AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೀಂದ್ರಾ ಕಂಪನಿ ವಾಹನವನ್ನು ಕಚ್ಚಿ ಎಳೆದ ಹುಲಿ: ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ

ವಾಹನವನ್ನು ಹುಲಿ ಕಚ್ಚಿ ಎಳೆಯುತ್ತಿದ್ದ ವೇಳೆ ವೀಡಿಯೋ ಚಿತ್ರೀಕರಿಸುತ್ತಿದ್ದ ಇತರ ವಾಹನದಲ್ಲಿದ್ದ ಜನರು ಹುಲಿಯನ್ನು ಓಡಿಸಲು ಯತ್ನಿಸಿದ್ದಾರೆ. ಆದರೂ ಹುಲಿ ಮಹೀಂದ್ರಾ xylo ವಾಹನವನ್ನು ಎಳೆದಿದೆ.

ಮಹೀಂದ್ರಾ ಕಂಪನಿ ವಾಹನವನ್ನು ಕಚ್ಚಿ ಎಳೆದ ಹುಲಿ: ವಿಡಿಯೋ ಹಂಚಿಕೊಂಡ ಆನಂದ್​ ಮಹೀಂದ್ರಾ
TV9 Web
| Edited By: |

Updated on:Dec 31, 2021 | 5:29 PM

Share

ಕೆಲವು ದಿನಗಳ ಹಿಂದೆ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನವೊಂದರ ಹಿಂಭಾಗವನ್ನು ಹುಲಿ ಕಚ್ಚಿ ಎಳೆಯುತ್ತಿರುವ ವಿಡಿಯೋ ವೈರಲ್​ ಆಗಿತ್ತು. ಇದೀಗ ಅದರ ವಿಡಿಯೋವನ್ನು ಆನಂದ್​ ಮಹೀಂದ್ರಾ ಹಂಚಿಕೊಂಡಿದ್ದಾರೆ. ಪ್ರವಾಸಿಗರು ತೆರಳುತ್ತಿದ್ದ ಮಹೀಂದ್ರಾ ಎಸ್​ಯುವಿ ವಾಹನವನ್ನು ದಾರಿ ಮಧ್ಯೆ ನಿಲ್ಲಿಸಲಾಗಿತ್ತು. ಈ ವೇಳೆ ಎಸ್​ಯುವಿ ವಾಹನದ ಹಿಂದೆ ಓಡಾಡುತ್ತಿದ್ದ ಹುಲಿಯೊಂದು ಗಾಡಿಯ ಬಳಿ ಬಂದು ಹಿಂಭಾಗವನ್ನು ಕಚ್ಚಿ ಎಳೆದಿದೆ. ನಂತರ ಅದನ್ನು ಬಿಟ್ಟು ಮುಂದೆ ಹೋಗಿದೆ. ಆದರೆ ಮತ್ತೆ ಪುನಃ ಬಂದು ಎಸ್​ಯುವಿ ವಾಹನವನ್ನು ಬಾಯಿಯಿಂದ ಕಚ್ಚಿ ಹಿಂದಕ್ಕೆ ಎಳೆದಿದೆ.

ಈ ವೇಳೆ ವಾಹನದಲ್ಲಿದ್ದ ಮಹಿಳೆ ಓ ದೇವರೇ ಎಂದು ಕಿರುಚಿದ್ದಾರೆ. ಈ ವಿಡಿಯೋವನ್ನು ಆನಂದ್​ ಮಹೀಂದ್ರಾ ಹಂಚಿಕೊಂಡಿದ್ದು ಇದು ಊಟಿ ಮೈಸೂರಿಗೆ ಹೋಗುವ ದಾರಿಯ ಮಧ್ಯೆ ಕಂಡುಬಂದ ವಿಡಿಯೋವಾಗಿದೆ. ವಾಹನವು ಮಹೀಂದ್ರಾ xylo ಆಗಿದೆ. ಹೀಗಾಗಿ ಅದನ್ನು ಕಚ್ಚಿದ್ದರಲ್ಲಿ ಆಶ್ಚರ್ಯವಿಲ್ಲ.  ಮಹೀಂದ್ರಾ ಸಂಸ್ಥೆಯ  ವಾಹನವು ರುಚಿಕರವಾಗಿದೆ ಎಂದು ನಂಬುತ್ತೇನೆ ಎಂದಿದ್ದಾರೆ.

ವಾಹನವನ್ನು ಹುಲಿ ಕಚ್ಚಿ ಎಳೆಯುತ್ತಿದ್ದ ವೇಳೆ ವಿಡಿಯೋ ಚಿತ್ರೀಕರಿಸುತ್ತಿದ್ದ ಇತರ ವಾಹನದಲ್ಲಿದ್ದ ಜನರು ಹುಲಿಯನ್ನು ಓಡಿಸಲು ಯತ್ನಿಸಿದ್ದಾರೆ. ಆದರೂ ಹುಲಿ ಮಹೀಂದ್ರಾ xylo ವಾಹನವನ್ನು ಎಳೆದಿದೆ. ಇದನ್ನು ನೋಡಿ ಜನರು ಒಂದು ಕ್ಷಣ ಗಾಬರಿಗೊಂಡಿದ್ದರು. ಆನಂದ್​ ಮಹೀಂದ್ರಾ ಹಂಚಿಕೊಂಡ ವಿಡಿಯೋ 24 ಸಾವಿರಕ್ಕೂ ಅಧಿಕ ಲೈಕ್ಸ್​ ಗಳಿಸಿದ್ದು ನಟ್ಟಿಗರು ಅಚ್ಚರಿ ವ್ಯಕ್ತಪಡಿಸಿ ಕಾಮೆಂಟ್​ ಮಾಡಿದ್ದಾರೆ.

ಆನಂದ್​ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಉದ್ಯಮಿ. ಟ್ವಿಟರ್​ನಲ್ಲಿ 8 ಮಿಲಿಯನ್​ಗೂ ಅಧಿಕ ಫಾಲೋವರ್ಸ್​ ಹೊಂದಿರುವ ಅವರು ಅಪೂರೂಪದ ಘಟನೆಗಳ ವೀಡಿಯೋಗಳನ್ನು, ವಿಷಯಗಳನ್ನು ಜನರೊಂದಿಗೆ ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ:

ಈ ದೇಶಗಳಲ್ಲಿ ಈಗಾಗಲೇ ಹೊಸ ವರ್ಷ ಬಂದಾಯ್ತು! ಕೊನೆಯದಾಗಿ 2022ನ್ನು ಸ್ವಾಗತಿಸೋದು ಯಾವ ರಾಷ್ಟ್ರ ಗೊತ್ತಾ?

Published On - 4:29 pm, Fri, 31 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ