Viral Post: ಅಂಬಾನಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ವೈರಲ್​​​

ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ. ಜನವರಿ 2023 ರಲ್ಲಿ ಅನಂತ್​​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಅವರ ನಿಶ್ಚಿತಾರ್ಥ ಅದ್ಧೂರಿಯಾಗಿ ನಡೆದಿತ್ತು. ಇದೀಗಾ ಇವರಿಬ್ಬರ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Viral Post: ಅಂಬಾನಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ವೈರಲ್​​​
Anant Ambani & Radhika Merchant wedding Card
Follow us
|

Updated on: Jan 13, 2024 | 5:42 PM

ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಕಾರ್ಯಕ್ರಮಗಳು ಮಾರ್ಚ್ 2024 ರಲ್ಲಿ ಪ್ರಾರಂಭವಾಗಲಿದೆ. ಅನಂತ್ ಮತ್ತು ರಾಧಿಕಾ ಅವರ ವಿವಾಹ ಪೂರ್ವ ಕಾರ್ಯಕ್ರಮಗಳು ಮಾರ್ಚ್ 1 ರಿಂದ ಮಾರ್ಚ್ 3ರ ವರೆಗೆ ನಡೆಯಲಿದೆ. ಇದೀಗಾ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಕಷ್ಟು ವಿಭಿನ್ನತೆಯ ಜೊತೆಗೆ ಕಾರ್ಡ್‌ನಲ್ಲಿ ಮುಖೇಶ್ ಮತ್ತು ನೀತಾ ಅವರ ಕೈಬರಹದ ಸಂದೇಶವೂ ಕೂಡ ಇದೆ. ಮದುವೆಗೆ ಮುಂಚಿನ ಕಾರ್ಯಕ್ರಮ ಎಲ್ಲೆಲ್ಲಿ ನಡೆಯುತ್ತದೆ ಎಂಬುದನ್ನೂ ಈ ಮದುವೆಯ ಪತ್ರಿಕೆಯಲ್ಲ ನಮೂದಿಸಲಾಗಿದೆ.

ಮುಕೇಶ್ ಅಂಬಾನಿ ಅವರ ತವರೂರಾದ ಗುಜರಾತ್‌ನ ಜಾಮ್‌ನಗರಕ್ಕೆ ಪ್ರಯಾಣಿಸುವ ಮೂಲಕ ಅನಂತ್ ಅಂಬಾನಿಯವರ ಹೊಸ ಜೀವನದ ಹೊಸ ಅಧ್ಯಾಯದ ಪ್ರಾರಂಭಿಸಲು ನಿರ್ಧರಿಸಿದ್ದೇವೆ ಎಂದು ಆಮಂತ್ರಣ ಪ್ರತಿಕೆಯಲ್ಲಿ ಬರೆಯಲಾಗಿದೆ. ಇದಲ್ಲದೇ ವಿವಾಹ ಪೂರ್ವ ಸಂಭ್ರಮಗಳು ಮಾರ್ಚ್ 1, 2024 ರಂದು ಪ್ರಾರಂಭವಾಗಲಿದ್ದು, ಮಾರ್ಚ್ 3, 2024 ರವರೆಗೆ ಜಾಮ್‌ನಗರದ ರಿಲಯನ್ಸ್ ಗ್ರೀನ್ಸ್‌ನಲ್ಲಿ ನಡೆಯಲಿದೆ.

ಇದನ್ನು ಓದಿ: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ

ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ಅವರ ಕಿರಿಯ ಸೊಸೆಯಾಗಿ ಪ್ರವೇಶಿಸಲಿರುವ ರಾಧಿಕಾ ಕೈಗಾರಿಕೋದ್ಯಮಿಗಳಾದ ವೀರೇನ್ ಮರ್ಚೆಂಟ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ. ರಾಧಿಕಾ ಮರ್ಚೆಂಟ್ ಅವರ ತಂದೆ ಎನ್‌ಕೋರ್ ಹೆಲ್ತ್‌ಕೇರ್‌ನ ಸಿಇಒ ಆಗಿದ್ದಾರೆ ಮತ್ತು ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ