AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವೈರಲ್‌ ಆಯ್ತು ಅನಂತ್‌ ಅಂಬಾನಿ-ರಾಧಿಕ ಮದುವೆ ಆಮಂತ್ರಣ ಪತ್ರಿಕೆ, ಮದುವೆ ಎಲ್ಲಿ, ಯಾವಾಗ ಗೊತ್ತಾ? 

Ananth Ambani Radhika Merchantʼs Wedding Invitation Card: ಉದ್ಯಮಿ ಮುಖೇಶ್‌ ಅಂಬಾನಿಯ  ಕಿರಿಯ ಪುತ್ರ ಅನಂತ್‌ ಅಂಬಾನಿ ತನ್ನ ಬಹುಕಾಲದ ಗೆಳತಿ ರಾಧಿಕಾ ಮರ್ಚೆಂಟ್‌ ಅವರನ್ನು  ಜುಲೈ 12 ರಂದು ವಿವಾಹವಾಗಲಿದ್ದಾರೆ. ಒಂದೆಡೆ ಈ ಜೋಡಿ  ಕುಟುಂಬಸ್ಥರು ಮತ್ತು ಆಪ್ತರೊಂದಿಗೆ ಇಟಲಿಯ ಫ್ರೆಂಚ್‌ ಕ್ರೂಸ್‌ನಲ್ಲಿ ಎರಡನೇ ಬಾರಿಗೆ ವಿವಾಹ ಪೂರ್ವ ಕಾರ್ಯಕ್ರವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ ಅವರ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. 

Viral: ವೈರಲ್‌ ಆಯ್ತು ಅನಂತ್‌ ಅಂಬಾನಿ-ರಾಧಿಕ ಮದುವೆ ಆಮಂತ್ರಣ ಪತ್ರಿಕೆ, ಮದುವೆ ಎಲ್ಲಿ, ಯಾವಾಗ ಗೊತ್ತಾ? 
TV9 Web
| Edited By: |

Updated on:May 30, 2024 | 5:51 PM

Share

ದೇಶದ ಆಗರ್ಭ  ಶ್ರೀಮಂತರ ಪೈಕಿ ಅಗ್ರಸ್ಥಾನದಲ್ಲಿರುವ ಖ್ಯಾತ ಉದ್ಯಮಿ, ರಿಲಯನ್ಸ್‌  ಇಂಡಸ್ಟ್ರೀಸ್‌ ಅಧ್ಯಕ್ಷ ಮುಖೇಶ್‌ ಅಂಬಾನಿ ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವೀರೇನ್‌ ಮರ್ಚೆಂಟ್‌ ಅವರ ಪುತ್ರಿ ರಾಧಿಕಾ ಮರ್ಚೆಂಟ್‌ ಅವರ 3 ದಿನಗಳ ವಿವಾಹ ಪೂರ್ವ ಕಾರ್ಯಕ್ರಮವು ಗುಜರಾತ್‌ನ ಜಾಮ್‌ ನಗರದಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಇದೀಗ ಈ ಜೋಡಿಯ  ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ನಡೆಯಲಿದ್ದು, ಇವರ ಮದುವೆ ಆಮಂತ್ರಣ ಪತ್ರಿಕೆ (Ananth Ambani  Radhika Merchantʼs Wedding Invitation Card) ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಸುದ್ದಿ ಸಂಸ್ಥೆ ANI ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಅನಂತ್‌ ಅಂಬಾನಿ ಮತ್ತು ರಾಧಿಕ ಅವರ ವಿವಾಹವು ಜುಲೈ 12 ರಂದು ಮುಂಬೈನಲ್ಲಿ ನಡೆಯಲಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಆಹ್ವಾನ ಪತ್ರಿಕೆಯ ಪ್ರಕಾರ, ಅನಂತ್‌ ಮತ್ತು ರಾಧಿಕಾ  ಮುಂಬೈನ ಬಾಂದ್ರಾ  ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಲಿದ್ದು, ಜುಲೈ 12 ರ ಶುಕ್ರವಾರದಂದು ಅದ್ಧೂರಿಯಾಗಿ ಇವರ ಶುಭ ವಿವಾಹವು ನಡೆಯಲಿದೆ. ಈ ಸಮಾರಂಭದಲ್ಲಿ ಅಥಿತಿಗಳು ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ತೊಡಬೇಕು ಎಂದು ಹೇಳಲಾಗಿದೆ. ಇದಾದ ನಂತರ ಜುಲೈ 13 ರಂದು ʼಶುಭ್‌ ಆಶೀರ್ವಾದ್‌ʼ ಸಮಾರಂಭ ಹಾಗೂ ಜುಲೈ 14 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಪೊಲೀಸರೊಂದಿಗೆ ನಿವೇತಾ ಪೇತುರಾಜ್‌ ಕಿರಿಕ್, ವಿಡಿಯೋ ತರಾಟೆ ತೆಗೆದುಕೊಂಡ ನಟಿ

ವೈರಲ್​​ ಫೋಟೋ ಇಲ್ಲಿದೆ ನೋಡಿ:

ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಅಂಬಾನಿ ಕುಟುಂಬವು ಜಾಮ್‌ ನಗರದಲ್ಲಿ ಅದ್ಧೂರಿ ವಿವಾಹಪೂರ್ವ ಸಮಾರಂಭವನ್ನು ಆಯೋಜಿಸಿತ್ತು. ಈಗ ಎಲ್ಲರೂ ಅನಂತ್‌-ರಾಧಿಕಾ  ಜೋಡಿಯ ಅದ್ಧೂರಿ ವಿವಾಹ ಸಮಾರಂಭಕ್ಕೆ ಕಾತುರದಿಂದ ಕಾಯುತ್ತಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:53 pm, Thu, 30 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ