AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ
ಮಧು, ಜಿಜೆಮ್​
TV9 Web
| Edited By: |

Updated on: Dec 30, 2021 | 1:32 PM

Share

ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ವಿಶೇಷ ಕ್ಷಣ. ಋಣಾನುಬಂಧ ಎನ್ನುವುದು ಎಲ್ಲೊ ಇರುವವರನ್ನು ಇನ್ನೆಲ್ಲೂ ಸೇರಿಸುತ್ತದೆ. ಭಾಷೆ, ದೇಶ, ಜಾತಿ, ಗಡಿ ಈ ರೀತಿಯ ಯಾವುದೇ ಕಟ್ಟುಪಾಡಿಲ್ಲದ ಸುಂದರ ಸಂಬಂಧ ಪ್ರೀತಿ. ಹೀಗಾಗಿ ಕೆಲವರು ಸಂಗಾತಿ ಹುಡುಕಲು ವಿದೇಶಕ್ಕೂ ತೆರಳಬೇಕಾದೀತು. ಅಂತಹ ಒಂದು ಪ್ರೀತಿಯ ಕತೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಹೌದು, ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ. ಗುಂಟೂರು ಮೂಲದ ವರ ಮಧು ಸಂಕೀರ್ತ್ ಹಾಗೂ ಟರ್ಕಿಯ ವಧು ಜಿಜೆಮ್​ ವಿವಾಹವಾಗಿದ್ದಾರೆ.

ಮಧು 2016ರಲ್ಲಿ ಜಿಜೆಮ್​ ಅವರನ್ನು ಭೇಟಿಯಾಗಿದ್ದರು. ಮಧು ಕೆಲಸದ ಪ್ರಯುಕ್ತ ಟರ್ಕಿಗೆ ತೆರಳಿದ ವೇಳೆ ಜಿಜೆಮ್​​ ಪರಿಚಯವಾಗಿದ್ದು ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರ ನಡುವೆ ಸ್ನೇಹ ಬೆಳೆದಿದೆ. ಸದ್ಯ ಈ ದಂಪತಿಯ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸ್ನೇಹವಾಗಿ ಕೆಲವೇ ದಿನಗಳಲ್ಲಿ ಅವರಲ್ಲಿ ಪ್ರೀತಿ ಹುಟ್ಟಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇಬ್ಬರ ಮನೆಯಲ್ಲೂ ಪೋಷಕರ ವಿರೋಧ ವ್ಯಕ್ತವಾಗಿತ್ತು. ಕೊನೆಗೂ ಪೋಷಕರ ಒಪ್ಪಿಗೆ ಪಡೆದು 2019ರಲ್ಲಿ ಮಧು ಹಾಗೂ ಜಿಜೆಮ್​ ನಿಶ್ಷಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿ 2020ರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಕೊರೋನಾ ಕಾರಣದಿಂದ ಮದುವೆ ಮುಂದೂಡಲ್ಪಟ್ಟಿತ್ತು. ಇದೀಗ ಇಬ್ಬರೂ ಹಸೆಮಣೆ ಏರುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.

turky girl married indian men

ಹಿರಿಯರು, ಕುಟುಂಬ ಸದಸ್ಯರ ಆಶೀರ್ವಾದ ಪಡೆದು ಎರಡು ದಿನಗಳ ಹಿಂದೆ ವಿವಾಹವಾಗಿದ್ದಾರೆ. ಮಧು ಹಾಗೂ ಜಿಜೆಮ್​ ಹಿಂದೂ ಮತ್ತು ತೆಲುಗು ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಭಾಷೆ, ಗಡಿ, ಜಾತಿ, ಮತ ಎಲ್ಲವನ್ನೂ ಬದಿಗೊತ್ತಿ ಪ್ರೀತಿಯನ್ನು ಮುನ್ನಲೆಗೆ ತಂದು ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ಫೋಟೋಗಳನ್ನು ನೋಡಿ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ