೆದಿವೆ. ಆದರೆ ಇಂದಿಗೂ ಅವರ ವಿಚಾರಧಾರೆಗಳು ಶ್ರೀಗಳ ಭಕ್ತರ ಮನದಲ್ಲಿ ಅಚ್ಚೊತ್ತಿ ಬಿಟ್ಟಿದೆ. ಅದೆಷ್ಟೋ ಭಕ್ತರು ಶ್ರೀಗಳ ಭಾವಚಿತ್ರವನ್ನು ಕಂಡರೆ ಕೈ ಮುಗಿದು ನಮಿಸುತ್ತಾರೆ. ಇದ್ದಕ್ಕೆ ಉದಾಹರಣೆಯಂತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಭಕ್ತರೊಬ್ಬರು   ಸಿದ್ದೇಶ್ವರ ಶ್ರೀಗಳ ಸುಂದರ ಚಿತ್ರವನ್ನು ಬಿಡಿಸುತ್ತಿದ್ದಂತ ಕಲಾವಿದನ ಕಲೆಯನ್ನು ಮೆಚ್ಚಿ ಕಿರು ಕಾಣಿಕೆಯನ್ನು ನೀಡಿದ್ದಾರೆ. ಈ ಸುಂದರ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಸಿದ್ದೇಶ್ವರ ಶ್ರೀಗಳ  ಚಿತ್ರವನ್ನು ಬಿಡಿಸುತ್ತಿರುವ ಕಲಾವಿದನಿಗೆ ಹಿರಿಯರೊಬ್ಬರು ಕಿರು ಕಾಣಿಕೆಯನ್ನು ನೀಡಿದಂತಹ ಸುಂದರ ದೃಶ್ಯವನ್ನು ಕಾಣಬಹುದು. ಈ ವಿಡಿಯೋವನ್ನು @belagavika ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, “ಸಿದ್ದೇಶ್ವರ ಅಜ್ಜಾರ ಅಂದ್ರಾ ನಮ್ಮ ಜನಕ್ಕಾ ಎಷ್ಟ್ ಪ್ರೀತಿ ನೋಡ್ರಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ವಿಜಯಪುರ ನಗರದ ಸಿಂಗದಿಯ ಬೈಪಾಸ್ ಬ್ರಿಡ್ಜ್ ಗೋಡೆಯ ಮೇಲೆ ಕಲಾವಿದರೊಬ್ಬರು  ಶತಮಾನದ ಸಂತ ಮತ್ತು ಆಧ್ಯಾತ್ಮಿಕ ದಿವ್ಯ ಚೇತನ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಚಿತ್ರವನ್ನು ಬಿಡಿಸುತ್ತಿರುವ ದೃಶ್ಯವನ್ನು ಕಾಣಬಹುದು.  ಆ ಸಂದರ್ಭದಲ್ಲಿ ಅಯ್ಯೋ ಈ ಯುವಕ ಗುರುಗಳ ಚಿತ್ರವನ್ನು ಅದೆಷ್ಟು ಸುಂದರವಾಗಿ ಬಿಡಿಸಿದ್ದಾನಲ್ಲವೇ  ಎನ್ನುತ್ತಾ ಬಸ್ಸಿನಲ್ಲಿ ಕುಳಿತಿದ್ದಂತಹ ಹಿರಿಯರೊಬ್ಬರು ಶ್ರೀಗಳ  ಚಿತ್ರವನ್ನೇ ನೋಡುತ್ತಾ ಕುಳಿತಿರುತ್ತಾರೆ. ನಂತರ  ನಮ್ಮ ಗುರುಗಳ ಅದ್ಭುತ ಚಿತ್ರ ಬಿಡಿಸಿದ ಕಲಾವಿದನಿಗೆ  ನನ್ನ ಕೈಲಾಗುವಷ್ಟು ಕಿರು ಕಾಣಿಕೆಯನ್ನು ನೀಡಬೇಕೆಂದು ಒಬ್ಬ ಯುವಕನ ಕೈಯಲ್ಲಿ 20 ರೂಪಾಯಿ ಕೊಟ್ಟು ಈ ಕಾಣಿಕೆಯನ್ನು ಆ ಕಲಾವಿದನಿಗೆ ಕೊಡಿ ಎಂದು ಹೇಳುತ್ತಾರೆ. ಚಿತ್ರ ಕಲಾವಿದ ಮನಸ್ಪೂರ್ವಕವಾಗಿ ತಾತಪ್ಪನ ಕಾಣಿಕೆಯನ್ನು ಸ್ವೀಕಾರ ಮಾಡುವಂತಹ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಹೆಡ್​​ ಪೋನ್​​ ಬೆಲೆ ಕೇಳಿದ್ರೆ ನೀವು ಶಾಕ್​​ ಆಗುವುದಂತೂ ಖಂಡಿತಾ

ಕೆಲ ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  ಒಂದುವರೆ ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಲವಾರು ಕಾಮೆಂಟ್ಸ್ಗಳೂ ಹರಿದು ಬಂದಿವೆ.  ಒಬ್ಬ ಬಳಕೆದಾರರು ʼಅವರ ಮನಸಲ್ಲಿ ಅಷ್ಟೇ ಅಲ್ಲ ನಮ್ಮೆಲ್ಲರ ಮನಸಲ್ಲಿ ಸದಾ ಶಾಶ್ವತ ಸಿದ್ದೇಶ್ವರ ಸ್ವಾಮಿಗಳುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಕೊಟ್ಟಿರುವ ಹಣ ಸಣ್ಣ ಮೌಲ್ಯದ್ದಾಗಿರಬಹುದು, ಆದರೆ ಕಾಣಿಕೆ ಕೊಟ್ಟವರು ಹೃದಯವಂತರುʼ ಎಂದು ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ʼಹೃದಯವಂತʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಸುಂದರವಾದ ವಿಡಿಯೋಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Fri, 1 March 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು