Viral: ಜಾಮ್‌ನಗರದಿಂದ ದ್ವಾರಕಾಕ್ಕೆ ಪಾದಯಾತ್ರೆ; ದಾರಿ ಮಧ್ಯೆ ಕೋಳಿ ಹಿಂಡನ್ನು ರಕ್ಷಿಸಿದ ಅನಂತ್‌ ಅಂಬಾನಿ

ದೇಶದ ಪ್ರಮುಖ ಕೈಗಾರಿಕೋದ್ಯಮಿ ಮತ್ತು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಜಾಮ್‌ ನಗರದಿಂದ ದ್ವಾರಕಾಕ್ಕೆ ಪಾದಯಾತ್ರೆ ಹೋಗುವ ಮೂಲಕ ಸುದ್ದಿಯಲ್ಲಿದ್ದಾರೆ. ಪಾದಯಾತ್ರೆ ವೇಳೆ ಅನಂತ್‌ ದಾರಿ ಮಧ್ಯೆ ಟ್ರಕ್‌ನಲ್ಲಿ ತುಂಬಿದ್ದ ಕೋಳಿಗಳನ್ನು ದುಪ್ಪಟ್ಟು ಬೆಲೆಗೆ ಖರೀದಿ ಮಾಡುವ ಮೂಲಕ ಮುಗ್ಧ ಜೀವಗಳ ರಕ್ಷಣೆ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಅಂಬಾನಿ ಪುತ್ರನ ಈ ಮಹತ್‌ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

Viral: ಜಾಮ್‌ನಗರದಿಂದ ದ್ವಾರಕಾಕ್ಕೆ ಪಾದಯಾತ್ರೆ; ದಾರಿ ಮಧ್ಯೆ ಕೋಳಿ ಹಿಂಡನ್ನು ರಕ್ಷಿಸಿದ ಅನಂತ್‌ ಅಂಬಾನಿ
ವೈರಲ್​​ ವಿಡಿಯೋ
Edited By:

Updated on: Apr 02, 2025 | 11:51 AM

ಖ್ಯಾತ ಉದ್ಯಮಿ ಮುಕೇಶ್‌ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಹಾಗೂ ರಿಲಯನ್ಸ್‌ ಇಂಡಸ್ಟ್ರಿಯ (Reliance Industries) ನಿರ್ದೇಶಕ ಅನಂತ್‌ ಅಂಬಾನಿ (Anant Ambani) ತಮ್ಮ ಹುಟ್ಟು ಹಬ್ಬದಂದು ಶ್ರೀ ಕೃಷ್ಣನ ದರ್ಶನ ಪಡೆಯಲು ಜಾಮ್‌ ನಗರದಿಂದ (Jamnagar) ದ್ವಾರಕಾಕ್ಕೆ (Dwarka) ಪಾದಯಾತ್ರೆ (Padayatra) ಹೊರಟಿದ್ದಾರೆ. ಮಾರ್ಚ್‌ 27 ರಂದು ಜಾಮ್‌ನಗರದಿಂದ 141 ಕಿಲೋಮೀಟರ್‌ ದೂರದಲ್ಲಿರುವ ದ್ವಾರಕಾಗೆ ಪಾದಯಾತ್ರೆ ಹೊರಟಿರುವ ದೈವ ಭಕ್ತ ಅನಂತ್‌ ಅಂಬಾನಿ ಏಪ್ರಿಲ್‌ 10 ರಂದು ದ್ವಾರಕಾ ತಲುಪಲಿದ್ದಾರೆ. ಈ ಮಧ್ಯೆ ಅವರು ಕೋಳಿಗಳ (Chickens) ಹಿಂಡನ್ನು ರಕ್ಷಿಸುವ (rescue) ಮೂಲಕ ಸಖತ್‌ ಸುದ್ದಿಯಲ್ಲಿದ್ದಾರೆ. ಹೌದು ಪಾದಯಾತ್ರೆ ವೇಳೆ ಅನಂತ್‌ ಅಂಬಾನಿ ಟ್ರಕ್‌ನಲ್ಲಿ ತುಂಬಿದ್ದ ಕೋಳಿಗಳ ಹಿಂಡನ್ನು ದುಪ್ಪಟ್ಟು ಬೆಲೆಗೆ ಖರೀದಿಸುವ ಮೂಲಕ ಅವುಗಳನ್ನು ರಕ್ಷಣೆ ಮಾಡಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

ಪಾದಯಾತ್ರೆಯ ಸಮಯದಲ್ಲಿ ಅನಂತ್ ಅಂಬಾನಿಯವರ ಪ್ರಾಣಿ ಪ್ರೇಮ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹೌದು ಅಂಬಾನಿ ಪುತ್ರ ಪಾದಯಾತ್ರೆ ವೇಳೆ ದಾರಿ ಮಧ್ಯೆ ಟ್ರಕ್‌ನಲ್ಲಿ ತುಂಬಿದ್ದ ಕೋಳಿಗಳ ಹಿಂಡನ್ನು ರಕ್ಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಆ ಟ್ರಕ್‌ನಲ್ಲಿದ್ದ ಸುಮಾರು 250 ಕೋಳಿಗಳನ್ನು ದುಪ್ಪಟ್ಟು ಬೆಲೆ ಕೊಟ್ಟು ಖರೀದಿ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

varindertchawla ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಲಾಗಿದ್ದು, “ಕೇವಲ ನಂಬಿಕೆಯ ಪಾದಯಾತ್ರೆಯಲ್ಲ, ದಯೆಯ ಹಾದಿ, ಅನಂತ್‌ ಅಂಬಾನಿ ಭಾರತವನ್ನು ಪ್ರಾಣಿಗಳಿಗೆ ಉತ್ತಮ ಸ್ಥಳವನ್ನಾಗಿ ಮಾಡುತ್ತಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅನಂತ್‌ ಅಂಬಾನಿ ಕೈಯಲ್ಲಿ ಕೋಳಿ ಹಿಡಿದುಕೊಂಡು ನಡೆದುಕೊಂಡು ಹೋಗುತ್ತಿರುವದನ್ನು ತೋರಿಸಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಅವರು ತಮ್ಮ ತಂಡಕ್ಕೆ ಗುಜರಾತಿ ಭಾಷೆಯಲ್ಲಿ ಅವುಗಳನ್ನು ಉಳಿಸಿ, ಖರೀದಿಸಿ, ಆ ಮಾಲೀಕರಿಗೆ ಹಣ ನೀಡಿ, ಕೋಳಿಗಳನ್ನು ನಾವು ನೋಡಿಕೊಳ್ಳುತ್ತೇವೆ” ಎಂದು ಹೇಳುವುದನ್ನು ಕಾಣಬಹುದು.

ಇದನ್ನೂ ಓದಿ: ನನ್ನ ಗಂಡ ದೇವಸ್ಥಾನಕ್ಕೆ ಮಾತ್ರ ಹೋಗ್ತಾನೆ, ಆತನಿಗೆ ಲೈಂಗಿಕತೆಯಲ್ಲಿ ಆಸಕ್ತಿ ಇಲ್ಲ; ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಅನಂತ್‌ ಅಂಬಾನಿಯ ಪ್ರಾಣಿ ಪ್ರೇಮಕ್ಕೆ ನೆಟ್ಟಿಗರು ತಲೆ ಬಾಗಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 11:51 am, Wed, 2 April 25