AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರಿಯಾನಿ ಸರ್ವ್ ಮಾಡದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಗಳು ಪೊಲೀಸರ ವಶಕ್ಕೆ

Greater Noida : ನೋಯ್ಡಾದ ಮಾಲ್​ ಒಂದರಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆರ್ಡರ್​ ಮಾಡಿದ ಬಿರಿಯಾನಿ ಖಾಲಿಯಾಗಿದೆ ಎಂದರೂ ಕೇಳದ ಈ ಮೂವರು ಗ್ರಾಹಕರು ರೆಸ್ಟೋರೆಂಟ್​ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಬಿರಿಯಾನಿ ಸರ್ವ್ ಮಾಡದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಗಳು ಪೊಲೀಸರ ವಶಕ್ಕೆ
Angry Men Mercilessly Thrash Restaurant Staff Over Late Biryani Order In Greater Noida
TV9 Web
| Updated By: ಶ್ರೀದೇವಿ ಕಳಸದ|

Updated on: Nov 11, 2022 | 10:18 AM

Share

Viral Video : ಸಾರ್ವಜನಿಕ ಸ್ಥಳಗಳಲ್ಲಿ ಮನುಷ್ಯ ಹೆಚ್ಚು ಪ್ರಜ್ಞೆಯಿಂದ ವರ್ತಿಸಬೇಕಾಗುತ್ತದೆ. ತಾಳ್ಮೆ ಕಳೆದುಕೊಂಡು ಹಕ್ಕು ಸಾಧಿಸಲು ನೋಡಿದರೆ ತಕ್ಕ ಪ್ರತಿಫಲ ಉಣ್ಣಬೇಕಾಗುತ್ತದೆ. ಗ್ರೇಟರ್​ ನೋಯ್ಡಾದ ಅನ್ಸಲ್ ಪ್ಲಾಝಾ ಮಾಲ್​ನ ಝೌಕ್​ ರೆಸ್ಟೋರೆಂಟ್​ನಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿ. ಬಿರಿಯಾನಿ ಖಾಲಿಯಾಗಿದೆ ಎಂದರೂ ಬೇಕೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಈ ಮೂವರು ಗ್ರಾಹಕರು. ಎಷ್ಟೊತ್ತಾದರೂ ಸರ್ವ್ ಮಾಡದೇ ಇದ್ದಾಗ ಕೋಪಗೊಂಡ ಇವರುಗಳು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ.

ರಾತ್ರಿಯ ಊಟಕ್ಕೆಂದು ಸುಮಾರು 10.30ರ ಸುಮಾರಿಗೆ ಈ ಮೂವರೂ ಝೌಕ್ ರೆಸ್ಟೋರೆಂಟ್‌ಗೆ ಬಂದಿದ್ದಾರೆ. ತಡರಾತ್ರಿಯಾದ್ದರಿಂದ ಚಿಕನ್​ ಬಿರಿಯಾನಿ ಲಭ್ಯವಿಲ್ಲ ಎಂದು ರೆಸ್ಟೋರೆಂಟ್​ ಸಿಬ್ಬಂದಿ ಹೇಳಿದರೂ ಕೇಳದೆ ಕಾಯುತ್ತ ಕುಳಿತಿದ್ದಾರೆ. ನಂತರ ಇದ್ದಕ್ಕಿದ್ದಂತೆ ಒಬ್ಬನು ಎದ್ದು ಬಂದು ಸಿಬ್ಬಂದಿಯನ್ನು ಥಳಿಸಲು ಶುರು ಮಾಡಿದ್ದಾನೆ. ಇದು ಅಷ್ಟಕ್ಕೇ ಮುಗಿಯದೇ ಮೂರೂ ಗ್ರಾಹಕರು ಆ ಸಿಬ್ಬಂದಿಯನ್ನು ರೆಸ್ಟೋರೆಂಟ್​ನಿಂದ ಹೊರಗೆ ಕರೆದೊಯ್ದು ಹಲ್ಲೆ ಮುಂದುವರಿಸಿದ್ದಾರೆ. ನಂತರ ರೆಸ್ಟೋರೆಂಟ್ ಸಿಬ್ಬಂದಿ ಈ ಮೂವರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿ ಆರೋಪಿಗಳಾದ ರಾವೇಶ್​, ಮನೋಜ್​, ಕ್ರಿಷ್​ ಅವರನ್ನು ಬಂಧಿಸಲಾಗಿದೆ.

‘ಈ ಮೂವರು ಆರೋಪಿಗಳು ಬುಧವಾರ ರಾತ್ರಿ ಊಟಕ್ಕೆಂದು ರೆಸ್ಟೋರೆಂಟ್​ಗೆ ಹೋಗಿದ್ದರು. ಬಿರಿಯಾನಿ ಆರ್ಡರ್​ ಮಾಡಿದರು. ರೆಸ್ಟೋರೆಂಟ್ ಸಿಬ್ಬಂದಿ ಅಲ್ತಾಫ್ ಬಿರಿಯಾನಿ ಖಾಲಿಯಾಗಿದೆ ಎಂದನು. ಆಗ ತಾಳ್ಮೆ ಕಳೆದುಕೊಂಡ ಗ್ರಾಹಕ ರೆಸ್ಟೋರೆಂಟ್​ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿ ಹೊಡೆದ’ ಎಂದು ನೋಯ್ಡಾದ ಎಸಿಪಿ ಮಹೇಂದ್ರ ದೇವ್​ ತಿಳಿಸಿದ್ದಾರೆ.

ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಹಲ್ಲೆ ಮಾಡಿದ್ದಕ್ಕಾಗಿ ವಿಧಿಸಲಾಗುವ ಶಿಕ್ಷೆ) ಮತ್ತು 147 (ಗಲಭೆ ಮಾಡಿದ್ದಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ