AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಅರ್ಚಕರ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್; ವಿಡಿಯೊ ವೈರಲ್

Viral video: ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಅರ್ಚಕರ ಪ್ರಾಣ ರಕ್ಷಿಸಿದ ಟ್ರಾಫಿಕ್​ ಪೊಲೀಸ್​. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​.

Andhra Pradesh: ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಅರ್ಚಕರ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್; ವಿಡಿಯೊ ವೈರಲ್
ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಅರ್ಚಕರ ಪ್ರಾಣ ರಕ್ಷಿಸಿದ ಟ್ರಾಫಿಕ್​ ಪೊಲೀಸ್
TV9 Web
| Edited By: |

Updated on:Nov 23, 2021 | 12:01 PM

Share

ಆಂಧ್ರ ಪ್ರದೇಶದಲ್ಲಿ (Andhra Pradesh) ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಅರ್ಚಕನನ್ನು ಟ್ರಾಫಿಕ್ ಪೊಲೀಸ್ ರಕ್ಷಿಸಿ ಮಾನವೀಯತೆ ಮೆರೆದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ (Social media) ಫುಲ್ ವೈರಲ್ ಆಗಿದೆ. ಟ್ರಾಫಿಕ್ ಪೊಲೀಸ್ (Traffic police) ನಾಯಕ್ ಅವರು ತಮ್ಮ ಜೀವವನ್ನೇ ಪಣಕ್ಕಿಟ್ಟು ನೆಲ್ಲೂರಿನ ಕೊಡವಲೂರು ಶಿವ ದೇವಸ್ಥಾನದಲ್ಲಿನ ಅರ್ಚಕರ ಜೀವ ಉಳಿಸಿದ್ದಾರೆ. ಅರ್ಚಕರು ವೆಕಟೇಶ್ವರಪುರಂ ಸೇತುವೆಯ ಮೂಲಕ ಬೈಕ್​ನಲ್ಲಿ ಸಾಗುತ್ತಿದ್ದರು. ಆ ಸಮಯದಲ್ಲಿ ಪ್ರವಾಹಕ್ಕೆ (Flood) ಸಿಲುಕಿ ಜೀವ ಉಳಿಸಿಕೊಳ್ಳಲು ಕಿರುಚಾಡುತ್ತಿದ್ದರು. ಅದನ್ನು ಗಮನಿಸಿದ ಟ್ರಾಫಿಕ್ ಪೊಲೀಸ್ ನಾಯಕ್ ಅವರು ಅರ್ಚಕರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ನೆಲ್ಲೂರು ಜಿಲ್ಲೆಯ ಕೊಡವಲೂರು ಶಿವ ದೇವಾಲಯದಲ್ಲಿನ ಅರ್ಚಕರು ವೆಂಕಟೇಶ್ವರಪುರಂ ಸೇತುವೆಯಲ್ಲಿ ಹೋಗುತ್ತಿರುವಾಗ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು. ಸಹಾಯ ಮಾಡಿ ಎಂದು ಕೂಗುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸ್ ನಾಯಕ್ ಅವರು ಅರ್ಚಕರ ಪ್ರಾಣ ರಕ್ಷಿಸಿದ್ದಾರೆ ಎಂದು ಶೀರ್ಷಿಕೆ ನೀಡುವ ಮೂಲಕ ವಿಡಿಯೊ ಪೋಸ್ಟ್ ಮಾಡಲಾಗಿದೆ.

ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲವರು ಟ್ರಾಫಿಕ್ ಪೊಲೀಸ್ ನಾಯಕ್ ಅವರ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು ಧನ್ಯವಾದ ತಿಳಿಸಿದ್ದಾರೆ. ಬಿಡದೇ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಅಪಾರ ಪ್ರಮಾಣದ ಜೀವ ಹಾನಿ, ಆಸ್ತಿ-ಪಾಸ್ತಿ ನಷ್ಟಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಭಾರೀ ಮಳೆಯ ಪರಿಣಾಮ ಒಟ್ಟು 34 ಮಂದಿ ಸಾವಿಗೀಡಾಗಿದ್ದು, 10 ಮಂದು ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ:

Bengaluru Rain: ಮುಂದುವರೆದ ಮಳೆ ಅಬ್ಬರ, ಕೇಂದ್ರಿಯ ವಿಹಾರ ಅಪಾರ್ಟ್​​ಮೆಂಟ್​​ನಲ್ಲಿ ಪವರ್ ಕಟ್

Andhra Pradesh Rains: ಭಾರಿ ಮಳೆಗೆ ದಕ್ಷಿಣದ ರಾಜ್ಯಗಳು ತತ್ತರ; ಆಂಧ್ರದಲ್ಲಿ 34 ಸಾವು, 10 ಮಂದಿ ನಾಪತ್ತೆ

Published On - 11:57 am, Tue, 23 November 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ