AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ
ಸಿಟ್ಟಿನಲ್ಲಿ ಸರ್ಕಾರಿ ಬಸ್ ಗಾಜಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ
TV9 Web
| Edited By: |

Updated on:Sep 28, 2021 | 3:42 PM

Share

ಸರ್ಕಾರಿ ಬಸ್ ಮೇಲೆ ದೈತ್ಯಾಕಾರದ ಆನೆಯೊಂದು ದಾಳಿ ನಡೆಸಿದ ಘಟನೆ ತಮಿಳುನಾಡಿನ ನೀಲಗಿರಿಯಲ್ಲಿ ನಡೆದಿದೆ. ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋವನ್ನು ಟ್ವಿಟರ್​ನಲ್ಲಿ  ಹಂಚಿಕೊಳ್ಳಲಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಸರ್ಕಾರಿ ಬಸ್ಸನ್ನು ದೈತ್ಯ ಆನೆಯೊಂದು ಅಡ್ಡ ಹಾಕಿ ಬಸ್​ ಎದುರಿಗಿನ ಗಾಜನ್ನು ಒಡೆದಿದೆ. ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರು ಈ ಭಯಾನಕ ದೃಶ್ಯವನ್ನುಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸಿಟ್ಟಿನಲ್ಲಿದ್ದ ಆನೆ ಗಾಜನ್ನು ಒಡೆಯುತ್ತಿರುವ ಭಯಾನಕ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ. ಇದರ ಪರಿಣಾಮ ಬಸ್ಸಿನ ಗಾಜು ಒಡೆದು ಹೋಗಿದೆ. ಕೆಲವು ಸೆಕೆಂಡುಗಳ ಬಳಿಕ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.

ಚಾಲಕ ಆನೆಯ ಗಮನ ಬಸ್ ಮೇಲಿರುವಂತೆ ಎಚ್ಚರವಹಿಸಿದರು ಮತ್ತು ಪ್ರಯಾಣಿಕರೆಲ್ಲ ವಾಹನದಿಂದ ಇಳಿಯಲು ಸಹಾಯ ಮಾಡಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್​ ವಿಭಾಗದಲ್ಲಿ ಹಂಚಿಕೊಂಡಿದ್ದು, ಧೃತಿಗೆಡದೇ ಪ್ರಯಾಣಿಕರನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕೆ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ.

ಸೆಪ್ಟೆಂಬರ್ 25ರಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ದೃಶ್ಯ 70,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಭಯಾನಕ ಸನ್ನಿವೇಶವನ್ನು ತಾಳ್ಮೆಯಿಂದ ನಿಭಾಯಿಸಿದ ಬಸ್​ ಚಾಲಕನಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಚಾಲಕರು; ವಿಡಿಯೋ ನೋಡಿ

ಮರಿ ಆನೆಗಳ ಮುದ್ದಾಟ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

(Angry elephant shatters bus windshield in tamilnadu shocking video goes viral)

Published On - 3:34 pm, Tue, 28 September 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?