AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರಿಯಾನಿ ಸರ್ವ್ ಮಾಡದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಗಳು ಪೊಲೀಸರ ವಶಕ್ಕೆ

Greater Noida : ನೋಯ್ಡಾದ ಮಾಲ್​ ಒಂದರಲ್ಲಿ ಈ ಅಹಿತಕರ ಘಟನೆ ನಡೆದಿದೆ. ಆರ್ಡರ್​ ಮಾಡಿದ ಬಿರಿಯಾನಿ ಖಾಲಿಯಾಗಿದೆ ಎಂದರೂ ಕೇಳದ ಈ ಮೂವರು ಗ್ರಾಹಕರು ರೆಸ್ಟೋರೆಂಟ್​ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

ಬಿರಿಯಾನಿ ಸರ್ವ್ ಮಾಡದ ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ; ಆರೋಪಿಗಳು ಪೊಲೀಸರ ವಶಕ್ಕೆ
Angry Men Mercilessly Thrash Restaurant Staff Over Late Biryani Order In Greater Noida
TV9 Web
| Edited By: ಶ್ರೀದೇವಿ ಕಳಸದ|

Updated on: Nov 11, 2022 | 10:18 AM

Share

Viral Video : ಸಾರ್ವಜನಿಕ ಸ್ಥಳಗಳಲ್ಲಿ ಮನುಷ್ಯ ಹೆಚ್ಚು ಪ್ರಜ್ಞೆಯಿಂದ ವರ್ತಿಸಬೇಕಾಗುತ್ತದೆ. ತಾಳ್ಮೆ ಕಳೆದುಕೊಂಡು ಹಕ್ಕು ಸಾಧಿಸಲು ನೋಡಿದರೆ ತಕ್ಕ ಪ್ರತಿಫಲ ಉಣ್ಣಬೇಕಾಗುತ್ತದೆ. ಗ್ರೇಟರ್​ ನೋಯ್ಡಾದ ಅನ್ಸಲ್ ಪ್ಲಾಝಾ ಮಾಲ್​ನ ಝೌಕ್​ ರೆಸ್ಟೋರೆಂಟ್​ನಲ್ಲಿ ನಡೆದ ಈ ಘಟನೆಯ ವಿಡಿಯೋ ನೋಡಿ. ಬಿರಿಯಾನಿ ಖಾಲಿಯಾಗಿದೆ ಎಂದರೂ ಬೇಕೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಈ ಮೂವರು ಗ್ರಾಹಕರು. ಎಷ್ಟೊತ್ತಾದರೂ ಸರ್ವ್ ಮಾಡದೇ ಇದ್ದಾಗ ಕೋಪಗೊಂಡ ಇವರುಗಳು ರೆಸ್ಟೋರೆಂಟ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ.

ರಾತ್ರಿಯ ಊಟಕ್ಕೆಂದು ಸುಮಾರು 10.30ರ ಸುಮಾರಿಗೆ ಈ ಮೂವರೂ ಝೌಕ್ ರೆಸ್ಟೋರೆಂಟ್‌ಗೆ ಬಂದಿದ್ದಾರೆ. ತಡರಾತ್ರಿಯಾದ್ದರಿಂದ ಚಿಕನ್​ ಬಿರಿಯಾನಿ ಲಭ್ಯವಿಲ್ಲ ಎಂದು ರೆಸ್ಟೋರೆಂಟ್​ ಸಿಬ್ಬಂದಿ ಹೇಳಿದರೂ ಕೇಳದೆ ಕಾಯುತ್ತ ಕುಳಿತಿದ್ದಾರೆ. ನಂತರ ಇದ್ದಕ್ಕಿದ್ದಂತೆ ಒಬ್ಬನು ಎದ್ದು ಬಂದು ಸಿಬ್ಬಂದಿಯನ್ನು ಥಳಿಸಲು ಶುರು ಮಾಡಿದ್ದಾನೆ. ಇದು ಅಷ್ಟಕ್ಕೇ ಮುಗಿಯದೇ ಮೂರೂ ಗ್ರಾಹಕರು ಆ ಸಿಬ್ಬಂದಿಯನ್ನು ರೆಸ್ಟೋರೆಂಟ್​ನಿಂದ ಹೊರಗೆ ಕರೆದೊಯ್ದು ಹಲ್ಲೆ ಮುಂದುವರಿಸಿದ್ದಾರೆ. ನಂತರ ರೆಸ್ಟೋರೆಂಟ್ ಸಿಬ್ಬಂದಿ ಈ ಮೂವರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿ ಆರೋಪಿಗಳಾದ ರಾವೇಶ್​, ಮನೋಜ್​, ಕ್ರಿಷ್​ ಅವರನ್ನು ಬಂಧಿಸಲಾಗಿದೆ.

‘ಈ ಮೂವರು ಆರೋಪಿಗಳು ಬುಧವಾರ ರಾತ್ರಿ ಊಟಕ್ಕೆಂದು ರೆಸ್ಟೋರೆಂಟ್​ಗೆ ಹೋಗಿದ್ದರು. ಬಿರಿಯಾನಿ ಆರ್ಡರ್​ ಮಾಡಿದರು. ರೆಸ್ಟೋರೆಂಟ್ ಸಿಬ್ಬಂದಿ ಅಲ್ತಾಫ್ ಬಿರಿಯಾನಿ ಖಾಲಿಯಾಗಿದೆ ಎಂದನು. ಆಗ ತಾಳ್ಮೆ ಕಳೆದುಕೊಂಡ ಗ್ರಾಹಕ ರೆಸ್ಟೋರೆಂಟ್​ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿ ಹೊಡೆದ’ ಎಂದು ನೋಯ್ಡಾದ ಎಸಿಪಿ ಮಹೇಂದ್ರ ದೇವ್​ ತಿಳಿಸಿದ್ದಾರೆ.

ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಹಲ್ಲೆ ಮಾಡಿದ್ದಕ್ಕಾಗಿ ವಿಧಿಸಲಾಗುವ ಶಿಕ್ಷೆ) ಮತ್ತು 147 (ಗಲಭೆ ಮಾಡಿದ್ದಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ