AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ

Animal Rights Activist : ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡ ಆರೋಪದ ಮೇಲೆ ಆಗ್ರಾ ಸೊಸೈಟಿಯ ಸೆಕ್ಯುರಿಟಿ ಗಾರ್ಡ್​ಗೆ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಥಳಿಸಿದ ವಿಡಿಯೋ ವೈರಲ್ ಆಗಿದೆ.

Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
TV9 Web
| Edited By: |

Updated on: Aug 16, 2022 | 11:23 AM

Share

Animal Rights Activist : ಈ ವೀಡಿಯೋದಲ್ಲಿ ಇಪ್ಪತ್ತರ ಆಸುಪಾಸಿನಲ್ಲಿರುವ ಯುವತಿ ಮೊದಲು ತನ್ನನ್ನು ತಾನು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಡಿಂಪಿ ಮಹೇಂದ್ರ ಎಂದು ಪರಿಚಯಿಸಿಕೊಳ್ಳುತ್ತಾಳೆ. ನಂತರ ಆಗ್ರಾದ ರೆಸಿಡೆನ್ಶಿಯಲ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್‌ಗೆ ಥಳಿಸುತ್ತಾಳೆ. ಅವನು ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾನೆ ಎಂದು ಆರೋಪಿಸಿ ಬೀದಿಯಲ್ಲಿ ದೌರ್ಜನ್ಯ ಎಸಗುತ್ತಾಳೆ. ಭಾನುವಾರ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಆಗ್ರಾ ಪೊಲೀಸರು ವಿಡಿಯೋವನ್ನು ಗಮನಿಸಿ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ಈ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸುಮಾರು 2.10 ನಿಮಿಷಗಳ ಈ ಕ್ಲಿಪ್‌ನಲ್ಲಿ ಈ ಯುವತಿ, ಬಿಜೆಪಿ ಸಂಸದೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮೇನಕಾ ಗಾಂಧಿ ಅವರಿಗೆ ದೂರು ನೀಡುವುದಾಗಿ ವ್ಯಕ್ತಿಗೆ ಬೆದರಿಕೆ ಹಾಕಿದ್ದಾಳೆ.

ಪೊಲೀಸ್ ಅಧೀಕ್ಷಕ (ನಗರ) ವಿಕಾಸ್ ಕುಮಾರ್, ‘ಯುವತಿಯೊಬ್ಬಳು ಸಿಬ್ಬಂದಿಗೆ ಕೋಲಿನಿಂದ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ, ಆಗ್ರಾ ಪೊಲೀಸರು ಈ ವಿಡಿಯೋ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಹೊಸ ಆಗ್ರಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ವಿಜಯ್ ವಿಕ್ರಮ್ ಸಿಂಗ್,  ‘ಎಲ್‌ಐಸಿ ಅಧಿಕಾರಿ ಕಾಲೊನಿಯಲ್ಲಿ ಕೆಲಸ ಮಾಡುವ ಗಾರ್ಡ್ ಅಖಿಲೇಶ್ ಸಿಂಗ್ ಅವರು ದೂರು ನೀಡಿದ್ದಾರೆ. ವೈರಲ್ ವಿಡಿಯೋದಲ್ಲಿ ಥಳಿಸಿದ ಈ ಯುವತಿಯ ಮಾಹಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪಿಟಿಐಗೆ ತಿಳಿಸಿದ್ದಾರೆ.

ಈ ವ್ಯಕ್ತಿ ನ್ಯೂ ಆಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಐಸಿ ಆಫೀಸರ್ ಕಾಲೊನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ. ತಾನು ಮಾಜಿ ಸೈನಿಕ ಎಂದು ವಿಡಿಯೋದಲ್ಲಿ ಹೇಳಿರುವುದು ಕೇಳುತ್ತದೆ. ತಾನು ಕಾಲೊನಿಯಿಂದ ಬೀದಿನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದೆ ಎನ್ನುವುದೂ ಕೇಳಿಸುತ್ತದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ