AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ತಾಳಿಯ ಮಹತ್ವವೇನು? ಎಂಬುದನ್ನು ಈ ಕರ್ನಾಟಕದ ಅಜ್ಜಿ ಸುಂದರವಾಗಿ ವಿವರಿಸಿದ್ದಾರೆ

ಹಿಂದೂ ಸಂಸ್ಕೃತಿಯಲ್ಲಿ ತಾಳಿಗೆ ವಿಶೇಷವಾದ ಮಹತ್ವವಿದೆ. ಮಂಗಳಸೂತ್ರವನ್ನು ಮುತ್ತೈದೆಯರ ಸೌಭಾಗ್ಯದ ಸಂಕೇತವೆಂದು ಹೇಳಲಾಗುತ್ತದೆ. ಆದ್ರೆ ಇಂದು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ, ಫ್ಯಾಶನ್ ಹೆಸರಿನಲ್ಲಿ ಅದೆಷ್ಟೋ ವಿವಾಹಿತ ಮಹಿಳೆಯರು ತಾಳಿಯನ್ನು ಹಾಕಿಕೊಳ್ಳಲು ಇಷ್ಟಪಡುವುದಿಲ್ಲ. ಇಂತಹವರರಿಗಾಗಿಯೇ  ಇಲ್ಲೊಬ್ರು  ಅಜ್ಜಮ್ಮ ಮುತ್ತೈದೆಯರು  ತಾಳಿಯನ್ನು ಯಾವುದೇ ಕಾರಣಕ್ಕೂ ಬಿಚ್ಚಿಡಬಾರದು ಎಂದು ತಾಳಿಯ ಮಹತ್ವದ ಬಗ್ಗೆ ಬಹಳ ಸೊಗಸಾಗಿ  ಹೇಳಿಕೊಟ್ಟಿದ್ದಾರೆ.  ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

Viral Video: ತಾಳಿಯ ಮಹತ್ವವೇನು? ಎಂಬುದನ್ನು ಈ ಕರ್ನಾಟಕದ ಅಜ್ಜಿ ಸುಂದರವಾಗಿ ವಿವರಿಸಿದ್ದಾರೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jan 01, 2024 | 6:26 PM

Share

ಹಿಂದೂ ಸಂಸ್ಕೃತಿಯಲ್ಲಿ ತಾಳಿಗೆ ಬಹಳ ವಿಶೇಷವಾದ ಮಹತ್ವವಿದೆ. ತಾಳಿಯನ್ನು ಸುಮಂಗಲಿಯರ ಸಂಕೇತವೆಂದು ಹೇಳಲಾಗುತ್ತದೆ. ಹಿಂದೂ ಧರ್ಮದಲ್ಲಿ ವಿವಾಹವಾದ ಬಳಿಕ ಪ್ರತಿಯೊಬ್ಬ ಮಹಿಳೆಯೂ ಮಂಗಳಸೂತ್ರವನ್ನು ಧರಿಸಲೇಬೇಕು. ಮಾಂಗಲ್ಯಧಾರಣೆಯು ಪತಿ ಪತ್ನಿಯ ನಡುವೆ ಅನ್ಯೋನ್ಯವಾದ ಬಾಂಧವ್ಯ ಬೆಸೆಯುವ ಕೊಂಡಿಯಾಗಿದೆ ಮತ್ತು ತಾಳಿಯು ಹೆಣ್ಣಿಗೆ ರಕ್ಷಾ ಕವಚ ಇದ್ದಂತೆ. ಅಷ್ಟೇ ಅಲ್ಲದೆ ಮಂಗಳಸೂತ್ರವನ್ನು ಧರಿಸುವುದರಿಂದ ಪತಿಯ ಆರೋಗ್ಯ, ಆಯಸ್ಸು  ವೃದ್ಧಿಯಾಗುತ್ತದೆ. ಮುತ್ತೈದೆ ಸ್ತ್ರೀ ಎಷ್ಟೇ ಅಲಂಕಾರವನ್ನು ಮಾಡಿಕೊಂಡರೂ, ಎಷ್ಟೇ ಚಿನ್ನ ಒಡವೆಯನ್ನು ಧರಿಸಿದ್ರೂ, ಆಕೆ ಮಂಗಳ ಸೂತ್ರವನ್ನು ಧರಿಸಿಲ್ಲ ಎಂದ್ರೆ, ಆಕೆ ಎಷ್ಟು ಅಲಂಕಾರ ಮಾಡಿಕೊಂಡರೂ ಲಕ್ಷಣವಾಗಿ ಕಾಣೊಲ್ಲ  ಎಂದು  ತಾಳಿಯ ವಿಶೇಷ ಮಹತ್ವದ  ಬಗ್ಗೆ ಹಿರಿಯರು ಹೇಳುತ್ತಿರುತ್ತಾರೆ.  ಹೀಗಿದ್ರೂ ಕೂಡಾ   ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗಿ, ಫ್ಯಾಶನ್ ಹೆಸರಿನಲ್ಲಿ ಅದೆಷ್ಟೋ  ವಿವಾಹಿತ ಸ್ತ್ರೀಯರು ಮಂಗಳಸೂತ್ರವನ್ನು ಧರಿಸಲು ಇಷ್ಟಪಡುವುದಿಲ್ಲ.  ತಾಳಿ ಧರಿಸಿಲ್ಲ ಅಂದ್ರೆ ಏನ್ ಆಗಲ್ಲ, ಅದೆಲ್ಲ ಸುಮ್ಮನೆ ಹಾಗೆ ಹೀಗೆ  ಅಂತೆಲ್ಲಾ ಅಸಡ್ಡೆಯ ಮಾತುಗಳನ್ನಾಡುತ್ತಾರೆ.  ಇಂತಹವರರಿಗಾಗಿಯೇ   ಇಲ್ಲೊಬ್ರು  ಅಜ್ಜಮ್ಮ ಮುತ್ತೈದೆಯರು  ತಾಳಿಯನ್ನು ಯಾವುದೇ ಕಾರಣಕ್ಕೂ ಬಿಚ್ಚಿಡಬಾರದು ಎಂದು ತಾಳಿಯ ಮಹತ್ವದ ಬಗ್ಗೆ ಬಹಳ ಸೊಗಸಾಗಿ  ಹೇಳಿಕೊಟ್ಟಿದ್ದಾರೆ.

@namo_vishu_m ಎಂಬ ಇನ್ಸ್ಟಾಗ್ರಾಮ್ ಪೇಜ್ ಅಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಅಜ್ಜಮ್ಮ ತಾಳಿಯ ಮಹತ್ವ ಹಾಗೂ ಅದರ ವಿಶೇಷತೆಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿರುವ ಸುಂದರ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವೈರಲ್ ವಿಡಿಯೋದಲ್ಲಿ ಅಜ್ಜಮ್ಮ,  ಮುತ್ತೈದೆಯರು ತಾಳಿಯನ್ನು ಬಿಚ್ಚಿಡಬಾರದು. ಒಂದು ವೇಳೆ ತಾಳಿ ಕಳೆದು ಹೋದ್ರೆ, ಆ ತಾಳಿಯನ್ನು ಮತ್ತೆ ತಂದು ಕೊರಳಿಗೆ  ಹಾಕುವವರೆಗೆ ಊಟ ಮಾಡುವ ಹಾಗಿಲ್ಲ. ಹಾಗೂ ಹೊಸ ಮಂಗಳಸೂತ್ರವನ್ನು ತಂದ್ರೆ ಅದನ್ನು ದೇವರ ಬಳಿಯಿಟ್ಟು ಪೂಜಿಸಿ, ಗಂಡ, ಹೆಂಡತಿಯ ಕುತ್ತಿಗೆಗೆ ಆ ಮಂಗಳಸೂತ್ರವನ್ನು ಕಟ್ಟಬೇಕು. ಮುತ್ತೈದೆಯರಿಗೆ ಕರಮಣಿ ಸರ ಮತ್ತು ಕಾಲುಂಗುರವೇ ಶೋಭೆ. ವಿವಾಹಿತ ಮಹಿಳೆ  ಕರಿಮಣಿಯನ್ನು ಧರಿಸದೆ  ಎಷ್ಟೆ ಚಿನ್ನ ಒಡವೆ ಹಾಕಿದ್ರೂ  ಆಕೆ ಸುಂದರವಾಗಿ ಕಾಣೊಲ್ಲ. ತಾಳಿಯೇ ಆಕೆಗೆ ಲಕ್ಷಣ  ಅಂತ  ತಾಳಿಯ ಮಹತ್ವವನ್ನು ವಿವರಿಸುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅರೇ ಏನಿದು ವಿಚಿತ್ರ! ಜೀವಂತ ಹಾವನ್ನೇ ನುಂಗಿದ ಕಪ್ಪೆರಾಯ 

ಡಿಸೆಂಬರ್ 30 ರಂದು ಹಂಚಿಕೊಳ್ಳಲಾದ  ಈ ವಿಡಿಯೋ  ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತಾಳಿಯ ಮಹತ್ವವನ್ನು ಚೆನ್ನಾಗಿ ವಿವರಿಸಿದ್ದೀರಾʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಗಿನ ಕಾಲದ ಹೆಣ್ಣು ಮಕ್ಕಳಿಗೆ ನಿಮ್ಮಂತವರ ಮಾರ್ಗದರ್ಶನದ ಅವಶ್ಯಕತೆಯಿದೆʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ನೀವು ಹೇಳಿದ ಮಾತು ನಿಜ ಅಮ್ಮಾ  ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?