AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಆನೆ ಇಲ್ಲಿ ಮಾಡಿದ್ದೇನು ಮತ್ತು ಓಡಿಹೋಗಿದ್ದು ಏಕೆ?

Wildlife : ಸದ್ಯ, ಈ ಜೀಪಿನೊಳಗೆ ಅರಣ್ಯ ಸಿಬ್ಬಂದಿ ಇರಲಿಲ್ಲ ಎನ್ನುವುದೊಂದೇ ಸಮಾಧಾನ. ಆದರೆ ಈ ಮುದ್ದಾನೆಗೆ ಇದು ಆಟಿಕೆಯಂತೆ ಕಂಡಿತ್ತೋ? ಅಥವಾ ಯಾವುದಕ್ಕಾದರೂ ಕೋಪ ಬಂದಿತ್ತೋ? ನೋಡಿ ನಿಮಗೇನಾದರೂ ಅರ್ಥವಾಗುವುದೋ?

Viral Video: ಈ ಆನೆ ಇಲ್ಲಿ ಮಾಡಿದ್ದೇನು ಮತ್ತು ಓಡಿಹೋಗಿದ್ದು ಏಕೆ?
ಹೇಗಿದೆ ನನ್ನ ಹೊಸ ಆಟಿಕೆ?
ಶ್ರೀದೇವಿ ಕಳಸದ
|

Updated on:Aug 04, 2023 | 11:49 AM

Share

Elephant: ಈ ಜೀಪ್, ಆನೆಗೆ ಆಟಿಕೆಯಂತೆ (Toy) ಕಂಡಿದೆಯೋ ಅಥವಾ ನನ್ನ ಜಾಗದಲ್ಲಿ ನೀವ್ಯಾಕೆ ಗಾಡಿ ನಿಲ್ಲಿಸಿದ್ದೀರಿ ಎಂದು ಗಲಾಟೆ ಮಾಡಿದೆಯೋ ಅಥವಾ ಸರಿಯಾಗಿ ಬಾಗಿಲು ಮುಚ್ಚಲು ಬರುವುದಿಲ್ಲವೇ ನಿಮಗೆ? ಎಂದು ಜೊರು ಮಾಡಿದೆಯೋ ಅಥವಾ ಇನ್ನೂ ಯಾವುದಾದರೂ ಕಿಟಕಿ ಗಾಜು ಉಳಿದಿದೆಯೋ ಎಂದು ಪರೀಕ್ಷಿಸಿದೆಯೋ ಗೊತ್ತಾಗುತ್ತಿಲ್ಲ. ಮಾಡುವುದೆಲ್ಲ ಮಾಡಿ ಓಡಿ ಬೇರೆ ಹೋಗಿದೆ ಈ ಮುದ್ದಾದ ಪುಂಡಾನೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಇದರದೇ ಗುಲ್ಲು. ನೋಡಿ ನಿಮಗೇನಾದರೂ ಇದರ ವರ್ತನೆ ಅರ್ಥವಾಗುವುದೆ?

ಐಎಫ್​ಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಅದೃಷ್ಟಕ್ಕೆ ಈ ಆನೆ ಈ ಜೀಪ್​ ಅನ್ನು ಡಿಕ್ಕಿ ಹೊಡೆಯುವಾಗ ಅರಣ್ಯ ಸಿಬ್ಬಂದಿ ಒಳಗೆ ಯಾರೂ ಇರಲಿಲ್ಲ. ಈ ವಿಡಿಯೋ ಅನ್ನು ಈತನಕ 1 ಲಕ್ಷಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. ಈತನಕ ಸುಮಾರು 2,000 ಜನರು ಲೈಕ್​ ಮಾಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : Viral Video: ಮುಂಬೈ; ‘ಡ್ಯಾನ್ಸ್ ನಿಲ್ಲಿಸಿದರೆ ಮಾತ್ರ ಪ್ರಮಾಣಪತ್ರ’ ಪ್ರಾಧ್ಯಾಪಕರ ತಾಕೀತು

ಬಾಗಿಲು ಮುಚ್ಚಿದೆಯೋ ಇಲ್ಲವೋ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತಿದ್ದಾರೆ ಸಾಹೇಬರು ಎಂದಿದ್ದಾರೆ ಒಬ್ಬರು. ಯಾಕೆ ಇವರು ಬಾಗಿಲನ್ನು ಮುರಿಯುತ್ತಿದ್ದಾರೆ ಎಂದು ಇನ್ಬೊಬ್ಬರು. ಸುರಕ್ಷತೆಗಾಗಿ ಬಾಗಿಲುಗಳನ್ನು ಮುಚ್ಚಬೇಕು ಎಂದು ಹೇಳುತ್ತಿದ್ದಾರೆ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಟವಾಡ್ತಾ ಇದೆ ಮಗು ಎಂದು ಮಗದೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ : Viral Video: ದೆಹಲಿ ಮೆಟ್ರೋ; ಈ ಮಹಿಳೆಗೆ ತುರ್ತು ಸಹಾಯ ಬೇಕಿದೆ

ಅವನಿಗೆ ಒಂದು ಹಾಟ್​ ವೀಲ್​ ಅನ್ನು ಗಿಫ್ಟ್​ ಕೊಟ್ಟಿದ್ದೀರಿ ಎಂದುಕೊಂಡು ಅವನು ಆರಾಮಾಗಿ ಆಟವಾಡುತ್ತಿದ್ದಾನೆ ಎಂದಿದ್ದಾರೆ ಒಬ್ಬರು. ಈ ವಿಡಿಯೋ ನೋಡಿದ ನಿಮಗೆ ಏನೆನ್ನಿಸಿತು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:48 am, Fri, 4 August 23

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ