AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 2.3 ಕೋಟಿ ರೂಪಾಯಿ ನೋಟಿನ ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ವಿಘ್ನ ನಿವಾರಕ

ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ದೇವರಿಗೆ ಗರಿ ಗರಿ ನೋಟುಗಳ ಹಾಗೂ ನಾಣ್ಯಗಳ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸುವಂತಹ ಸುದ್ದಿಗಳ ಕೇಳುತ್ತಲೇ ಇರುತ್ತೇವೆ. ಇದೀಗ ಇಲ್ಲೊಂದು ಕಡೆ ಗಣೇಶ ಚತುರ್ಥಿಯ ಪ್ರಯುಕ್ತ ಈ ಏರಿಯಾದಲ್ಲಿ ಕೂರಿಸಿದ ಗಣೇಶನಿಗೆ ಬರೋಬ್ಬರಿ 2.3 ಕೋಟಿ ರೂ. ಮೌಲ್ಯದ ನೋಟುಗಳಿಂದ ಅಲಂಕಾರ ಮಾಡಲಾಗಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 13, 2024 | 5:55 PM

Share

ಹಬ್ಬ ಹರಿ ದಿನಗಳ ಸಂದರ್ಭದಲ್ಲಿ ದೇವಾಲಯಗಳಲ್ಲಿ ದೇವರಿಗೆ ಹೂವುಗಳು, ಹಣ್ಣುಗಳು, ಆಭರಣಗಳು, ನೋಟು ಹಾಗೂ ನಾಣ್ಯಗಳ ವಿಶೇಷ ಅಲಂಕಾರಗಳನ್ನು ಮಾಡುವ ವಾಡಿಕೆಯಿದೆ. ದೇವರನ್ನು ಈ ವಿಶೇಷ ಅಲಂಕಾರಗಳಲ್ಲಿ ನೋಡಲೆಂದೇ ಭಕ್ತರು ಬರುತ್ತಾರೆ. ಅದೇ ರೀತಿ ಗಣೇಶ ಚತುರ್ಥಿಯ ಪ್ರಯುಕ್ತ ಇಲ್ಲೊಂದು ಕಡೆ ಗಣೇಶನಿಗೆ ಸುಮಾರು 2.3 ಕೋಟಿ ರೂ. ಮೌಲ್ಯದ ಗರಿ ಗರಿ ನೋಟುಗಳಿಂದ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ಈ ಕುರಿತ ಸುದ್ದಿಯೊಂದು ಇದೀಗ ಸಖತ್ ವೈರಲ್‌ ಆಗುತ್ತಿದೆ.

ಆಂಧ್ರಪ್ರದೇಶದ ಮಂಗಳಗಿರಿಯಲ್ಲಿ ಗಣೇಶ ಚತುರ್ಥಿಯಂದು ಕೂರಿಸಿದ ಗಣೇಶನಿಗೆ ಕೋಟಿ ಕೋಟಿ ನೋಟುಗಳಿಂದ ಅಲಂಕಾರವನ್ನು ಮಾಡಲಾಗಿದೆ. ಇಲ್ಲಿ ಪ್ರತೀ ವರ್ಷ ಭಕ್ತರು ನೀಡುವ ಕಾಣಿಕೆಯಿಂದ ಗಣಪನಿಗೆ ನೋಟಿನ ಅಲಂಕಾರವನ್ನು ಮಾಡಲಾಗುತ್ತಿದೆ. ಇಲ್ಲಿನ ಸಂಕ ಬಾಲಾಜಿ ಗುಪ್ತಾ ಬ್ರದರ್ಸ್‌ ಮತ್ತು ಆರ್ಯ ವೈಶ್ಯ ಸಂಘ ಜಂಟಿಯಾಗಿ ಆಯೋಜಿಸುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಕೂಡಾ ಭಕ್ತರಿಂದ ಹಣ ಸಂಗ್ರಹಿಸಿ ಗಣೇಶನಿಗೆ ನೋಟುಗಳ ವಿಶೇಷ ಅಲಂಕಾರವನ್ನು ಮಾಡುತ್ತಾರೆ. ಈ ಬಾರಿ 10, 20 ರೂ. ನೋಟುಗಳಿಂದ ಹಿಡಿದು 500 ರೂಪಾಯಿ ನೋಟಿನ ವರೆಗೆ 2.3 ಕೋಟಿ ರೂಪಾಯಿಗಳ ಬಗೆ ಬಗೆ ಮಾಲೆಗಳಿಂದ ಇಂದು (ಸೆಪ್ಟೆಂಬರ್‌ 13) ಗಣೇಶನಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದೆ.

ಇದನ್ನೂ ಓದಿ: ರೀಲ್ಸ್‌ ತಂದ ಪಜೀತಿ, ಟೆರೇಸ್‌ ಮೇಲೆ ರೀಲ್ಸ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವತಿ

ಕಳೆದ 18 ವರ್ಷಗಳಿಂದ ಇಲ್ಲಿ ಉದ್ಯಮಿ ಬಾಲಾಜಿ ಗುಪ್ತಾ ನೇತೃತ್ವದಲ್ಲಿ ಗಣೇಶನಿಗೆ ನೋಟುಗಳ ವಿಶೇಷ ಅಲಂಕಾರವನ್ನು ಮಾಡಲಾಗುತ್ತಿದ್ದು, ಮೊದಲಿಗೆ ಒಂದು ಲಕ್ಷ ಮೌಲ್ಯದ ನೋಟುಗಳಿಂದ ಗಣೇಶನಿಗೆ ಅಲಂಕಾರ ಮಾಡಲಾಗಿತ್ತು. ಅಂದಿನಿಂದ ಪ್ರತಿ ವರ್ಷ ಅದರ ಮೌಲ್ಯ ಹೆಚ್ಚಾಗುತ್ತಿದ್ದು, ಕಳೆದ ವರ್ಷ 2 ಕೋಟಿ ರೂ. ನೋಟುಗಳಿಂದ ಅಲಂಕಾರ ಮಾಡಲಾಗಿತ್ತು. ಈ ಬಾರಿ ಸುಮಾರು 2.3 ಕೋಟಿ ನೋಟುಗಳಿಂದ ಗಣೇಶನನ್ನು ಅಲಂಕಾರ ಮಾಡಲಾಗಿದೆ. ಪ್ರತಿವರ್ಷ ಕೂಡಾ ನೋಟುಗಳ ಅಲಂಕಾರವನ್ನು ಮಾಡಲಾಗುತ್ತಿದ್ದು ಇಲ್ಲಿ ಯಾವುದೇ ಕಳ್ಳತನವಾಗಿರಲಿ ಅಥವಾ ಇನ್ಯಾವುದೇ ಅಹಿತಕ ಘಟನೆಗಳು ನಡೆದಿಲ್ಲ ಎಂಬುವುದು ವಿಶೇಷ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ