Viral Video: ಚರಂಡಿ ಹೊಂಡಕ್ಕೆ ಬಿದ್ದ ನವಿಲು, ಜೀವದ ಹಂಗು ತೊರೆದು ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ರಜನಿ ಶೆಟ್ಟಿ

ವಿದ್ಯುತ್‌ ತಂತಿ ಸ್ಪರ್ಶಿಸಿ ನವಿಲೊಂದು ಚರಂಡಿ ಹೊಂಡಕ್ಕೆ ಬಿದ್ದಿದ್ದು, ಆ ಸಂದರ್ಭದಲ್ಲಿ ಮಂಗಳೂರಿನ ಪ್ರಾಣಿ ಪ್ರಿಯೆ ರಜನಿ ಶೆಟ್ಟಿ ತನ್ನ ಜೀವದ ಹಂಗು ತೊರೆದು ಚರಂಡಿ ಹೊಂಡಕ್ಕೆ ಇಳಿದು ನವಿಲನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ನವಿಲನ್ನು ಹೆಚ್ಚಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸುವ ವೇಳೆ ದುರಾದೃಷ್ಟವಶಾತ್‌ ಮೂಕ ಜೀವಿ  ಸಾವನ್ನಪ್ಪಿದೆ. ಈ ಕುರಿತ ವಿಡಿಯೋವೊಂದನ್ನು ರಜನಿ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

Viral Video: ಚರಂಡಿ ಹೊಂಡಕ್ಕೆ ಬಿದ್ದ ನವಿಲು, ಜೀವದ ಹಂಗು ತೊರೆದು ರಾಷ್ಟ್ರ ಪಕ್ಷಿಯನ್ನು ರಕ್ಷಿಸಿದ ರಜನಿ ಶೆಟ್ಟಿ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 29, 2024 | 2:36 PM

ಇತ್ತೀಚಿನ ದಿನಗಳಲ್ಲಿ ತಮ್ಮವರ ಕಷ್ಟಕ್ಕೆ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಕೆಲವೊಬ್ಬರು ಮೂಕ ಪ್ರಾಣಿಗಳ ನೋವಿಗೆ ದನಿಯಾಗಿ, ಅವುಗಳ ರಕ್ಷಣೆಗೆ ನಿಲ್ಲುವವರಿದ್ದಾರೆ. ಅಂತಹ ಮಹಾನ್‌ ಹೃದಯಿಗಳಲ್ಲಿ ಒಬ್ಬರು ಮಂಗಳೂರಿನ ಪ್ರಾಣಿಪ್ರಿಯೆ ರಜನಿ ಶೆಟ್ಟಿ. ಪ್ರತಿನಿತ್ಯ ನೂರಾರು ಬೀದಿ ನಾಯಿಗಳಿಗೆ ಅನ್ನ ನೀಡುವ ಇವರು ಮೂಕ ಪ್ರಾಣಿಗಳ ನೋವಿಗೆ ಧ್ವನಿಯಾಗಿ ಅವುಗಳ ರಕ್ಷಣೆ, ಪಾಲನೆ ಕೆಲಸವನ್ನು ಕೂಡಾ ಮಾಡುತ್ತಿದ್ದಾರೆ. ಇದೀಗ ಅವರು ತನ್ನ ಪ್ರಾಣದ ಹಂಗನ್ನು ತೊರೆದು ಚರಂಡಿ ಹೊಂಡಕ್ಕೆ ಬಿದ್ದಂತಹ ನವಿಲಿನ ರಕ್ಷಣೆಯನ್ನು ಮಾಡಿದ್ದಾರೆ. ಆದರೆ ದುರಾದೃಷ್ಟವಶಾತ್‌ ಗಂಭೀರವಾಗಿ ಗಾಯಗೊಂಡಿದ್ದ ನವಿಲು ಸಾವನ್ನಪ್ಪಿದೆ. ಈ ಕುರಿತ ಭಾವನಾತ್ಮಕ ವಿಡಿಯೋವೊಂದನ್ನು ರಜನಿ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮಂಗಳೂರಿನ ಸಮೀಪದಲ್ಲಿ ಖುಷಿಯಿಂದ ಹಾರಿ ಬರುತ್ತಿರುವ ವೇಳೆ ವಿದ್ಯುತ್‌ ತಂತಿಗೆ ಸ್ಪರ್ಶಿಸಿ ನವಿಲೊಂದು ಚರಂಡಿ ಹೊಂಡಕ್ಕೆ ಬಿದ್ದಿರುತ್ತದೆ. ಇದನ್ನು ಕಂಡಂತಹ ಅಲ್ಲಿನ ಸ್ಥಳೀಯ ನಿವಾಸಿ ಮೊಹಮ್ಮದ್‌ ಸಾದಿಕ್‌ ಎಂಬವರು ತಕ್ಷಣ ರಜನಿ ಶೆಟ್ಟಿಯವರಿಗೆ ಕರೆ ಮಾಡಿ ನವಿಲನ್ನು ರಕ್ಷಣೆ ಮಾಡುವಂತೆ ಕೇಳಿಕೊಳ್ಳುತ್ತಾರೆ. ಆ ತಕ್ಷಣ ಅಲ್ಲಿಗೆ ಧಾವಿಸಿದ ರಜನಿ ಶೆಟ್ಟಿ ತಮ್ಮ ಪ್ರಾಣದ ಹಂಗನ್ನು ತೊರೆದು ಚರಂಡಿ ಹೊಂಡಕ್ಕೆ ಇಳಿದು ನವಿಲನ್ನು ರಕ್ಷಿಸಿದ್ದಾರೆ. ಜೊತೆಗೆ ಗಂಭೀರವಾಗಿ ಗಾಯಗೊಂಡಿದ್ದ ಆ ಮೂಕ ಜೀವಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಂತಹ ಕೆಲಸವನ್ನು ಕೂಡಾ ಮಾಡಿದ್ದಾರೆ. ಆದರೆ ದಾರಿ ಮಧ್ಯೆ ನವಿಲು ಸಾವನ್ನಿಪ್ಪಿದೆ. ನಂತರ ಅರಣ್ಯಾಧಿಕಾರಿಗಳು ಹಾಗೂ ತನ್ನ ಪತಿಯ  ಸಹಾಯದಿಂದ ಅವರು ನವಿಲನ್ನು ಮಣ್ಣುಮಾಡಿದ್ದಾರೆ.

ಈ ನೋವಿನ ಕಥೆಯನ್ನು ರಜನಿ ಶೆಟ್ಟಿ (@rajani_shetty11official) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಹೊಂಡಕ್ಕೆ ಬಿದ್ದ ನವಿಲನ್ನು ರಜನಿ ಶೆಟ್ಟಿ ಜೋಪಾನವಾಗಿ ರಕ್ಷಣೆ ಮಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಗುಪ್ತಾಂಗವನ್ನು ಕಚ್ಚಿ ಹಿಡಿದ ಹಾವು; ಹಾವಿನಿಂದ ಬಿಡಿಸಿಕೊಳ್ಳಲು ಪರದಾಡಿದ ವ್ಯಕ್ತಿ

ಕೆಲದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ರಜನಿ ಶೆಟ್ಟಿಯವರ ಮಾನವೀಯ ಕಾರ್ಯವನ್ನು ನೆಟ್ಟಿಗರು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ