AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಸರುಮಯ ರಸ್ತೆಯಲ್ಲಿ ಪುಟ್ಟ ಬಾಲಕ ಟ್ರ್ಯಾಕ್ಟರ್ ಓಡಿಸುವ ವಿಡಿಯೋವನ್ನು ಹಂಚಿಕೊಂಡ ಆನಂದ್ ಮಹೀಂದ್ರಾ; ವಿಡಿಯೋ ವೈರಲ್

ನಿಮ್ಮ ಮಗುವಿನ ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಟ್ರಾಕ್ಟರ್​ನೊಂದಿಗೆ ಆಟವಾಡುವಾಗ ಮಕ್ಕಳ ಬಗ್ಗೆ ಜಾಗರೂಕರಾಗಿರಬೇಕು ಅಂತ ಕ್ಯಾಪ್ಶನ್ ಬರೆದು ಟ್ರಾಕ್ಟರ್​ನೊಂದಿಗೆ ಆಟವಾಡುವ ಮಗುವಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಕೆಸರುಮಯ ರಸ್ತೆಯಲ್ಲಿ ಪುಟ್ಟ ಬಾಲಕ ಟ್ರ್ಯಾಕ್ಟರ್ ಓಡಿಸುವ ವಿಡಿಯೋವನ್ನು ಹಂಚಿಕೊಂಡ ಆನಂದ್ ಮಹೀಂದ್ರಾ; ವಿಡಿಯೋ ವೈರಲ್
ಟ್ರ್ಯಾಕ್ಟರ್ ಓಡಿಸುತ್ತಿರುವ ಪುಟ್ಟ ಬಾಲಕ
Follow us
TV9 Web
| Updated By: sandhya thejappa

Updated on:Dec 15, 2021 | 12:24 PM

ಮಹೀಂದ್ರಾ ಗ್ರೂಪ್ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರು ಟ್ವಿಟರ್​ನಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ. ಅವರ ಕೆಲವೊಂದು ಹಾಸ್ಯಮಯ ಟ್ವೀಟ್​ಗಳು ಹೆಚ್ಚು ಜನಪ್ರಿಯತೆ ಗಳಿಸಿವೆ. ಜೊತೆಗೆ ವೈರಲ್ ಕೂಡಾ ಆಗಿವೆ. ಅದರಂತೆ ಭಾನುವಾರ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಪುಟ್ಟ ಬಾಲಕನೊಬ್ಬ ಕೆಸರುಮಯ ರಸ್ತೆಯಲ್ಲಿ ತನ್ನ ಪುಟ್ಟ ಟ್ರ್ಯಾಕ್ಟರ್​ನ ಓಡಿಸುವ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ.

ನಿಮ್ಮ ಮಗುವಿನ ಆತ್ಮ ವಿಶ್ವಾಸವನ್ನು ಹೆಚ್ಚಿಸಲು ಇದು ಅತ್ಯುತ್ತಮ ಮಾರ್ಗವಾಗಿದೆ. ಆದರೆ ಟ್ರಾಕ್ಟರ್​ನೊಂದಿಗೆ ಆಟವಾಡುವಾಗ ಮಕ್ಕಳ ಬಗ್ಗೆ ಜಾಗರೂಕರಾಗಿರಬೇಕು ಅಂತ ಕ್ಯಾಪ್ಶನ್ ಬರೆದು ಟ್ರಾಕ್ಟರ್​ನೊಂದಿಗೆ ಆಟವಾಡುವ ಮಗುವಿನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಮಹೀಂದ್ರಾ ಅವರು ಪೋಸ್ಟ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆನಂದ್ ಮಹೀಂದ್ರಾ ಅವರು ಇದೀಗೆ ಕೇವಲ ಉದ್ಯಮಿಯಾಗಿಲ್ಲ. ಯಶಸ್ವಿ ಉದ್ಯಮಿ ಜೊತೆಗೆ ಟ್ವಿಟರ್​ನಲ್ಲಿ ರಾಕ್ ಸ್ಟಾರ್ ಆಗಿದ್ದಾರೆ. ಬಾಲಕ ತನ್ನ ಪುಟ್ಟ ಆಟಿಕೆ ಟ್ರಾಕ್ಟರ್ ಸಹಾಯದಿಂದ ಮಣ್ಣಿನ ರಸ್ತೆಯಲ್ಲಿ ಸಿಲುಕಿರುವ ಅಗೆಯುವ ಯಂತ್ರವನ್ನು ಹೊರತೆಗೆಯಲು ಪ್ರಯತ್ನಿಸುತ್ತಿರುವ ಮುದ್ದಾದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಬಾಲಕ ತನ್ನ ಆಟಿಕೆ ಟ್ರ್ಯಾಕ್ಟರ್​ಗೆ ಅಗೆಯುವ ಯಂತ್ರವನ್ನು ಹಗ್ಗದಿಂದ ಕಟ್ಟಿ ಎಳೆಯಲು ಪ್ರಯತ್ನಿಸುತ್ತಿದ್ದಾನೆ. ಈ ವೇಳೆ ಅಗೆಯುವ ಯಂತ್ರದ ಚಾಲಕನೂ ಕೂಡಾ ಬಾಲಕನಿಗೆ ಪ್ರೋತ್ಸಾಹಿಸಲು ನಿಧಾನವಾಗಿ ಚಲಿಸುತ್ತಾನೆ.

ವಿಡಿಯೋ ಪೋಸ್ಟ್ ಆಗುತ್ತಿದ್ದಂತೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಡಿಯೋ ಸುಮಾರು 4.2 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನ ಪಡೆದುಕೊಂಡಿದ್ದು, 30,000 ಲೈಕ್​ಗಳನ್ನು ಗಳಿಸಿದೆ.

ಇದನ್ನೂ ಓದಿ

Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್​ಗಳ ಡೆಲಿವರಿ ಇಂದಿನಿಂದ ಶುರು

ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

Published On - 12:23 pm, Wed, 15 December 21

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ