AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಗಂಟೆಗಳ ಕಾಲ ರೆಫ್ರಿಜರೇಟರ್‌ನಲ್ಲಿ ಆಶ್ರಯ ಪಡೆದು ಭೂಕುಸಿತದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ

ಬಾಕನನ್ನು ಸುರಕ್ಷಿತವಾಗಿ ಹೊರ ತೆಗೆದ ನಂತರ ಆತ ಮೊದಲು ಹೇಳಿದ್ದು ನನಗೆ ಹಸಿವಾಗಿದೆ ಎಂದು. ಅವರ ಕುಟುಂಬ ಮತ್ತು ಸ್ನೇಹಿತರು ಎಲ್ಲಿದ್ದಾರೆ ಎಂದು ಕೇಳಿದಾಗ, ನಾನು ಒಬ್ಬನೇ ಉಳಿದಿದ್ದೇನೆ, ನನ್ನೊಂದಿಗೆ ಯಾರೂ ಇಲ್ಲ ಎಂದು ಹೇಳಿದ್ದಾನೆ.

20 ಗಂಟೆಗಳ ಕಾಲ ರೆಫ್ರಿಜರೇಟರ್‌ನಲ್ಲಿ ಆಶ್ರಯ ಪಡೆದು ಭೂಕುಸಿತದಿಂದ ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ
ಪವಾಡ ಸದೃಶ ರೀತಿಯಲ್ಲಿ ಬದುಕುಳಿದ 11 ವರ್ಷದ ಫಿಲಿಪೈನ್ಸ್ ಬಾಲಕ
TV9 Web
| Edited By: |

Updated on:Apr 23, 2022 | 7:42 PM

Share

ವೈರಲ್ ನ್ಯೂಸ್: ಫಿಲಿಪ್ಪೀನ್ಸ್​ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 11 ವರ್ಷದ ಬಾಲಕನೊಬ್ಬ ಇಡೀ ದಿನ ರೆಫ್ರಿಜರೇಟರ್​ನಲ್ಲಿ ಆಶ್ರಯ ಪಡೆದು ಪವಾಡ ಸದೃಶ್ಯ (Miraculously) ರೀತಿಯಲ್ಲಿ ಬದುಕುಳಿದಿದ್ದಾನೆ. ಶುಕ್ರವಾರದಂದು ಫಿಲಿಪೈನ್ಸ್‌ನ ಬೇಬೇ ಸಿಟಿಯಲ್ಲಿ ಸಿಜೆ ಜಾಸ್ಮೆ ಎಂದು ಗುರುತಿಸಲಾದ ಫಿಲಿಪಿನೋ ಹುಡುಗ ತನ್ನ ಕುಟುಂಬದೊಂದಿಗೆ ಮನೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ. ಉಷ್ಣವಲಯದ ಚಂಡಮಾರುತದ ಮೆಗಿ ತಂದ ಭೂಕುಸಿತದಿಂದ ಮಣ್ಣಿನ ಭಾರೀ ಪ್ರವಾಹವು ಅವನ ಮನೆಗೆ ನುಗ್ಗಿತು. ಚಂಡಮಾರುತದಿಂದ ಪಾರಾಗಲು ಹುಡುಗ ತ್ವರಿತವಾಗಿ ರೆಫ್ರಿಜರೇಟರ್ ಒಳಗೆ ಅಡಗಿಕುಳಿತಿದ್ದಾನೆ. ಅವನು ಅದರೊಳಗೆ 20 ಗಂಟೆಗಳ ಕಾಲ ಅದರಲ್ಲಿ ಆಶ್ರಯ ಪಡೆದಿದ್ದಾನೆ. ಸ್ಥಳೀಯ ಸುದ್ದಿ ವಾಹಿನಿ ವರದಿಯ ಪ್ರಕಾರ, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಸಿಜೆ ಹಸ್ಮೆ ಎಂದು ಗುರುತಿಸಲಾದ ಹುಡುಗ ರೆಫ್ರಿಜರೇಟರ್‌ನಲ್ಲಿ ಮಲಗಿರುವುದನ್ನು ಅಧಿಕಾರಿಗಳು ಕಂಡುಹಿಡಿದಿದ್ದಾರೆ. ಅವನ ಕಾಲು ಮುರಿದಿದ್ದು, ಆದರೆ ಅವನು ಸಂಪೂರ್ಣ ಪವಾಡ ಸದೃಶ್ಯ ಎನ್ನುವಂತೆ ಬದುಕುಳಿದಿದ್ದಾನೆ. ಘಟನೆಯ ಚಿತ್ರಗಳು ಮತ್ತು ವಿಡಿಯೋಗಳು ಸಾಕಷ್ಟು ವೈರಲ್ ಆಗಿವೆ. ಡಬಲ್-ಡೋರ್ ಫ್ರಿಜ್ನ್​ ಒಳಗೆ ಮಲಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಳವಾದ ಕೆಸರಿನಲ್ಲಿ ಸಿಲುಕಿ ರಾತ್ರಿಯನ್ನು ಕಳೆದ ನಂತರ ಅವನನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ.

ಬಾಕನನ್ನು ಸುರಕ್ಷಿತವಾಗಿ ಹೊರ ತೆಗೆದ ನಂತರ ಆತ ಮೊದಲು ಹೇಳಿದ್ದು ನನಗೆ ಹಸಿವಾಗಿದೆ ಎಂದು. ಅವರ ಕುಟುಂಬ ಮತ್ತು ಸ್ನೇಹಿತರು ಎಲ್ಲಿದ್ದಾರೆ ಎಂದು ಕೇಳಿದಾಗ, ನಾನು ಒಬ್ಬನೇ ಉಳಿದಿದ್ದೇನೆ, ನನ್ನೊಂದಿಗೆ ಯಾರೂ ಇಲ್ಲ ಎಂದು ಹೇಳಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು. ಬಾಲಕನ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಹುಡುಗನ ತಾಯಿ ಮತ್ತು ಕಿರಿಯ ಸಹೋದರ ಕಾಣೆಯಾಗಿದ್ದಾರೆ ಮತ್ತು ಅವನ ತಂದೆ ಮತ್ತೊಂದು ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:

ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ: ರೇವಣ್ಣ

RCB vs SRH Playing XI IPL 2022: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಆರ್​​ಸಿಬಿ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

Published On - 7:40 pm, Sat, 23 April 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!