AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kabaddi: ವಿದ್ಯಾರ್ಥಿನಿಯರು ಕೆಡವಿದರೂ ಮತ್ತೆ ಎದ್ದು ಕಬಡ್ಡಿ ಆಡಿದ ಸಚಿವೆಯ ಕ್ರೀಡಾ ಸ್ಫೂರ್ತಿಗೆ ಜನ ಫಿದಾ

ಸಚಿವೆ ರೋಜಾ ಅವರು ಕೆಳಕ್ಕೆ ಬಿದ್ದರೂ ಸಹ ಮತ್ತೆ ಮೇಲೆ ಎದ್ದು ವಿದ್ಯಾರ್ಥಿನಿಯರ ಜೊತೆ ಕಬಡ್ಡಿ ಆಡಿದ್ದು ವಿಡಿಯೋ ವೈರಲ್ ಆಗಿದೆ. ಇನ್ನು ರೋಜಾ ಅವರ ಕ್ರೀಡಾ ಸ್ಫೂರ್ತಿಗೆ ಜನ ಫಿದಾ ಆಗಿದ್ದಾರೆ.

Kabaddi: ವಿದ್ಯಾರ್ಥಿನಿಯರು ಕೆಡವಿದರೂ ಮತ್ತೆ ಎದ್ದು ಕಬಡ್ಡಿ ಆಡಿದ ಸಚಿವೆಯ ಕ್ರೀಡಾ ಸ್ಫೂರ್ತಿಗೆ ಜನ ಫಿದಾ
ಕಬಡ್ಡಿ ಆಡಿದ ಆಂಧ್ರ ಪ್ರದೇಶದ ಸಚಿವೆ ರೋಜಾ ಸೆಲ್ವಮಣಿ
TV9 Web
| Edited By: |

Updated on: Nov 29, 2022 | 7:53 PM

Share

ಚಿತ್ತೂರು: ಆಂಧ್ರ ಪ್ರದೇಶದ ಪ್ರವಾಸೋದ್ಯಮ, ಸಂಸ್ಕೃತಿ ಮತ್ತು ಯುವ ಪ್ರಗತಿ ಸಚಿವೆ ಹಾಗೂ ನಟಿ ರೋಜಾ ಸೆಲ್ವಮಣಿ(Roja Selvamani) ಅವರು ವಿದ್ಯಾರ್ಥಿನಿಯರೊಂದಿಗೆ ಕಬಡ್ಡಿ(kabaddi) ಆಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಚಿತ್ತೂರು ಜಿಲ್ಲೆಯ ನಗರಿ ಕ್ಷೇತ್ರದಲ್ಲಿ ಆಯೋಜಿಸಿದ್ದ ಜಗನ್ನಣ್ಣ ಸ್ಪೋರ್ಟ್ಸ್​ ಸೆಲೆಬ್ರೇಷನ್​ ಉದ್ಘಾಟಿಸಿ, ವಿದ್ಯಾರ್ಥಿನಿಯರೊಂದಿಗೆ ಕಬಡ್ಡಿ ಆಡಿದರು. ​ ವಿದ್ಯಾರ್ಥಿನಿಯರನ್ನು ಹುರಿದುಂಬಿಸುವ ಸಲುವಾಗಿ ಕಬಡ್ಡಿ ಅಖಾಡಕ್ಕಿಳಿದ ರೋಜಾ ಅವರು, ಕಬಡ್ಡಿ..ಕಬಡ್ಡಿ ಎನ್ನುತಾ ರೈಡ್​ ಮಾಡಲು ಹೋದಾಗ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿಬಿದ್ದಿದ್ದು, ಬಳಿಕ ಬಿಡಿಸಿಕೊಳ್ಳುವ ಯತ್ನದಲ್ಲಿ ನೆಲಕ್ಕೆ ಬಿದ್ದರು.ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರೋಜಾ ಅವರು ಕೆಳಕ್ಕೆ ಬಿದ್ದರೂ ಸಹ ಮತ್ತೆ ಮೇಲೆ ಎದ್ದು ವಿದ್ಯಾರ್ಥಿನಿಯರ ಜೊತೆ ಕಬಡ್ಡಿ ಆಡಿದರು. ರೋಜಾ ಅವರ ಈ ಕ್ರೀಡಾಸ್ಫೂರ್ತಿ ಕಂಡು ಅಲ್ಲಿ ನೆರೆದಿದ್ದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲೂ ಸಹ ರೋಜಾ ಅವರು ವಿದ್ಯಾರ್ಥಿನಿಯರನ್ನು ಹುರಿದುಂಬಿಸುತ್ತಿರುವ ರೀತಿಗೆ ಫಿದಾ ಆಗಿದ್ದು, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದೇ ಮೊದಲೇನಲ್ಲ ಈ ಹಿಂದೆಯೂ ರೋಜಾ ಅವರು ಯುವಕರೊಂದಿಗೆ ಕಬಡ್ಡಿ ಆಡುವ ಮೂಲಕ ಭಾರಿ ಸುದ್ದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್