AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಹಸಿರು ತುಂಬಿದ ತಮಿಳುನಾಡಿನ ರಸ್ತೆಯ ಫೋಟೋವನ್ನು ರೀ ಟ್ವೀಟ್​ ಮಾಡಿದ ಆನಂದ್​ ಮಹೀಂದ್ರಾ

ಟ್ವೀಟ್​ ಅನ್ನು ರೀಟ್ವಿಟ್​ ಮಾಡಿದ ಮಹಿಂದ್ರಾ ಕಂಪನಿಯ ಚೇರ್​ಮನ್​ ಆನಂದ್​ ಮಹೀಂದ್ರಾ ಎರಿಕ್, ನನ್ನ ಸ್ವಂತ ದೇಶದ ಬಗ್ಗೆ ನನಗೆ ಎಷ್ಟು ಕಡಿಮೆ ತಿಳಿದಿದೆ ಎಂದು ತೋರಿಸಿದ್ದೀರಿ. ಇದು ಅದ್ಭುತವಾಗಿದೆ. ಈ ರಸ್ತೆಯನ್ನು ಯಾರು ನಿರ್ಮಿಸಿದ್ದಾರೆಂದು ನಾನು ಕಂಡುಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ.

Viral Photo: ಹಸಿರು ತುಂಬಿದ ತಮಿಳುನಾಡಿನ ರಸ್ತೆಯ ಫೋಟೋವನ್ನು ರೀ ಟ್ವೀಟ್​ ಮಾಡಿದ ಆನಂದ್​ ಮಹೀಂದ್ರಾ
ಕೊಲ್ಲಿ ಹಿಲ್ಸ್ ರಸ್ತೆ
TV9 Web
| Edited By: |

Updated on:Jan 10, 2022 | 11:13 AM

Share

ಸುತ್ತಲೂ ಹರಡಿರುವ ಹಸಿರು ಮರಗಳ ನಡುವೆ ಸೀಳಿಕೊಂಡು ಸಾಗುವ ದಾರಿಯಲ್ಲಿ ಪ್ರಯಾಣಿಸುವುದೇ ಒಂದು ಅದ್ಭುತ ಅನುಭವ.  ವಿದೇಶಗಳಲ್ಲಿ ಪ್ರಯಾಣಿಸುವಾಗ ಸುತ್ತಲೂ ಕಾಣುವ ಹಸಿರು ಪರಿಸರವನ್ನು ಸಾಮಾನ್ಯವಾಗಿ ನೋಡುತ್ತೇವೆ. ಆದರೆ ಅದಕ್ಕಿಂತಲೂ ಅದ್ಭುತ ವಾದ ಪ್ರಯಾಣದ ಹಾದಿ ಭಾರತದಲ್ಲಿಯೇ ಸಾಕಷ್ಟಿದೆ. ಹಚ್ಚ ಹಸಿರ ಹೊದಿಕೆಯಿಂದ ಸಮೃದ್ಧವಾಗಿ ಆವರಿಸಿಕೊಂಡ ಪ್ರದೇಶದಲ್ಲಿ ಕಣ್ಣು ಹಾಯಿಸಿದಷ್ಟೂ ತಿರುವುಗಳನ್ನು ಕಾಣಬಹುದು ಅಂತಹ ಮಾರ್ಗವನ್ನು ಹೊಂದಿರುವ ಸುಂದರ ರಸ್ತೆಯನ್ನು ತಮಿಳುನಾಡಿನಲ್ಲಿ ಕಾಣಬಹುದು. ಸುಂದರ ಪ್ರಕೃತಿಯ ನಡುವೆ 70 ತಿರುವುಗಳನ್ನು ಹೊಂದಿರುವ ಅದ್ಭುತ ರಸ್ತೆ ಮಾರ್ಗದ ಫೋಟೊವೊಂದನ್ನು ಆನಂದ್​ ಮಹೀಂದ್ರಾ ರೀಟ್ವೀಟ್​ ಮಾಡಿದ್ದು ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಈ ಫೊಟೋವನ್ನು ನಾರ್ವೇಜಿಯನ್​​ ರಾಜತಾಂತ್ರಿಕ ಮತ್ತು ಮಾಜಿ ರಾಜಕಾರಣಿ ಎರಿಕ್ ಸೋಲ್ಹೈಮ್ ಎನ್ನುವವರು ಹಂಚಿಕೊಂಡಿದ್ದರು. ಈ ಫೋಟೋಗೆ ಎರಿಕ್​ ಅದ್ಭುತ ಭಾರತ!, ಅತ್ಯಂತ ಭಯಾನಕ ಹಾಗೂ ಅದ್ಭುತವಾದ 70 ತಿರುವುಗಳನ್ನು ಹೊಂದಿರುವ ತಮಿಳುನಾಡಿನ ನಾಮಕ್ಕಲ್​ನ ಕೊಲ್ಲಿ ಹಿಲ್ಸ್ ರಸ್ತೆಯ ನೋಟ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್​ ಅನ್ನು ರೀಟ್ವಿಟ್​ ಮಾಡಿದ ಮಹಿಂದ್ರಾ ಕಂಪನಿಯ ಚೇರ್​ಮನ್​ ಆನಂದ್​ ಮಹೀಂದ್ರಾ ಎರಿಕ್, ನನ್ನ ಸ್ವಂತ ದೇಶದ ಬಗ್ಗೆ ನನಗೆ ಎಷ್ಟು ಕಡಿಮೆ ತಿಳಿದಿದೆ ಎಂದು ತೋರಿಸಿದ್ದೀರಿ. ಇದು ಅದ್ಭುತವಾಗಿದೆ. ಈ ರಸ್ತೆಯನ್ನು ಯಾರು ನಿರ್ಮಿಸಿದ್ದಾರೆಂದು ನಾನು ಕಂಡುಹಿಡಿಯಬೇಕು ಎಂದು ಬರೆದುಕೊಂಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹಸಿರು ತುಂಬಿದ ರಸ್ತೆಯ ಫೋಟೋ ವೈರಲ್​ ಆಗಿದೆ.  ಪೋಟೋ ನೋಡಿದ ನೆಟ್ಟಿಗರು ಭಾರತದ ಸೌಂದರ್ಯವನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ. ಜನವರಿ 9 ರಂದು ಆನಂದ್​ ಮಹೀಂದ್ರಾ ಹಂಚಿಕೊಂಡ ಪೋಟೋ 12 ಸಾವಿರಕ್ಕೂ ಹೆಚ್ಚು ಲೈಕ್ಸ್​ ಗಳಿಸಿದ್ದು ಹಲವಾರು ಮಂದಿ ಕಾಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ:

ಪೊಲೀಸ್​ ಅವತಾರದ ಮೂಲಕ ಭಕ್ತರಿಗೆ ದರ್ಶನ ನೀಡಿದ ಕಾಶಿಯ ಕೊತ್ವಾಲ’ಬಾಬಾ ಕಾಲಭೈರವ’

Published On - 11:11 am, Mon, 10 January 22

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ