AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಯುವಕನ ಪಾಲಿಗೆ ಯಮನಾದ ಆತನೇ ಖರೀದಿಸಿದ ಹೊಸ ಬೈಕ್

ಸಾವು ಯಾವಾಗ ಹೇಗೆ ಬರುತ್ತದೆ ಎಂದು ಹೇಳಲು ಅಸಾಧ್ಯ. ಇಲ್ಲೊಂದು ಆಘಾತಕಾರಿ ಘಟನೆಯೊಂದು ನಡೆದಿದ್ದು, ದಸರಾ ದಿನದಂದು ಖರೀದಿಸಿದ ಹೊಸ ಬೈಕ್ ಯುವಕ ಪಾಲಿಗೆ ಯಮನಾಗಿದೆ. ಸ್ನೇಹಿತನೊಂದಿಗೆ ಮುಂಜಾನೆ ಟಿಫನ್‌ಗೆ ಹೋಗುತ್ತಿದ್ದಂತೆ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮುಂದೇನಾಯ್ತು ಎನ್ನುವುದರ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Viral: ಯುವಕನ ಪಾಲಿಗೆ ಯಮನಾದ ಆತನೇ ಖರೀದಿಸಿದ ಹೊಸ ಬೈಕ್
ಮೃತ ಯುವಕ ಹರೀಶ್Image Credit source: Social Media
ಸಾಯಿನಂದಾ
|

Updated on:Oct 09, 2025 | 11:35 AM

Share

ವಿಶಾಖಪಟ್ಟಣಂ, ಅಕ್ಟೋಬರ್ 09: ಸಾವು ಯಾರನ್ನು ಹೇಳಿ ಕೇಳಿ ಬರುವುದಿಲ್ಲ. ಸಾವು ಹೇಗೆ ಬರುತ್ತೆ ಎಂದು ಹೇಳಲು ಕೂಡಾ ಸಾಧ್ಯವಿಲ್ಲ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಯುವಕನೊಬ್ಬನು ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿದ್ದ. ಆದರೆ ಈ ಬೈಕ್ ಯೇ ಆತನ ಜೀವವನ್ನು ಕಸಿದುಕೊಂಡಿದೆ. ಹರೀಶ್ ಎಂಬ ಯುವಕನು ಇಂಟರ್ಮೀಡಿಯೇಟ್ ಮುಗಿಸಿದ್ದು, ಪ್ರಸ್ತುತ ಕೆಲಸದ ಹುಡುಕಾಟದಲ್ಲಿದ್ದ. ಪೋಷಕರ ಮೇಲೆ ಹೊಸ ಬೈಕ್ (New bike) ಖರೀದಿಸುವಂತೆ ಒತ್ತಡ ಹೇರುತ್ತಿದ್ದ. ಮಗನ ಆಸೆಗೆ ಮಣಿದು ದಸರಾದಂದು ಹೊಸ ಬೈಕ್ ತಂದು ಕೊಟ್ಟಿದ್ದಾರೆ. ಆದರೆ ಈ ಯುವಕನ ಖುಷಿಯೂ ಎರಡು ದಿನವು ಉಳಿಯಲಿಲ್ಲ. ಬೆಳಗ್ಗಿನ ವೇಳೆ ದ್ವಾರಕಾನಗರದಿಂದ ಸ್ನೇಹಿತನೊಂದಿಗೆ ಟಿಫನ್‌ಗೆಂದು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು, ಆ ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತ ಪಟ್ಟಿದ್ದಾನೆ. ಈ ಘಟನೆಯೂ ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ (Visakhapatnam of Andhra Pradesh) ನಡೆದಿದೆ ಎನ್ನಲಾಗಿದೆ.

ಇಷ್ಟ ಪಟ್ಟು ಹೊಸ ಬೈಕ್ ಖರೀದಿಸಿದ್ದ ಯುವಕ

ಮಹಾರಾಣಿಪೇಟೆಯ ಆಟೋ ಚಾಲಕ ಶ್ರೀನಿವಾಸ್ ಅವರ 19 ವರ್ಷದ ಮಗನೇ ಈ ಹರೀಶ್. ಇಂಟರ್ಮೀಡಿಯೇಟ್ ಮುಗಿಸಿದ್ದು ಹರೀಶ್ ನಿರುದ್ಯೋಗಿಯಾಗಿದ್ದ. ಹೀಗಿರುವಾಗ ಆತನ ಎಲ್ಲಾ ಸ್ನೇಹಿತರು ಬೈಕ್ ಖರೀದಿಸುತ್ತಿದ್ದರಿಂದ ಕಳೆದ ಕೆಲವು ವರ್ಷಗಳಿಂದ ತನ್ನ ಪೋಷಕರ ಮೇಲೆ ಹೊಸ ಬೈಕ್ ಖರೀದಿಸುವಂತೆ ಒತ್ತಡ ಹೇರುತ್ತಿದ್ದ. ಹೀಗಿರುವಾಗ ಬೈಕ್ ಕೊಡಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ.

ಇದನ್ನೂ ಓದಿ:Viral: ಮೃತ್ಯುಕೂಪವಾದ ರಸ್ತೆ ಗುಂಡಿ; ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ

ಇದನ್ನೂ ಓದಿ
Image
ಚಲಿಸುತ್ತಿದ್ದ ಕಾರಿ ಬೋನೆಟ್​ಗೆ ಅರೆಬೆತ್ತಲೆ ಸ್ಥಿತಿಯಲ್ಲಿ ಜಿಗಿದ ಯುವಕ
Image
ಗುಂಡಿ ತಪ್ಪಿಸಲು ಹೋಗಿ ರಸ್ತೆಗೆ ಬಿದ್ದ ಮಹಿಳೆ, ಮೈ ಮೇಲೆ ಹರಿದ ಲಾರಿ
Image
ಸೈಕಲ್​ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿ ಮೇಲೆ ಬೀದಿ ನಾಯಿ ದಾಳಿ
Image
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!

ಯುವಕನನ್ನು ಬಲಿ ಪಡೆದುಕೊಂಡ ಹೊಸ ಬೈಕ್

ಮಗನ ಆಸೆಗೆ ಬೇಡ ಎನ್ನದೇ ಹೆತ್ತವರು 3 ಲಕ್ಷ ರೂ ಸಾಲ ಮಾಡಿ ದಸರಾ ದಿನದಂದು ಹರೀಶ್‌ಗಾಗಿ ಹೊಸ ಬೈಕ್ ಖರೀದಿಸಿ ಕೊಟ್ಟಿದ್ದಾರೆ. ಆದರೆ ಈ ಸಂತೋಷವು ಹರೀಶ್‌ಗೆ ಎರಡು ದಿನವೂ ಉಳಿಯಲಿಲ್ಲ. ಬೈಕ್ ಖರೀದಿಸಿದ ಕೇವಲ ಎರಡು ದಿನಗಳ ನಂತರ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದಾನೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:34 am, Thu, 9 October 25

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!