AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ

ಗುಜರಾತ್‌ನ ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರ 10ನೇ ತರಗತಿಯಲ್ಲಿ ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36 ಮತ್ತು ವಿಜ್ಞಾನದಲ್ಲಿ 38 ಅಂಕ ಪಡೆದಿದ್ದಾರೆ. ನಂಬಲು ಆಶ್ಚರ್ಯವಾದರು ಇದು ಸತ್ಯ

Viral Photo: ಈ ಜಿಲ್ಲಾಧಿಕಾರಿಯ 10ನೇ ತರಗತಿ ಅಂಕಪಟ್ಟಿ ನೋಡಿದರೆ ನೀವು ಆಶ್ಚರ್ಯ ಪಡುತ್ತೀರಿ
ಜಿಲ್ಲಾಧಿಕಾರಿಯೊಬ್ಬರ ಅಂಕಪಟ್ಟಿ
TV9 Web
| Edited By: |

Updated on:Jun 13, 2022 | 11:04 PM

Share

ನಾವು ಶಾಲಾ-ಕಾಲೇಜುಗಳಲ್ಲಿ ಪಡೆದುಕೊಂಡ ಅಂಕಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾಗುತ್ತವೆ. ಹಾಗೇ ಕೆಲವೊಂದು ಸಲ ಅನಿಸುತ್ತದೆ, ಶಾಲಾ-ಕಾಲೇಜಿನ ಅಂಕಗಳುಉಪಯೋಗವಾಗುವುದಿಲ್ಲ ಎಂದು. ಈ ತಳಕಾಟದ ನುಡುವೆಯೂ ಹೆಚ್ಚಿನ ಅಂಕ ಪಡೆದು ಉನ್ನತ ಹುದ್ದೆ ಅಥವಾ ಇನ್ನಾವುದರಲ್ಲಿ ಸಾಧನೆ ಮಾಡಿದವರನ್ನು ನೋಡಿದ್ದೇವೆ. ಮತ್ತು ಕಡಿಮೆ ಅಂಕ ಪಡೆದು, ಸಾಧಾರಣ ಪಾಸ್​ ಅಥವಾ ಫೇಲ್​​ ಆದವರು ಕೂಡಾ ಸಾಧನೆಯನ್ನು ಮಾಡಿದ್ದನ್ನು ನೋಡಿದ್ದೇವೆ. ಇಬ್ಬರು ನಮಗೆ ಆದರ್ಶಪ್ರಾಯಗಳೆ. ಆದರೆ ಒಂದನ್ನು ನಾವು ನೆನಪಿಟ್ಟುಕೊಳ್ಳಬೇಕು  ಸಾಧಿಸುವ ಛಲ ನಮಲ್ಲಿ ಇದ್ದರೆ ಮಾತ್ರ ನಾವು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಈಗ ಯಾಕೆ ಈ ಹೇಳುತ್ತಿದ್ದೇನೆ ಅಂದರೆ ನಮ್ಮ ಈ ಸುದ್ದಿಯಲ್ಲಿ ಬರುವ ಒಬ್ಬ ಸಾಧಕರ ಮಾರ್ಕ್ಸ್​ ಕಾರ್ಡ್​​ ನೋಡಿದರೆ ನಿಮಗೆ ಆಶ್ಚರ್ಯವಾಗುತ್ತದೆ.

ಇದನ್ನು ಓದಿ: ಇಂಟರ್ನೆಟ್ ಎಕ್ಸ್ಪ್ಲೋರರ್​​ ಇನ್ನು ನೆನಪು ಮಾತ್ರ; ಸ್ಥಗಿತಗೊಳ್ಳಲಿದೆ ಇಂಟರ್ನೆಟ್ ಎಕ್ಸ್ಪ್ಲೋರರ್​​ ಕಾರ್ಯ

ಗುಜರಾತ್‌ನ (Gujarat) ಭರೂಚ್‌ನ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರ 10ನೇ ತರಗತಿಯಲ್ಲಿ (SSLC) ಇಂಗ್ಲಿಷ್‌ನಲ್ಲಿ 35, ಗಣಿತದಲ್ಲಿ 36 ಮತ್ತು ವಿಜ್ಞಾನದಲ್ಲಿ 38 ಅಂಕ ಪಡೆದಿದ್ದಾರೆ. ನಂಬಲು ಆಶ್ಚರ್ಯವಾದರು ಇದು ಸತ್ಯ ಸ್ವತಃ ಜಿಲ್ಲಾಧಿಕಾರಿ ತುಷಾರ್ ಡಿ ಸುಮೇರಾ ಅವರು ತಮ್ಮ 10ನೇ ತರಗತಿಯ ಮಾರ್ಕ್ಸ್ ಕಾರ್ಡ್​ನ (SSLC Marks Card) ಚಿತ್ರವನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. ಕಾರಣ ಗುಜರಾತನಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಹೊರಬೀಳಲಿದ್ದು, ಈ ಸಂಬಂಧ ವಿದ್ಯಾರ್ಥಿಗಳಿಗೆ ದೈರ್ಯ ಹೇಳಲು ತಮ್ಮ 10ನೇ ತರಗತಿಯ ಅಂಕಪಟ್ಟಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ‘ಪಸೂರಿ’ ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!

ಸ್ವಲ್ಪ ಮಸುಕಾಗಿರುವ ರಿಪೋರ್ಟ್ ಕಾರ್ಡ್‌ನೊಂದಿಗೆ ಸುಮೇರಾ ಅವರ ಚಿತ್ರವನ್ನು ಛತ್ತೀಸ್‌ಗಢ ಕೇಡರ್‌ನ 2009 ಬ್ಯಾಚ್‌ನ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 100ರಲ್ಲಿ ಇಂಗ್ಲಿಷ್‌ನಲ್ಲಿ 35 ಮತ್ತು ಗಣಿತದಲ್ಲಿ 36 ಅಂಕಗಳನ್ನು ಪಡೆದರು. ಇಡೀ ಹಳ್ಳಿಯಲ್ಲಿ ಮಾತ್ರವಲ್ಲದೆ ಅವರ ಶಾಲೆಯಲ್ಲೂ ಅವರು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು, ”ಎಂದು ಪೋಸ್ಟ್​ನಲ್ಲಿ ಬರೆದಿಕೊಂಡಿದ್ದಾರೆ.

ಮೈಕ್ರೋ-ಬ್ಲಾಗಿಂಗ್ ಸೈಟ್‌ನಲ್ಲಿ ತಮ್ಮ ಪೋಸ್ಟ್‌ಗಾಗಿ ತುಷಾರ್ ಸುಮೇರಾ ಶರಣ್‌ಗೆ ಧನ್ಯವಾದ ಹೇಳಿದರು. ಸುಮೇರಾ 2012 ರಲ್ಲಿ IAS ಅಧಿಕಾರಿಯಾದರು. ಅವರು ಆರ್ಟ್ಸ್ ಸ್ಟ್ರೀಮ್‌ನಲ್ಲಿ ಪದವಿಯನ್ನು ಪೂರ್ಣಗೊಳಿಸಿದರು ಮತ್ತು UPSC ಪರೀಕ್ಷೆಯಲ್ಲಿ ತೇರ್ಗಡೆಯಾದರು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:04 pm, Mon, 13 June 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ