Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ.

ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ
ಮಧು, ಜಿಜೆಮ್​
Follow us
TV9 Web
| Updated By: Pavitra Bhat Jigalemane

Updated on: Dec 30, 2021 | 1:32 PM

ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ವಿಶೇಷ ಕ್ಷಣ. ಋಣಾನುಬಂಧ ಎನ್ನುವುದು ಎಲ್ಲೊ ಇರುವವರನ್ನು ಇನ್ನೆಲ್ಲೂ ಸೇರಿಸುತ್ತದೆ. ಭಾಷೆ, ದೇಶ, ಜಾತಿ, ಗಡಿ ಈ ರೀತಿಯ ಯಾವುದೇ ಕಟ್ಟುಪಾಡಿಲ್ಲದ ಸುಂದರ ಸಂಬಂಧ ಪ್ರೀತಿ. ಹೀಗಾಗಿ ಕೆಲವರು ಸಂಗಾತಿ ಹುಡುಕಲು ವಿದೇಶಕ್ಕೂ ತೆರಳಬೇಕಾದೀತು. ಅಂತಹ ಒಂದು ಪ್ರೀತಿಯ ಕತೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ಹೌದು, ಟರ್ಕಿ ದೇಶದ ಯುವತಿಯೊಬ್ಬಳು ಆಂದ್ರಪ್ರದೇಶದ ಯುವಕನನ್ನು ಭಾರತೀಯ ಸಂಪ್ರದಾಯದಂತೆ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಆಂದ್ರ ಪ್ರದೇಶದ ಗುಂಟೂರಿನಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾಗಿದ್ದಾರೆ. ಗುಂಟೂರು ಮೂಲದ ವರ ಮಧು ಸಂಕೀರ್ತ್ ಹಾಗೂ ಟರ್ಕಿಯ ವಧು ಜಿಜೆಮ್​ ವಿವಾಹವಾಗಿದ್ದಾರೆ.

ಮಧು 2016ರಲ್ಲಿ ಜಿಜೆಮ್​ ಅವರನ್ನು ಭೇಟಿಯಾಗಿದ್ದರು. ಮಧು ಕೆಲಸದ ಪ್ರಯುಕ್ತ ಟರ್ಕಿಗೆ ತೆರಳಿದ ವೇಳೆ ಜಿಜೆಮ್​​ ಪರಿಚಯವಾಗಿದ್ದು ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರ ನಡುವೆ ಸ್ನೇಹ ಬೆಳೆದಿದೆ. ಸದ್ಯ ಈ ದಂಪತಿಯ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸ್ನೇಹವಾಗಿ ಕೆಲವೇ ದಿನಗಳಲ್ಲಿ ಅವರಲ್ಲಿ ಪ್ರೀತಿ ಹುಟ್ಟಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇಬ್ಬರ ಮನೆಯಲ್ಲೂ ಪೋಷಕರ ವಿರೋಧ ವ್ಯಕ್ತವಾಗಿತ್ತು. ಕೊನೆಗೂ ಪೋಷಕರ ಒಪ್ಪಿಗೆ ಪಡೆದು 2019ರಲ್ಲಿ ಮಧು ಹಾಗೂ ಜಿಜೆಮ್​ ನಿಶ್ಷಿತಾರ್ಥ ಮಾಡಿಕೊಂಡಿದ್ದರು. ಈ ಜೋಡಿ 2020ರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಕೊರೋನಾ ಕಾರಣದಿಂದ ಮದುವೆ ಮುಂದೂಡಲ್ಪಟ್ಟಿತ್ತು. ಇದೀಗ ಇಬ್ಬರೂ ಹಸೆಮಣೆ ಏರುವ ಮೂಲಕ ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ.

turky girl married indian men

ಹಿರಿಯರು, ಕುಟುಂಬ ಸದಸ್ಯರ ಆಶೀರ್ವಾದ ಪಡೆದು ಎರಡು ದಿನಗಳ ಹಿಂದೆ ವಿವಾಹವಾಗಿದ್ದಾರೆ. ಮಧು ಹಾಗೂ ಜಿಜೆಮ್​ ಹಿಂದೂ ಮತ್ತು ತೆಲುಗು ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಭಾಷೆ, ಗಡಿ, ಜಾತಿ, ಮತ ಎಲ್ಲವನ್ನೂ ಬದಿಗೊತ್ತಿ ಪ್ರೀತಿಯನ್ನು ಮುನ್ನಲೆಗೆ ತಂದು ಹೊಸ ಜೀವನಕ್ಕೆ ಕಾಲಿರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ಫೋಟೋಗಳನ್ನು ನೋಡಿ ನೆಟ್ಟಿಗರು ಶುಭ ಹಾರೈಸಿದ್ದಾರೆ.

ಇದನ್ನೂ ಓದಿ:

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
ರವಿಚಂದ್ರನ್ ಲುಕ್​ನಲ್ಲಿ ಮಂಜು ಪಾವಗಡ; ನಾಗವಲ್ಲಿ ಆದ ಚೈತ್ರಾ ಕುಂದಾಪುರ
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
IPL 2025: RCB ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದ ದೇವದತ್ತ್ ಪಡಿಕ್ಕಲ್
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಪ್ರಿಯಕರನ ಜತೆ ಸೇರಿ ಪತಿಯ ಕೊಲೆ ಪ್ರಕರಣ, ಆರೋಪಿಗಳ ಮೇಲೆ ವಕೀಲರಿಂದ ಹಲ್ಲೆ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ಮಂತ್ರಗಳನ್ನು ಪಠಿಸುವುದರಿಂದ ರೋಗಗಳು ಗುಣವಾಗುತ್ತವೆಯೇ? ಇಲ್ಲಿದೆ ವಿವರ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ