AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ರಿಂದ 30 ರ ವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.

ಐಷಾರಾಮಿ ಹಡಗಿನಲ್ಲಿ ಮುಕೇಶ್​ ಅಂಬಾನಿ ಪುತ್ರನ ಮತ್ತೊಂದು ಪ್ರೀ ವೆಡ್ಡಿಂಗ್ ಸಂಭ್ರಮ, ಇದಕ್ಕೆಷ್ಟು ಕೋಟಿ ರೂ. ಖರ್ಚು ಮಾಡಲಿದ್ದಾರೆ?
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್
ಅಕ್ಷತಾ ವರ್ಕಾಡಿ
|

Updated on:May 21, 2024 | 12:16 PM

Share

ಮಾರ್ಚ್ 1ರಿಂದ 3ರವರೆಗೆ ಸಾವಿರಾರೂ ಕೋಟಿ ರೂಪಾಯಿ ಖರ್ಚು ಮಾಡಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಪ್ರಿ ವೆಡ್ಡಿಂಗ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆದಿತ್ತು. ಈ ಪ್ರಿ ವೆಡ್ಡಿಂಗ್ ಕಾರ್ಯಕ್ರಮವನ್ನೇ ಸಾಕಷ್ಟು ಜನರು ಮದುವೆ ಎಂದು ನಂಬಿದ್ದರು. ಆದರೆ ಮದುವೆ ಜುಲೈ 12 ರಂದು ನಡೆಯಲಿದೆ ಎಂದು ಕೇಳಿ ಸಾಕಷ್ಟು ಜನರು ಶಾಕ್​​ಗೆ ಒಳಗಾಗಿದ್ದರು. ಇದೀಗ ಅಂಬಾನಿ ಕುಟುಂಬ ಮತ್ತೊಂದು ಶಾಕ್​ ನೀಡಿದೆ. ವರದಿಗಳ ಪ್ರಕಾರ ಅಂಬಾನಿ ಕುಟುಂಬವು ಅನಂತ್​ ಅಂಬಾನಿಯ ಎರಡನೇ ಪ್ರಿ-ವೆಡ್ಡಿಂಗ್ ಕಾರ್ಯಕ್ರಮವನ್ನು ಆಯೋಜಿಸಲು ಮುಂದಾಗಿದೆ.

ವರದಿಗಳ ಪ್ರಕಾರ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ತಮ್ಮ ಕಿರಿಯ ಪುತ್ರ ಅನಂತ್​​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಎರಡನೇ ಪ್ರಿ-ವೆಡ್ಡಿಂಗ್ ಆಚರಣೆಯನ್ನು ಆಯೋಜಿಸಲು ಸಿದ್ಧರಾಗಿದ್ದಾರೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗಿನಲ್ಲಿ ಸಮುದ್ರದ ಮಧ್ಯೆ ಮುಕೇಶ್​ ಅಂಬಾನಿ ಪುತ್ರನ 2ನೇ ಪ್ರೀ ವೆಡ್ಡಿಂಗ್ ಸಂಭ್ರಮ ಮೇ 28 ಮತ್ತು 30 ರ ನಡುವೆ ನಡೆಯಲಿದೆ ಎಂದು ತಿಳಿದುಬಂದಿದೆ.

ಬಾಲಿವುಡ್​​ನ ಕೆಲ ಸೆಲೆಬ್ರೆಟಿಗಳು ಸೇರಿದಂತೆ ಸುಮಾರು 800 ಅತಿಥಿಗಳು ಭಾಗಿಯಾಗಲಿದ್ದು, ಮೇ 28 ರಂದು ಇಟಲಿಯಿಂದ ಈ ಐಷಾರಾಮಿ ಹಡಗು ಹೊರಡಲಿದ್ದು ಸುಮಾರು 4380 ಕಿಲೋಮೀಟರ್ ದೂರ ಇದು ಕ್ರಮಿಸಲಿದೆ. ಈ ಹಡಗು ಇಟಲಿಯಿಂದ ದಕ್ಷಿಣ ಫ್ರಾನ್ಸ್‌ಗೆ ಹೋಗಲಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:12 pm, Tue, 21 May 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ