AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 3 ರೂ.ಗೆ ಅನ್‌ಲಿಮಿಟೆಡ್‌ ಬಿರಿಯಾನಿ… ಆಫರ್‌ ಕೊಟ್ಟ ಹೊಟೇಲ್‌ ಮುಂದೆ ಕ್ಯೂ ನಿಂತ ಜನ

ಬಿರಿಯಾನಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಈ ಬಿರಿಯಾನಿಗೆ 200, 300 ರೂಪಾಯಿ ಇದ್ರೂ ಕೂಡಾ ಇಷ್ಟಪಟ್ಟು ಇದನ್ನ ತಿನ್ನುತ್ತಾರೆ. ಇನ್ನೂ ಕಮ್ಮಿ ಬೆಲೆಗೆ ಬಿರಿಯಾನಿ ಕೊಡ್ತೀವಿ ಅಂದ್ರೆ ಯಾರು ತಾನೇ ಬಿಡ್ತಾರೆ ಹೇಳಿ, ಅದೇ ರೀತಿ ಇಲ್ಲೊಂದು ಕಡೆ 3 ರೂಪಾಯಿಗೆ ಅನ್‌ಲಿಮಿಟೆಡ್‌ ಬಿರಿಯಾನಿ ನೀಡುವುದಾಗಿ ವಿಶೇಷ ಆಫರ್‌ ಒಂದನ್ನು ನೀಡಲಾಗಿದ್ದು, ಈ ಮೂರು ರೂಪಾಯಿ ಬಿರಿಯಾನಿ ತಿನ್ನಲು ಹೊಟೇಲ್‌ ಮುಂದೆ ಜನ ಸಾಗರವೇ ಜಮಾಯಿಸಿದೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 07, 2024 | 6:37 PM

Share

ಗ್ರಾಹಕರನ್ನು ಸೆಳೆಯುವ ಸಲುವಾಗಿ ಅಂಗಡಿ ಮಾಲೀಕರು ಹಬ್ಬ ಇತ್ಯಾದಿ ಸಮಯಗಳಲ್ಲಿ ವಿವಿಧ ಮಾರುಕಟ್ಟೆ ತಂತ್ರಗಳನ್ನು ಉಪಯೋಗಿಸುತ್ತಿರುತ್ತಾರೆ. ಇವುಗಳಿಗೆ ಆಕರ್ಷಿತರಾಗಿ ಜನರು ಈ ರಿಯಾಯಿತಿ ದರದಲ್ಲಿ ಸಿಗುವ ವಸ್ತುಗಳನ್ನು ಖರೀದಿಸಿಲು ಮುಗಿ ಬೀಳುತ್ತಾರೆ. ಅದೇ ರೀತಿ ಇಲ್ಲೊಬ್ರು ಹೊಟೇಲ್‌ ಮಾಲೀಕ 3 ರೂಪಾಯಿಗೆ ಅನ್‌ಲಿಮಿಟೆಲ್‌ ಬಿರಿಯಾನಿ ನೀಡುವುದಾಗಿ ಭರ್ಜರಿ ಆಫರ್‌ ಒಂದನ್ನು ನೀಡಿದ್ದು, ಸಿಕ್ಕಿದೆ ಚಾನ್ಸು ಎನ್ನುತ್ತಾ ಬಿರಿಯಾನಿ ಪ್ರಿಯರು 3 ರೂಪಾಯಿ ಬಿರಿಯಾನಿ ಸಮಿಯಲು ಹೊಟೇಲ್‌ ಮುಂದೆ ಜಮಾಯಿಸಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಸಾಮಾನ್ಯವಾಗಿ ಒಂದು ಪ್ಲೇಟ್‌ ಬಿರಿಯಾನಿಗೆ 150 ರಿಂದ 200, 300 ರೂ. ಇರುತ್ತೆ. ಹೀಗಿರುವಾಗ ಕಮ್ಮಿ ಬೆಲೆಗೆ ಬಿರಿಯಾನಿ ಸಿಗುತ್ತೆ ಅಂದ್ರೆ ಈ ಸುರ್ಣಾವಕಾಶವನ್ನು ಯಾರಾದ್ರೂ ಮಿಸ್‌ ಮಾಡ್ತಾರಾ. ಖಂಡಿತವಾಗಿಯೂ ಇಲ್ಲ. ಇದೇ ರೀತಿ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಜಂಗಾರೆಡ್ಡಿಗುಂಡೆನಲ್ಲಿ ಹೊಸ ರೆಸ್ಟೋರೆಂಟ್‌ ಉದ್ಘಾಟನೆಯ ಪ್ರಯುಕ್ತ ರೆಸ್ಟೋರೆಂಟ್‌ ಮಾಲೀಕ 3 ರೂಪಾಯಿಗೆ ಅನ್‌ಲಿಮಿಟೆಡ್‌ ಕೊಡುವುದಾಗಿ ಬಿಗ್‌ ಆಫರ್‌ ಒಂದನ್ನು ನೀಡಿದ್ದು, ಈ ಕಮ್ಮಿ ಬೆಲೆಯ ಭರ್ಜರಿ ಭೋಜನವನ್ನು ಸವಿಯಲು ಬಿರಿಯಾನಿ ಪ್ರಿಯರು ಕ್ಯೂನಲ್ಲಿ ಬಂದಿದ್ರು.

ಇದನ್ನೂ ಓದಿ: ಕೊಡಲಿಯಿಂದ ತನ್ನ ಗುಪ್ತಾಂಗವನ್ನೇ ಕತ್ತರಿಸಿಕೊಂಡ ಆಸಾಮಿ; ಕಾರಣ ಏನ್‌ ಗೊತ್ತಾ?

ರೆಸ್ಟೋರೆಂಟ್‌ ಉದ್ಘಾಟನೆಯ ದಿನ ಬೆಳಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ 3 ರೂಪಾಯಿಗೆ ಅನ್‌ಲಿಮಿಟೆಡ್‌ ಬಿರಿಯಾನಿ ಸೇರಿದಂತೆ ಹಲವು ಆಫರ್‌ಗಳ ಜಾಹಿರಾತು ಜಾಹೀರಾತು ಸಿಕ್ಕಾಪಟ್ಟೆ ಪ್ರಚಾರವನ್ನು ಪಡೆದುಕೊಂಡಿದ್ದು, ರೆಸ್ಟೋರೆಂಟ್‌ ಉದ್ಘಾಟನೆಯ ದಿನ ಅಂದರೆ ಶನಿವಾರ (ಅ.5) ಬಿರಿಯಾನಿ ಸವಿಯಲು ಜನ ಸಾಗರವೇ ಸೇರಿತ್ತು. ಗಲಾಟೆ ಅಥವಾ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬಿಗಿ ಭದ್ರತೆಯನ್ನು ಕೂಡಾ ಏರ್ಪಡಿಸಲಾಗಿತ್ತು. ಸುಮಾರು 4,000 ರಿಂದ 5,000 ಜನರು ಈ ಭರ್ಜರಿ ಆಫರ್‌ ಅನ್ನು ಪಡೆದುಕೊಂಡಿದ್ದು, ಮಿಕ್ಕವರು 3 ರೂಪಾಯಿ ಬಿರಿಯಾನಿ ಸಿಗದೆ ನಿರಾಸೆ ಅನುಭವಿಸಿದರು.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ