AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರುಮಯ ರಸ್ತೆಯಲ್ಲಿ ಪುಟ್ಟ ಬಾಲಕ ಟ್ರ್ಯಾಕ್ಟರ್ ಓಡಿಸುವ ವಿಡಿಯೋವನ್ನು ಹಂಚಿಕೊಂಡ ಆನಂದ್ ಮಹೀಂದ್ರಾ; ವಿಡಿಯೋ ವೈರಲ್

ನಿಮ್ಮ ಮಗುವಿನ ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಟ್ರಾಕ್ಟರ್​ನೊಂದಿಗೆ ಆಟವಾಡುವಾಗ ಮಕ್ಕಳ ಬಗ್ಗೆ ಜಾಗರೂಕರಾಗಿರಬೇಕು ಅಂತ ಕ್ಯಾಪ್ಶನ್ ಬರೆದು ಟ್ರಾಕ್ಟರ್​ನೊಂದಿಗೆ ಆಟವಾಡುವ ಮಗುವಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕೆಸರುಮಯ ರಸ್ತೆಯಲ್ಲಿ ಪುಟ್ಟ ಬಾಲಕ ಟ್ರ್ಯಾಕ್ಟರ್ ಓಡಿಸುವ ವಿಡಿಯೋವನ್ನು ಹಂಚಿಕೊಂಡ ಆನಂದ್ ಮಹೀಂದ್ರಾ; ವಿಡಿಯೋ ವೈರಲ್
ಟ್ರ್ಯಾಕ್ಟರ್ ಓಡಿಸುತ್ತಿರುವ ಪುಟ್ಟ ಬಾಲಕ
TV9 Web
| Edited By: sandhya thejappa|

Updated on:Dec 15, 2021 | 12:24 PM

Share

ಮಹೀಂದ್ರಾ ಗ್ರೂಪ್ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ಟ್ವಿಟರ್​ನಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ. ಅವರ ಕೆಲವೊಂದು ಹಾಸ್ಯಮಯ ಟ್ವೀಟ್​ಗಳು ಹೆಚ್ಚು ಜನಪ್ರಿಯತೆ ಗಳಿಸಿವೆ. ಜೊತೆಗೆ ವೈರಲ್ ಕೂಡಾ ಆಗಿವೆ. ಅದರಂತೆ ಭಾನುವಾರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪುಟ್ಟ ಬಾಲಕನೊಬ್ಬ ಕೆಸರುಮಯ ರಸ್ತೆಯಲ್ಲಿ ತನ್ನ ಪುಟ್ಟ ಟ್ರ್ಯಾಕ್ಟರ್​ನ ಓಡಿಸುವ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ.

ನಿಮ್ಮ ಮಗುವಿನ ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಟ್ರಾಕ್ಟರ್​ನೊಂದಿಗೆ ಆಟವಾಡುವಾಗ ಮಕ್ಕಳ ಬಗ್ಗೆ ಜಾಗರೂಕರಾಗಿರಬೇಕು ಅಂತ ಕ್ಯಾಪ್ಶನ್ ಬರೆದು ಟ್ರಾಕ್ಟರ್​ನೊಂದಿಗೆ ಆಟವಾಡುವ ಮಗುವಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮಹೀಂದ್ರಾ ಅವರು ಪೋಸ್ಟ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆನಂದ್ ಮಹೀಂದ್ರಾ ಅವರು ಇದೀಗೆ ಕೇವಲ ಉದ್ಯಮಿಯಾಗಿಲ್ಲ. ಯಶಸ್ವಿ ಉದ್ಯಮಿ ಜೊತೆಗೆ ಟ್ವಿಟರ್​ನಲ್ಲಿ ರಾಕ್ ಸ್ಟಾರ್ ಆಗಿದ್ದಾರೆ. ಬಾಲಕ ತನ್ನ ಪುಟ್ಟ ಆಟಿಕೆ ಟ್ರಾಕ್ಟರ್ ಸಹಾಯದಿಂದ ಮಣ್ಣಿನ ರಸ್ತೆಯಲ್ಲಿ ಸಿಲುಕಿರುವ ಅಗೆಯುವ ಯಂತ್ರವನ್ನು ಹೊರತೆಗೆಯಲು ಪ್ರಯತ್ನಿಸುತ್ತಿರುವ ಮುದ್ದಾದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಬಾಲಕ ತನ್ನ ಆಟಿಕೆ ಟ್ರ್ಯಾಕ್ಟರ್​ಗೆ ಅಗೆಯುವ ಯಂತ್ರವನ್ನು ಹಗ್ಗದಿಂದ ಕಟ್ಟಿ ಎಳೆಯಲು ಪ್ರಯತ್ನಿಸುತ್ತಿದ್ದಾನೆ. ಈ ವೇಳೆ ಅಗೆಯುವ ಯಂತ್ರದ ಚಾಲಕನೂ ಕೂಡಾ ಬಾಲಕನಿಗೆ ಪ್ರೋತ್ಸಾಹಿಸಲು ನಿಧಾನವಾಗಿ ಚಲಿಸುತ್ತಾನೆ.

ವಿಡಿಯೋ ಪೋಸ್ಟ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಸುಮಾರು 4.2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನ ಪಡೆದುಕೊಂಡಿದ್ದು, 30,000 ಲೈಕ್​ಗಳನ್ನು ಗಳಿಸಿದೆ.

ಇದನ್ನೂ ಓದಿ

Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್​ಗಳ ಡೆಲಿವರಿ ಇಂದಿನಿಂದ ಶುರು

ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

Published On - 12:23 pm, Wed, 15 December 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!