AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಡು ಬೀದಿಯಲ್ಲಿ ನಡೆಯಿತು ಕಾಳಿಂಗ ಸರ್ಪಗಳ ಕಾಳಗ, ಕೊನೆಗೆ ಗೆದ್ದಿದ್ದು ಯಾರು?

ಹಾವು ಮತ್ತು ಮುಂಗುಸಿಗಳು ಪರಸ್ಪರ ಜಗಳವಾಡುವುದನ್ನು ನೋಡಿರುತ್ತೀರಿ ಅಲ್ವಾ. ಇದಕ್ಕೆ ಸಂಬಂದಪಟ್ಟ ಫೋಟೋ ವಿಡಿಯೋಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಆದ್ರೆ ಇಲ್ಲೊಂದು ತದ್ವಿರುದ್ಧವಾದ ಘಟನೆ ನಡೆದಿದ್ದು, ಎರಡು ಹಾವುಗಳೇ ನಡು ಬೀದಿಯಲ್ಲಿ ಬದ್ಧ ವೈರಿಗಳಂತೆ ಕಾದಾಟ ನಡೆಸಿವೆ. ಇದಕ್ಕೆ ಸಂಬಂದಪಟ್ಟ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

Viral: ನಡು ಬೀದಿಯಲ್ಲಿ ನಡೆಯಿತು ಕಾಳಿಂಗ ಸರ್ಪಗಳ ಕಾಳಗ, ಕೊನೆಗೆ ಗೆದ್ದಿದ್ದು ಯಾರು?
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 23, 2024 | 4:34 PM

Share

ಹಾವು ಮುಂಗುಸಿಗಳು ಜಗಳವಾಡುವುದು ಕಾಮನ್.‌ ಹಾವು ಮುಂಗುಸಿಗಳ ಜಗಳದ ಸಾಕಷ್ಟು ವಿಡಿಯೋಗಳು ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಆದ್ರೆ ಹಾವುಗಳು ಪರಸ್ಪರ ಬಡೆದಾಡಿಕೊಳ್ಳುವುದು ಕಾಣ ಸಿಗುವುದೇ ತೀರಾ ಅಪರೂಪ. ಆದ್ರೆ ಇಲ್ಲೊಂದು ಇಂತಹ ಘಟನೆ ನಡೆದಿದ್ದು, ಮಟ ಮಟ ಮಧ್ಯಾಹ್ನದ ವೇಳೆ ಬೀದಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪಗಳೆರಡು ಪರಸ್ಪರ ಕಾದಾಡಿವೆ. ಎರಡು ಕಾಳಿಂಗ ಸರ್ಪಗಳ ನಡುವೆ ನಡೆದ ಬಿಗ್‌ ಫೈಟ್‌ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು, ಇದಕ್ಕೆ ಸಂಬಂದಪಟ್ಟ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಪಾರ್ವತಿಪುರಂ ಮಂಡಲದ ಚಿನ್ನ ವೂಟಗೆದ್ದ ಎಂಬಲ್ಲಿ ನಡೆದಿದ್ದು, ಎರಡು ಕಾಳಿಂಗ ಸರ್ಪಗಳ ನಡುವೆ ನಡೆದ ಬಿಗ್‌ ಫೈಟ್‌ ಕಂಡು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಗ್ರಾಮದ ಪಕ್ಕದಲ್ಲೇ ಇದ್ದ ಬೆಟ್ಟದ ಬಳಿಯಿಂದ 18 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಟ ಮಟ ಮಧ್ಯಾಹ್ನ ಆಹಾರವನ್ನರಸುತ್ತಾ ಜನವಸತಿ ಪ್ರದೇಶಕ್ಕೆ ಬಂದಿದೆ. ಅದೇ ಸಮಯದಲ್ಲಿ ಇನ್ನೊಂದು ಸಣ್ಣ ಗಾತ್ರದ ಕಾಳಿಂದ ಸರ್ಪವೊಂದು ಎದುರಾಗಿದ್ದು, ಈ ಎರಡು ಹಾವುಗಳ ನಡುವೆ ಬೀದಿಯಲ್ಲಿಯೇ ಬಿಗ್‌ ಫೈಟ್‌ ನಡೆದಿದೆ. ಹಾವು ಬುಸುಗುಡುವ ಸದ್ದನ್ನು ಕೇಳಿ ಓಡಿ ಬಂದ ಗ್ರಾಮಸ್ಥರು ಹಾವುಗಳ ಕಾದಾಟ ನೋಡಿ ಬೆಚ್ಚಿ ಬಿದ್ದಿದ್ದಾರೆ. ದೈತ್ಯ ಕಾಳಿಂಗ ಸರ್ಪದ ಏಟಿಗೆ ಸಣ್ಣ ಗಾತ್ರದ ಕಾಳಿಂಗ ಸರ್ಪ ಸಾವನ್ನಪ್ಪಿದ್ದು, ಈ ದೈತ್ಯ ಹಾವನ್ನು ಹೀಗೆ ಬಿಟ್ಟರೆ ಅಪಾಯ ಎಂದು ನಂತರ ಗ್ರಾಮಸ್ಥರು ದೈತ್ಯ ಕಾಳಿಂಗ ಸರ್ಪವನ್ನು ಕೂಡಾ ಹೊಡೆದು ಸಾಯಿಸಿದ್ದಾರೆ.

ಕಳೆದ ಗುರುವಾರ ಅಂದರೆ ಸೆಪ್ಟೆಂಬರ್‌ 19 ರಂದು ಈ ಘಟನೆ ನಡೆದಿದ್ದು, ಈ ಕುರಿತ ಫೋಟೋವೊಂದು ವೈರಲ್‌ ಆಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ