AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ
ಮಧು, ಜಿಜೆಮ್​
TV9 Web
| Edited By: |

Updated on: Dec 30, 2021 | 1:32 PM

Share

ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ವಿಶೇಷ ಕ್ಷಣ. ಋಣಾನುಬಂಧ ಎನ್ನುವುದು ಎಲ್ಲೊ ಇರುವವರನ್ನು ಇನ್ನೆಲ್ಲೂ ಸೇರಿಸುತ್ತದೆ. ಭಾಷೆ, ದೇಶ, ಜಾತಿ, ಗಡಿ ಈ ರೀತಿಯ ಯಾವುದೇ ಕಟ್ಟುಪಾಡಿಲ್ಲದ ಸುಂದರ ಸಂಬಂಧ ಪ್ರೀತಿ. ಹೀಗಾಗಿ ಕೆಲವರು ಸಂಗಾತಿ ಹುಡುಕಲು ವಿದೇಶಕ್ಕೂ ತೆರಳಬೇಕಾದೀತು. ಅಂತಹ ಒಂದು ಪ್ರೀತಿಯ ಕತೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಹೌದು, ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ. ಗುಂಟೂರು ಮೂಲದ ವರ ಮಧು ಸಂಕೀರ್ತ್ ಹಾಗೂ ಟರ್ಕಿಯ ವಧು ಜಿಜೆಮ್​ ವಿವಾಹವಾಗಿದ್ದಾರೆ.

ಮಧು 2016ರಲ್ಲಿ ಜಿಜೆಮ್​ ಅವರನ್ನು ಭೇಟಿಯಾಗಿದ್ದರು. ಮಧು ಕೆಲಸದ ಪ್ರಯುಕ್ತ ಟರ್ಕಿಗೆ ತೆರಳಿದ ವೇಳೆ ಜಿಜೆಮ್​​ ಪರಿಚಯವಾಗಿದ್ದು ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರ ನಡುವೆ ಸ್ನೇಹ ಬೆಳೆದಿದೆ. ಸದ್ಯ ಈ ದಂಪತಿಯ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸ್ನೇಹವಾಗಿ ಕೆಲವೇ ದಿನಗಳಲ್ಲಿ ಅವರಲ್ಲಿ ಪ್ರೀತಿ ಹುಟ್ಟಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇಬ್ಬರ ಮನೆಯಲ್ಲೂ ಪೋಷಕರ ವಿರೋಧ ವ್ಯಕ್ತವಾಗಿತ್ತು. ಕೊನೆಗೂ ಪೋಷಕರ ಒಪ್ಪಿಗೆ ಪಡೆದು 2019ರಲ್ಲಿ ಮಧು ಹಾಗೂ ಜಿಜೆಮ್​ ನಿಶ್ಷಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿ 2020ರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಕೊರೋನಾ ಕಾರಣದಿಂದ ಮದುವೆ ಮುಂದೂಡಲ್ಪಟ್ಟಿತ್ತು. ಇದೀಗ ಇಬ್ಬರೂ ಹಸೆಮಣೆ ಏರುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.

turky girl married indian men

ಹಿರಿಯರು, ಕುಟುಂಬ ಸದಸ್ಯರ ಆಶೀರ್ವಾದ ಪಡೆದು ಎರಡು ದಿನಗಳ ಹಿಂದೆ ವಿವಾಹವಾಗಿದ್ದಾರೆ. ಮಧು ಹಾಗೂ ಜಿಜೆಮ್​ ಹಿಂದೂ ಮತ್ತು ತೆಲುಗು ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಭಾಷೆ, ಗಡಿ, ಜಾತಿ, ಮತ ಎಲ್ಲವನ್ನೂ ಬದಿಗೊತ್ತಿ ಪ್ರೀತಿಯನ್ನು ಮುನ್ನಲೆಗೆ ತಂದು ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ಫೋಟೋಗಳನ್ನು ನೋಡಿ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು