AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೀಂದ್ರಾ ಕಂಪನಿ ವಾಹನವನ್ನು ಕಚ್ಚಿ ಎಳೆದ ಹುಲಿ: ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

ವಾಹನವನ್ನು ಹುಲಿ ಕಚ್ಚಿ ಎಳೆಯುತ್ತಿದ್ದ ವೇಳೆ ವೀಡಿಯೋ ಚಿತ್ರೀಕರಿಸುತ್ತಿದ್ದ ಇತರ ವಾಹನದಲ್ಲಿದ್ದ ಜನರು ಹುಲಿಯನ್ನು ಓಡಿಸಲು ಯತ್ನಿಸಿದ್ದಾರೆ. ಆದರೂ ಹುಲಿ ಮಹೀಂದ್ರಾ xylo ವಾಹನವನ್ನು ಎಳೆದಿದೆ.

ಮಹೀಂದ್ರಾ ಕಂಪನಿ ವಾಹನವನ್ನು ಕಚ್ಚಿ ಎಳೆದ ಹುಲಿ: ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
TV9 Web
| Edited By: |

Updated on:Dec 31, 2021 | 5:29 PM

Share

ಕೆಲವು ದಿನಗಳ ಹಿಂದೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನವೊಂದರ ಹಿಂಭಾಗವನ್ನು ಹುಲಿ ಕಚ್ಚಿ ಎಳೆಯುತ್ತಿರುವ ವಿಡಿಯೋ ವೈರಲ್​ ಆಗಿತ್ತು. ಇದೀಗ ಅದರ ವಿಡಿಯೋವನ್ನು ಆನಂದ್​ ಮಹೀಂದ್ರಾ ಹಂಚಿಕೊಂಡಿದ್ದಾರೆ. ಪ್ರವಾಸಿಗರು ತೆರಳುತ್ತಿದ್ದ ಮಹೀಂದ್ರಾ ಎಸ್​ಯುವಿ ವಾಹನವನ್ನು ದಾರಿ ಮಧ್ಯೆ ನಿಲ್ಲಿಸಲಾಗಿತ್ತು. ಈ ವೇಳೆ ಎಸ್​ಯುವಿ ವಾಹನದ ಹಿಂದೆ ಓಡಾಡುತ್ತಿದ್ದ ಹುಲಿಯೊಂದು ಗಾಡಿಯ ಬಳಿ ಬಂದು ಹಿಂಭಾಗವನ್ನು ಕಚ್ಚಿ ಎಳೆದಿದೆ. ನಂತರ ಅದನ್ನು ಬಿಟ್ಟು ಮುಂದೆ ಹೋಗಿದೆ. ಆದರೆ ಮತ್ತೆ ಪುನಃ ಬಂದು ಎಸ್​ಯುವಿ ವಾಹನವನ್ನು ಬಾಯಿಯಿಂದ ಕಚ್ಚಿ ಹಿಂದಕ್ಕೆ ಎಳೆದಿದೆ.

ಈ ವೇಳೆ ವಾಹನದಲ್ಲಿದ್ದ ಮಹಿಳೆ ಓ ದೇವರೇ ಎಂದು ಕಿರುಚಿದ್ದಾರೆ. ಈ ವಿಡಿಯೋವನ್ನು ಆನಂದ್​ ಮಹೀಂದ್ರಾ ಹಂಚಿಕೊಂಡಿದ್ದು ಇದು ಊಟಿ ಮೈಸೂರಿಗೆ ಹೋಗುವ ದಾರಿಯ ಮಧ್ಯೆ ಕಂಡುಬಂದ ವಿಡಿಯೋವಾಗಿದೆ. ವಾಹನವು ಮಹೀಂದ್ರಾ xylo ಆಗಿದೆ. ಹೀಗಾಗಿ ಅದನ್ನು ಕಚ್ಚಿದ್ದರಲ್ಲಿ ಆಶ್ಚರ್ಯವಿಲ್ಲ.  ಮಹೀಂದ್ರಾ ಸಂಸ್ಥೆಯ  ವಾಹನವು ರುಚಿಕರವಾಗಿದೆ ಎಂದು ನಂಬುತ್ತೇನೆ ಎಂದಿದ್ದಾರೆ.

ವಾಹನವನ್ನು ಹುಲಿ ಕಚ್ಚಿ ಎಳೆಯುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಇತರ ವಾಹನದಲ್ಲಿದ್ದ ಜನರು ಹುಲಿಯನ್ನು ಓಡಿಸಲು ಯತ್ನಿಸಿದ್ದಾರೆ. ಆದರೂ ಹುಲಿ ಮಹೀಂದ್ರಾ xylo ವಾಹನವನ್ನು ಎಳೆದಿದೆ. ಇದನ್ನು ನೋಡಿ ಜನರು ಒಂದು ಕ್ಷಣ ಗಾಬರಿಗೊಂಡಿದ್ದರು. ಆನಂದ್​ ಮಹೀಂದ್ರಾ ಹಂಚಿಕೊಂಡ ವಿಡಿಯೋ 24 ಸಾವಿರಕ್ಕೂ ಅಧಿಕ ಲೈಕ್ಸ್​ ಗಳಿಸಿದ್ದು ನಟ್ಟಿಗರು ಅಚ್ಚರಿ ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ.

ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ. ಟ್ವಿಟರ್​ನಲ್ಲಿ 8 ಮಿಲಿಯನ್​ಗೂ ಅಧಿಕ ಫಾಲೋವರ್ಸ್​ ಹೊಂದಿರುವ ಅವರು ಅಪೂರೂಪದ ಘಟನೆಗಳ ವೀಡಿಯೋಗಳನ್ನು, ವಿಷಯಗಳನ್ನು ಜನರೊಂದಿಗೆ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ:

ಈ ದೇಶಗಳಲ್ಲಿ ಈಗಾಗಲೇ ಹೊಸ ವರ್ಷ ಬಂದಾಯ್ತು! ಕೊನೆಯದಾಗಿ 2022ನ್ನು ಸ್ವಾಗತಿಸೋದು ಯಾವ ರಾಷ್ಟ್ರ ಗೊತ್ತಾ?

Published On - 4:29 pm, Fri, 31 December 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ