Viral: ವೈರಲ್‌ ಆಯ್ತು ಅನಂತ್‌ ಅಂಬಾನಿ-ರಾಧಿಕ ಮದುವೆ ಆಮಂತ್ರಣ ಪತ್ರಿಕೆ, ಮದುವೆ ಎಲ್ಲಿ, ಯಾವಾಗ ಗೊತ್ತಾ? 

Ananth Ambani Radhika Merchantʼs Wedding Invitation Card: ಉದ್ಯಮಿ ಮುಖೇಶ್‌ ಅಂಬಾನಿಯ  ಕಿರಿಯ ಪುತ್ರ ಅನಂತ್‌ ಅಂಬಾನಿ ತನ್ನ ಬಹುಕಾಲದ ಗೆಳತಿ ರಾಧಿಕಾ ಮರ್ಚೆಂಟ್‌ ಅವರನ್ನು  ಜುಲೈ 12 ರಂದು ವಿವಾಹವಾಗಲಿದ್ದಾರೆ. ಒಂದೆಡೆ ಈ ಜೋಡಿ  ಕುಟುಂಬಸ್ಥರು ಮತ್ತು ಆಪ್ತರೊಂದಿಗೆ ಇಟಲಿಯ ಫ್ರೆಂಚ್‌ ಕ್ರೂಸ್‌ನಲ್ಲಿ ಎರಡನೇ ಬಾರಿಗೆ ವಿವಾಹ ಪೂರ್ವ ಕಾರ್ಯಕ್ರವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ ಅವರ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. 

Viral: ವೈರಲ್‌ ಆಯ್ತು ಅನಂತ್‌ ಅಂಬಾನಿ-ರಾಧಿಕ ಮದುವೆ ಆಮಂತ್ರಣ ಪತ್ರಿಕೆ, ಮದುವೆ ಎಲ್ಲಿ, ಯಾವಾಗ ಗೊತ್ತಾ? 
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:May 30, 2024 | 5:51 PM

ದೇಶದ ಆಗರ್ಭ  ಶ್ರೀಮಂತರ ಪೈಕಿ ಅಗ್ರಸ್ಥಾನದಲ್ಲಿರುವ ಖ್ಯಾತ ಉದ್ಯಮಿ, ರಿಲಯನ್ಸ್‌  ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವೀರೇನ್‌ ಮರ್ಚೆಂಟ್‌ ಅವರ ಪುತ್ರಿ ರಾಧಿಕಾ ಮರ್ಚೆಂಟ್‌ ಅವರ 3 ದಿನಗಳ ವಿವಾಹ ಪೂರ್ವ ಕಾರ್ಯಕ್ರಮವು ಗುಜರಾತ್‌ನ ಜಾಮ್‌ ನಗರದಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಇದೀಗ ಈ ಜೋಡಿಯ  ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ನಡೆಯಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ (Ananth Ambani  Radhika Merchantʼs Wedding Invitation Card) ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಸುದ್ದಿ ಸಂಸ್ಥೆ ANI ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅನಂತ್‌ ಅಂಬಾನಿ ಮತ್ತು ರಾಧಿಕ ಅವರ ವಿವಾಹವು ಜುಲೈ 12 ರಂದು ಮುಂಬೈನಲ್ಲಿ ನಡೆಯಲಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಆಹ್ವಾನ ಪತ್ರಿಕೆಯ ಪ್ರಕಾರ, ಅನಂತ್‌ ಮತ್ತು ರಾಧಿಕಾ  ಮುಂಬೈನ ಬಾಂದ್ರಾ  ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಲಿದ್ದು, ಜುಲೈ 12 ರ ಶುಕ್ರವಾರದಂದು ಅದ್ಧೂರಿಯಾಗಿ ಇವರ ಶುಭ ವಿವಾಹವು ನಡೆಯಲಿದೆ. ಈ ಸಮಾರಂಭದಲ್ಲಿ ಅಥಿತಿಗಳು ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ತೊಡಬೇಕು ಎಂದು ಹೇಳಲಾಗಿದೆ. ಇದಾದ ನಂತರ ಜುಲೈ 13 ರಂದು ʼಶುಭ್‌ ಆಶೀರ್ವಾದ್‌ʼ ಸಮಾರಂಭ ಹಾಗೂ ಜುಲೈ 14 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಪೊಲೀಸರೊಂದಿಗೆ ನಿವೇತಾ ಪೇತುರಾಜ್‌ ಕಿರಿಕ್, ವಿಡಿಯೋ ತರಾಟೆ ತೆಗೆದುಕೊಂಡ ನಟಿ

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅಂಬಾನಿ ಕುಟುಂಬವು ಜಾಮ್‌ ನಗರದಲ್ಲಿ ಅದ್ಧೂರಿ ವಿವಾಹಪೂರ್ವ ಸಮಾರಂಭವನ್ನು ಆಯೋಜಿಸಿತ್ತು. ಈಗ ಎಲ್ಲರೂ ಅನಂತ್‌-ರಾಧಿಕಾ  ಜೋಡಿಯ ಅದ್ಧೂರಿ ವಿವಾಹ ಸಮಾರಂಭಕ್ಕೆ ಕಾತುರದಿಂದ ಕಾಯುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Thu, 30 May 24

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು