AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ.

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ
ಸಿಟ್ಟಿನಲ್ಲಿ ಸರ್ಕಾರಿ ಬಸ್ ಗಾಜಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ
TV9 Web
| Updated By: shruti hegde|

Updated on:Sep 28, 2021 | 3:42 PM

Share

ಸರ್ಕಾರಿ ಬಸ್ ಮೇಲೆ ದೈತ್ಯಾಕಾರದ ಆನೆಯೊಂದು ದಾಳಿ ನಡೆಸಿದ ಘಟನೆ ತಮಿಳುನಾಡಿನ ನೀಲಗಿರಿಯಲ್ಲಿ ನಡೆದಿದೆ. ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋವನ್ನು ಟ್ವಿಟರ್​ನಲ್ಲಿ  ಹಂಚಿಕೊಳ್ಳಲಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಸರ್ಕಾರಿ ಬಸ್ಸನ್ನು ದೈತ್ಯ ಆನೆಯೊಂದು ಅಡ್ಡ ಹಾಕಿ ಬಸ್​ ಎದುರಿಗಿನ ಗಾಜನ್ನು ಒಡೆದಿದೆ. ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರು ಈ ಭಯಾನಕ ದೃಶ್ಯವನ್ನುಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ಸಿಟ್ಟಿನಲ್ಲಿದ್ದ ಆನೆ ಗಾಜನ್ನು ಒಡೆಯುತ್ತಿರುವ ಭಯಾನಕ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

ಆನೆ ರಸ್ತೆಗೆ ಬರುತ್ತಿದ್ದಂತೆ ಬಸ್ ಚಾಲಕ ವಾಹನವನ್ನು ಹಿಂದಕ್ಕೆ ಚಲಿಸಿದನು. ಅದನ್ನು ಗಮನಿಸಿದ ಆನೆ ಸಿಟ್ಟಿನಲ್ಲಿ ಬಸ್ಸಿನ ಗಾಜಿಗೆ ಗುದ್ದಿದೆ. ಇದರ ಪರಿಣಾಮ ಬಸ್ಸಿನ ಗಾಜು ಒಡೆದು ಹೋಗಿದೆ. ಕೆಲವು ಸೆಕೆಂಡುಗಳ ಬಳಿಕ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.

ಚಾಲಕ ಆನೆಯ ಗಮನ ಬಸ್ ಮೇಲಿರುವಂತೆ ಎಚ್ಚರವಹಿಸಿದರು ಮತ್ತು ಪ್ರಯಾಣಿಕರೆಲ್ಲ ವಾಹನದಿಂದ ಇಳಿಯಲು ಸಹಾಯ ಮಾಡಿದ್ದಾರೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್​ ವಿಭಾಗದಲ್ಲಿ ಹಂಚಿಕೊಂಡಿದ್ದು, ಧೃತಿಗೆಡದೇ ಪ್ರಯಾಣಿಕರನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕೆ ಚಾಲಕನಿಗೆ ಧನ್ಯವಾದ ತಿಳಿಸಿದ್ದಾರೆ.

ಸೆಪ್ಟೆಂಬರ್ 25ರಂದು ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ದೃಶ್ಯ 70,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಭಯಾನಕ ಸನ್ನಿವೇಶವನ್ನು ತಾಳ್ಮೆಯಿಂದ ನಿಭಾಯಿಸಿದ ಬಸ್​ ಚಾಲಕನಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:

Viral Video: ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಆನೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಚಾಲಕರು; ವಿಡಿಯೋ ನೋಡಿ

ಮರಿ ಆನೆಗಳ ಮುದ್ದಾಟ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

(Angry elephant shatters bus windshield in tamilnadu shocking video goes viral)

Published On - 3:34 pm, Tue, 28 September 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ