Viral Video: ರೊಚ್ಚಿಗೆದ್ದ ಯುವತಿ – ಬರೋಬ್ಬರಿ 20 ಮಂದಿಗೆ ಬಾರಿಸಿಬಿಸಾಕಿದಳು!

ಗುಲಾಬಿ ಬಣ್ಣದ ಹೂಡಿ (ಪುಲ್ ಓವರ್​​) ಧರಿಸಿರುವ ಹುಡುಗಿಯೊಬ್ಬಳು ಅಷ್ಟೊಂದು ಯುವತಿಯರನ್ನು ಏಕಾಂಗಿಯಾಗಿ ಎದುರಿಸುತ್ತಿರುವ ಬಗೆಯನ್ನು ನೋಡಿ, ನೆಟಿಜನ್‌ಗಳು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

Viral Video: ರೊಚ್ಚಿಗೆದ್ದ ಯುವತಿ - ಬರೋಬ್ಬರಿ 20 ಮಂದಿಗೆ ಬಾರಿಸಿಬಿಸಾಕಿದಳು!
ವೈರಲ್ ವಿಡಿಯೋ: ರೊಚ್ಚಿಗೆದ್ದ ಯುವತಿ
ಸಾಧು ಶ್ರೀನಾಥ್​

Updated on: Jun 21, 2023 | 12:58 PM

ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ವಿಡಿಯೋಗಳು ಸದಾ ವೈರಲ್ (Viral Video) ಆಗುತ್ತಲೇ ಇರುತ್ತವೆ. ಜಗತ್ತಿನಲ್ಲಿ ಎಲ್ಲಿ ಏನೇ ನಡೆದರೂ ತಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ವಿಡಿಯೋಗಳಿಗೆ ಉತ್ತಮ ಬೇಡಿಕೆಯೂ ಇದೆ. ಇತ್ತೀಚಿಗೆ ಇಂತಹದೊಂದು ವಿಡಿಯೋ ಹೊರಬಿದ್ದಿದ್ದು, ಇದೀಗ ವೈರಲ್ ಆಗಿದೆ. ಹೊಡೆದಾಟಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳನ್ನು ನೋಡುತ್ತೇವೆ. ಆದರೆ ಈ ವಿಡಿಯೋ ನಿಜಕ್ಕೂ ಶಾಕಿಂಗ್ ಆಗಿದೆ. ಈ ವಿಡಿಯೋದಲ್ಲಿ ಹುಡುಗಿಯರು ಹುಚ್ಚಾಪಟ್ಟೆ ಬಡಿದಾಡಿಕೊಂಡಿದ್ದಾರೆ (Attack). ರೊಚ್ಚಿಗೆದ್ದ ಒಬ್ಬೇಒಬ್ಬ ಯುವತಿಯಂತೂ (Girl) – ಬರೋಬ್ಬರಿ 20 ಮಂದಿಗೆ ಬಾರಿಸಿಬಿಸಾಕಿದ್ದಾಳೆ (Brawl)! ಈ ವಿಡಿಯೋದಲ್ಲಿರುವ ಘಟನೆ ಎಲ್ಲಿ ನಡೆದಿದೆಯೋ ಗೊತ್ತಿಲ್ಲ, ಆದರೆ ಈ ವಿಡಿಯೋ ಭಾರೀ ಸದ್ದು ಮಾಡುತ್ತಿದೆ.

ಈ ವಿಡಿಯೋದಲ್ಲಿ ತೋರಿಸಿರುವಂತೆ ಮೊದಮೊದಲು ಹುಡುಗಿಯರ ಗುಂಪೊಂದು ಒಬ್ಬೇ ಒಬ್ಬ ಹುಡುಗಿಯ ಜೊತೆ ಜಗಳವಾಡುತ್ತದೆ. ಆದರೆ ಆ ಹುಡುಗಿ ಮಾತ್ರ ರೊಚ್ಚಿಗೆದ್ದು ತನ್ನ ಮೇಲೆ ದಾಳಿ ಮಾಡಿದವರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದಾಳೆ.

ಗುಲಾಬಿ ಬಣ್ಣದ ಹೂಡಿ (ಪುಲ್ ಓವರ್​​) ಧರಿಸಿರುವ ಹುಡುಗಿಯೊಬ್ಬಳು ಅಷ್ಟೊಂದು ಯುವತಿಯರನ್ನು ಏಕಾಂಗಿಯಾಗಿ ಎದುರಿಸುತ್ತಿರುವ ಬಗೆಯನ್ನು ನೋಡಿ, ನೆಟಿಜನ್‌ಗಳು ನಾನಾ ರೀತಿಯ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.

Also read:  Viral: ಈ ಬಂಧನ… ವರದಕ್ಷಿಣೆ ಕೇಳಿದ ವರನಿಗೆ ಹಗ್ಗದ ಅನುಬಂಧನ

ಈ ವಿಡಿಯೋದಲ್ಲಿ ಜಗಳವಾಡಿದ ಯುವತಿಯನ್ನು ನೆಟಿಜನ್‌ಗಳು ಆಕೆಯನ್ನು ವಂಡರ್ ವುಮನ್‌ಗೆ ಹೋಲಿಸುತ್ತಿದ್ದಾರೆ. ಅಂತಹ ಧೈರ್ಯ ಪ್ರತಿಯೊಬ್ಬ ಮಹಿಳೆಗೂ ಇರಬೇಕು ಎಂದು ಹೇಳಿದ್ದಾರೆ. ಈ ವೀಡಿಯೊವನ್ನು ಜೂನ್ 12 ರಂದು ಅಪ್‌ಲೋಡ್ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ 4,00,000 ಕ್ಕೂ ಹೆಚ್ಚು ವೀಕ್ಷಣೆಗಳು, ಲಕ್ಷಾಂತರ ಕಾಮೆಂಟ್‌ಗಳೂ ಬರುತ್ತಿವೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us