AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕುಂದದ ಜೀವನೋತ್ಸಾಹ; 76 ರ ಹರೆಯದಲ್ಲೂ ವಾಚ್ ರಿಪೇರಿ ಮಾಡಿ ನೆಮ್ಮದಿ ಜೀವನ ಸಾಗಿಸುತ್ತಿರುವ ವ್ಯಕ್ತಿ

ಮಾಡುವ ಕೆಲಸದಲ್ಲಿ ಶ್ರದ್ಧೆಯಿದ್ದರೆ ಬದುಕು ನಮ್ಮನ್ನು ಎಲ್ಲಿಗೋ ಕೊಂಡ್ಯೊಯುತ್ತದೆ. ಇದಕ್ಕೆ ಈ ಹಿರಿಜೀವವೇ ಉದಾಹರಣೆ. ವಾಚ್ ರಿಪೇರಿ ಮಾಡಿ ಬದುಕು ಕಟ್ಟಿಕೊಂಡಿರುವ ಈ ವ್ಯಕ್ತಿಯೂ ಎಲ್ಲರಿಗೂ ಸ್ಫೂರ್ತಿ. ತಮ್ಮ ಇಳಿ ವಯಸ್ಸಿನಲ್ಲೂ ಬದುಕಿಗೆ ಆಸರೆಯಾಗಿರುವ ಈ ಕಾಯಕವನ್ನು ಮಾಡುತ್ತಾ ಖುಷಿ ಕಾಣುವ ಈ ವೃದ್ಧ ವ್ಯಕ್ತಿಯ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

Video: ಕುಂದದ ಜೀವನೋತ್ಸಾಹ; 76 ರ ಹರೆಯದಲ್ಲೂ ವಾಚ್ ರಿಪೇರಿ ಮಾಡಿ ನೆಮ್ಮದಿ ಜೀವನ ಸಾಗಿಸುತ್ತಿರುವ ವ್ಯಕ್ತಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Dec 02, 2025 | 6:27 PM

Share

ಬದುಕೇ (life) ಹಾಗೇ, ಇದ್ದರಲ್ಲೇ ಖುಷಿ ಕಾಣಬೇಕು. ಕೆಲಸ ಯಾವುದೇ ಇರಲಿ,ಪ್ರಾಮಾಣಿಕತೆಯಿಂದ ಮಾಡಿದ್ರೆ ಫಲ ಖಂಡಿತ ಸಿಗುತ್ತದೆ. ವೃದ್ಧ ವ್ಯಕ್ತಿಯೊಬ್ಬರು ಕಳೆದ 50 ವರ್ಷಗಳಿಂದ ವಾಚ್ ರಿಪೇರಿ (watch repair) ಮಾಡುವ ಕಾಯಕವನ್ನೇ ನೆಚ್ಚಿಕೊಂಡಿದ್ದಾರೆ. ಈ ಕೆಲಸವು ಇವರನ್ನು ಕೈ ಹಿಡಿದು ಮುನ್ನಡೆಸಿದೆ. 76ರ ಹರೆಯದಲ್ಲೂ ವ್ಯಕ್ತಿಯೊಬ್ಬರು ವಾಚ್ ರಿಪೇರಿ ಮಾಡುತ್ತಿರುವ ವಿಡಿಯೋ ಇದಾಗಿದೆ. ವೃದ್ಧ ವ್ಯಕ್ತಿಯ ಜೀವನೋತ್ಸಾಹವನ್ನು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

ashirth_m_shivashankar ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋಗೆ 76 ವರ್ಷದ ಗಡಿಯಾರ ತಿದ್ದುಗಾರರು (ವಾಚ್ ರಿಪೇರಿ) ಕಳೆದ 50 ವರ್ಷಗಳಿಂದ ಅದೇ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದಾರೆ. ಅವರು ಜೀವನವನ್ನು ಸಂತೋಷದಿಂದ ನಡೆಸುತ್ತಿದ್ದಾರೆ. ಅವರ ಶ್ರಮ ಮತ್ತು ನಿಷ್ಠೆಯಿಂದ ಅವರು ಬೆಂಗಳೂರಿನ ಸಂಜಯ್ ನಗರದಲ್ಲಿ ಒಂದು ಸೈಟ್ ಖರೀದಿಸಿ, ತಮ್ಮದೇ ಮನೆ ಕಟ್ಟಿಕೊಂಡಿದ್ದಾರೆ. ಇಂತಹವರು ನಿಜವಾದ ಪ್ರೇರಣೆ – ಶ್ರಮ ಮತ್ತು ಆತ್ಮನಿಷ್ಠೆಯಿಂದ ಯಶಸ್ಸು ಸಾಧಿಸಿದ ಒಬ್ಬ ಮಾದರಿ ವ್ಯಕ್ತಿ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋದಲ್ಲಿ ವೃದ್ಧ ವ್ಯಕ್ತಿಯೊಬ್ಬರು ವಾಚ್ ರಿಪೇರಿ ಕೆಲಸದಲ್ಲಿ ತಲ್ಲೀನರಾಗಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ಇದನ್ನೂ ಓದಿ:ಹಸಿವು ನೀಗಿಸಿ, ಬಟ್ಟೆ ಕೊಡಿಸಿ ವೃದ್ಧೆಯ ಪಾಲಿಗೆ ದೇವರಾದ ಯುವಕ

ಈ ವಿಡಿಯೋ ಇದುವರೆಗೆ ಐವತ್ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಿಜ ಸರ್ ನಿಮ್ಮ ಮಾತು. ನಾವು ಅಂತಹವರಿಂದ ಕಲಿಬೇಕು ಎಂದು ಹೇಳಿದ್ದಾರೆ. ಇನ್ನೊಬ್ಬರು, ನಮ್ಮ ಶಿವಮೊಗ್ಗದವರು ಎಂದರೆ ಮತ್ತೆ ಕೆಲವರು ಹಾರ್ಟ್ ಸಿಂಬಲ್ ಕಳುಹಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ