AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ನೇಹಿತನ ಮದುವೆಗೆ ಗಿಫ್ಟ್​​ ನೀಡುವಾಗಲೇ ಪ್ರಾಣ ಬಿಟ್ಟ ಜೀವದ ಗೆಳೆಯ

ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ತೀರಾ ಹೆಚ್ಚಾಗಿದೆ. ನಿನ್ನೆಯಷ್ಟೆ ಗುಜರಾತಿನಲ್ಲಿ ವ್ಯಕ್ತಿಯೊಬ್ಬರು ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಸುದ್ದಿಯೊಂದು ಕೇಳಿ ಬಂದಿತ್ತು. ಇದೀಗ ಇಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಸ್ನೇಹಿತನ ಮದುವೆಯ ಗೌಜಿ ಗಮ್ಮತ್ತಿನಲ್ಲಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ದೃಶ್ಯಾವಳಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on:Nov 22, 2024 | 2:56 PM

Share

ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ತೀರಾ ಹೆಚ್ಚಾಗುತ್ತಿದೆ. ಹಾರ್ಟ್‌ ಅಟ್ಯಾಕ್‌ಗೆ ತುತ್ತಾಗಿ ಸಾವನ್ನಪ್ಪುವವರ ಸುದ್ದಿಗಳು ಪ್ರತಿನಿತ್ಯ ಕೇಳಿ ಬರುತ್ತಿರುತ್ತಿದ್ದು, ಈಗಂತೂ ಮಕ್ಕಳು ಯುವಕರು, ವೃದ್ಧರು ಅನ್ನ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನದವರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನಿನ್ನೆಯಷ್ಟೆ ಗುಜರಾತಿನಲ್ಲಿ ವ್ಯಕ್ತಿಯೊಬ್ಬರು ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಸುದ್ದಿಯೊಂದು ಕೇಳಿ ಬಂದಿತ್ತು. ಇದೀಗ ಇಂತಹದ್ದೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, ಸ್ನೇಹಿತನ ಮದುವೆಯ ಗೌಜಿ ಗಮ್ಮತ್ತಿನಲ್ಲಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ತುತ್ತಾಗಿ, ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಈ ಘಟನೆ ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಕೃಷ್ಣಗಿರಿ ಮಂಡಲದ ಪೆನುಮಾಡ ಗ್ರಾಮದಲ್ಲಿ ನಡೆದಿದ್ದು, ಬೆಂಗಳೂರಿನ ಅಮೆಜಾನ್‌ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ವಂಶಿ ಎಂಬಾತ ಸ್ನೇಹಿತನ ಮದುವೆ ಸಮಾರಂಭದಲ್ಲಿ ಹೃದಯಾಘಾತಕ್ಕೆ ತುತ್ತಾಗಿ, ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮೂಲಗಳ ಪ್ರಕಾರ ವಂಶಿ ಮತ್ತು ಸ್ನೇಹಿತರು ಜೊತೆಗೂಡಿ ಮದುಮಗನಿಗೆ ಗಿಫ್ಟ್‌ ಕೊಟ್ಟು ಮೋಜುಮಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಂಶಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ: ವಿಶ್ವದ ಅತೀ ಎತ್ತರದ ಹಾಗೂ ಕುಬ್ಜ ಮಹಿಳೆಯರಿಬ್ಬರ ಮೊದಲ ಭೇಟಿ ಹೇಗಿತ್ತು ನೋಡಿ…

TheSiasatDaily ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವಂಶಿ ಎಂಬ ಯುವಕ ತನ್ನ ಸ್ನೇಹಿತರ ಜೊತೆಗೂಡಿ ಮದುವೆ ಮಂಟಪದಲ್ಲಿ ವರನಿಗೆ ಗಿಫ್ಟ್‌ ಕೊಟ್ಟು ಮಸ್ತಿ ಮಾಡುತ್ತಿದ್ದ ವೇಳೆ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದಂತಹ ಆಘಾತಕಾರಿ ದೃಶ್ಯವನ್ನು ಕಾಣಬಹುದು. ಈ ದೃಶ್ಯಾವಳಿ ನೋಡಿ ನೆಟ್ಟಿಗರು ಆಘಾತಗೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:46 pm, Fri, 22 November 24

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ