AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ
ಸಿಟ್ಟಿನಲ್ಲಿ ಸರ್ಕಾರಿ ಬಸ್ ಗಾಜಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ
Follow us
TV9 Web
| Updated By: shruti hegde

Updated on:Sep 28, 2021 | 3:42 PM

ಸರ್ಕಾರಿ ಬಸ್ ಮೇಲೆ ದೈತ್ಯಾಕಾರದ ಆನೆಯೊಂದು ದಾಳಿ ನಡೆಸಿದ ಘಟನೆ ತಮಿಳುನಾಡಿನ ನೀಲಗಿರಿಯಲ್ಲಿ ನಡೆದಿದೆ. ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋವನ್ನು ಟ್ವಿಟರ್​ನಲ್ಲಿ  ಹಂಚಿಕೊಳ್ಳಲಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಸರ್ಕಾರಿ ಬಸ್ಸನ್ನು ದೈತ್ಯ ಆನೆಯೊಂದು ಅಡ್ಡ ಹಾಕಿ ಬಸ್​ ಎದುರಿಗಿನ ಗಾಜನ್ನು ಒಡೆದಿದೆ. ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರು ಈ ಭಯಾನಕ ದೃಶ್ಯವನ್ನುಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸಿಟ್ಟಿನಲ್ಲಿದ್ದ ಆನೆ ಗಾಜನ್ನು ಒಡೆಯುತ್ತಿರುವ ಭಯಾನಕ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ. ಇದರ ಪರಿಣಾಮ ಬಸ್ಸಿನ ಗಾಜು ಒಡೆದು ಹೋಗಿದೆ. ಕೆಲವು ಸೆಕೆಂಡುಗಳ ಬಳಿಕ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.

ಚಾಲಕ ಆನೆಯ ಗಮನ ಬಸ್ ಮೇಲಿರುವಂತೆ ಎಚ್ಚರವಹಿಸಿದರು ಮತ್ತು ಪ್ರಯಾಣಿಕರೆಲ್ಲ ವಾಹನದಿಂದ ಇಳಿಯಲು ಸಹಾಯ ಮಾಡಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್​ ವಿಭಾಗದಲ್ಲಿ ಹಂಚಿಕೊಂಡಿದ್ದು, ಧೃತಿಗೆಡದೇ ಪ್ರಯಾಣಿಕರನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕೆ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ.

ಸೆಪ್ಟೆಂಬರ್ 25ರಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ದೃಶ್ಯ 70,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಭಯಾನಕ ಸನ್ನಿವೇಶವನ್ನು ತಾಳ್ಮೆಯಿಂದ ನಿಭಾಯಿಸಿದ ಬಸ್​ ಚಾಲಕನಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಚಾಲಕರು; ವಿಡಿಯೋ ನೋಡಿ

ಮರಿ ಆನೆಗಳ ಮುದ್ದಾಟ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

(Angry elephant shatters bus windshield in tamilnadu shocking video goes viral)

Published On - 3:34 pm, Tue, 28 September 21

ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ