AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಗಂಟೆಗಳ ಕಾಲ ರೆಫ್ರಿಜರೇಟರ್‌ನಲ್ಲಿ ಆಶ್ರಯ ಪಡೆದು ಭೂಕುಸಿತದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ

ಬಾಕನನ್ನು ಸುರಕ್ಷಿತವಾಗಿ ಹೊರ ತೆಗೆದ ನಂತರ ಆತ ಮೊದಲು ಹೇಳಿದ್ದು ನನಗೆ ಹಸಿವಾಗಿದೆ ಎಂದು. ಅವರ ಕುಟುಂಬ ಮತ್ತು ಸ್ನೇಹಿತರು ಎಲ್ಲಿದ್ದಾರೆ ಎಂದು ಕೇಳಿದಾಗ, ನಾನು ಒಬ್ಬನೇ ಉಳಿದಿದ್ದೇನೆ, ನನ್ನೊಂದಿಗೆ ಯಾರೂ ಇಲ್ಲ ಎಂದು ಹೇಳಿದ್ದಾನೆ.

20 ಗಂಟೆಗಳ ಕಾಲ ರೆಫ್ರಿಜರೇಟರ್‌ನಲ್ಲಿ ಆಶ್ರಯ ಪಡೆದು ಭೂಕುಸಿತದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ
ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 23, 2022 | 7:42 PM

ವೈರಲ್ ನ್ಯೂಸ್: ಫಿಲಿಪ್ಪೀನ್ಸ್​ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 11 ವರ್ಷದ ಬಾಲಕನೊಬ್ಬ ಇಡೀ ದಿನ ರೆಫ್ರಿಜರೇಟರ್​ನಲ್ಲಿ ಆಶ್ರಯ ಪಡೆದು ಪವಾಡ ಸದೃಶ್ಯ (Miraculously) ರೀತಿಯಲ್ಲಿ ಬದುಕುಳಿದಿದ್ದಾನೆ. ಶುಕ್ರವಾರದಂದು ಫಿಲಿಪೈನ್ಸ್‌ನ ಬೇಬೇ ಸಿಟಿಯಲ್ಲಿ ಸಿಜೆ ಜಾಸ್ಮೆ ಎಂದು ಗುರುತಿಸಲಾದ ಫಿಲಿಪಿನೋ ಹುಡುಗ ತನ್ನ ಕುಟುಂಬದೊಂದಿಗೆ ಮನೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಉಷ್ಣವಲಯದ ಚಂಡಮಾರುತದ ಮೆಗಿ ತಂದ ಭೂಕುಸಿತದಿಂದ ಮಣ್ಣಿನ ಭಾರೀ ಪ್ರವಾಹವು ಅವನ ಮನೆಗೆ ನುಗ್ಗಿತು. ಚಂಡಮಾರುತದಿಂದ ಪಾರಾಗಲು ಹುಡುಗ ತ್ವರಿತವಾಗಿ ರೆಫ್ರಿಜರೇಟರ್ ಒಳಗೆ ಅಡಗಿಕುಳಿತಿದ್ದಾನೆ. ಅವನು ಅದರೊಳಗೆ 20 ಗಂಟೆಗಳ ಕಾಲ ಅದರಲ್ಲಿ ಆಶ್ರಯ ಪಡೆದಿದ್ದಾನೆ. ಸ್ಥಳೀಯ ಸುದ್ದಿ ವಾಹಿನಿ ವರದಿಯ ಪ್ರಕಾರ, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸಿಜೆ ಹಸ್ಮೆ ಎಂದು ಗುರುತಿಸಲಾದ ಹುಡುಗ ರೆಫ್ರಿಜರೇಟರ್‌ನಲ್ಲಿ ಮಲಗಿರುವುದನ್ನು ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅವನ ಕಾಲು ಮುರಿದಿದ್ದು, ಆದರೆ ಅವನು ಸಂಪೂರ್ಣ ಪವಾಡ ಸದೃಶ್ಯ ಎನ್ನುವಂತೆ ಬದುಕುಳಿದಿದ್ದಾನೆ. ಘಟನೆಯ ಚಿತ್ರಗಳು ಮತ್ತು ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. ಡಬಲ್-ಡೋರ್ ಫ್ರಿಜ್ನ್​ ಒಳಗೆ ಮಲಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಳವಾದ ಕೆಸರಿನಲ್ಲಿ ಸಿಲುಕಿ ರಾತ್ರಿಯನ್ನು ಕಳೆದ ನಂತರ ಅವನನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

ಬಾಕನನ್ನು ಸುರಕ್ಷಿತವಾಗಿ ಹೊರ ತೆಗೆದ ನಂತರ ಆತ ಮೊದಲು ಹೇಳಿದ್ದು ನನಗೆ ಹಸಿವಾಗಿದೆ ಎಂದು. ಅವರ ಕುಟುಂಬ ಮತ್ತು ಸ್ನೇಹಿತರು ಎಲ್ಲಿದ್ದಾರೆ ಎಂದು ಕೇಳಿದಾಗ, ನಾನು ಒಬ್ಬನೇ ಉಳಿದಿದ್ದೇನೆ, ನನ್ನೊಂದಿಗೆ ಯಾರೂ ಇಲ್ಲ ಎಂದು ಹೇಳಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಬಾಲಕನ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಹುಡುಗನ ತಾಯಿ ಮತ್ತು ಕಿರಿಯ ಸಹೋದರ ಕಾಣೆಯಾಗಿದ್ದಾರೆ ಮತ್ತು ಅವನ ತಂದೆ ಮತ್ತೊಂದು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:

ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ: ರೇವಣ್ಣ

RCB vs SRH Playing XI IPL 2022: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಆರ್​​ಸಿಬಿ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

Published On - 7:40 pm, Sat, 23 April 22

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ