AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ

Animal Rights Activist : ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡ ಆರೋಪದ ಮೇಲೆ ಆಗ್ರಾ ಸೊಸೈಟಿಯ ಸೆಕ್ಯುರಿಟಿ ಗಾರ್ಡ್​ಗೆ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಥಳಿಸಿದ ವಿಡಿಯೋ ವೈರಲ್ ಆಗಿದೆ.

Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 16, 2022 | 11:23 AM

Animal Rights Activist : ಈ ವೀಡಿಯೋದಲ್ಲಿ ಇಪ್ಪತ್ತರ ಆಸುಪಾಸಿನಲ್ಲಿರುವ ಯುವತಿ ಮೊದಲು ತನ್ನನ್ನು ತಾನು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಡಿಂಪಿ ಮಹೇಂದ್ರ ಎಂದು ಪರಿಚಯಿಸಿಕೊಳ್ಳುತ್ತಾಳೆ. ನಂತರ ಆಗ್ರಾದ ರೆಸಿಡೆನ್ಶಿಯಲ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್‌ಗೆ ಥಳಿಸುತ್ತಾಳೆ. ಅವನು ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾನೆ ಎಂದು ಆರೋಪಿಸಿ ಬೀದಿಯಲ್ಲಿ ದೌರ್ಜನ್ಯ ಎಸಗುತ್ತಾಳೆ. ಭಾನುವಾರ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಆಗ್ರಾ ಪೊಲೀಸರು ವಿಡಿಯೋವನ್ನು ಗಮನಿಸಿ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ಈ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸುಮಾರು 2.10 ನಿಮಿಷಗಳ ಈ ಕ್ಲಿಪ್‌ನಲ್ಲಿ ಈ ಯುವತಿ, ಬಿಜೆಪಿ ಸಂಸದೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮೇನಕಾ ಗಾಂಧಿ ಅವರಿಗೆ ದೂರು ನೀಡುವುದಾಗಿ ವ್ಯಕ್ತಿಗೆ ಬೆದರಿಕೆ ಹಾಕಿದ್ದಾಳೆ.

ಪೊಲೀಸ್ ಅಧೀಕ್ಷಕ (ನಗರ) ವಿಕಾಸ್ ಕುಮಾರ್, ‘ಯುವತಿಯೊಬ್ಬಳು ಸಿಬ್ಬಂದಿಗೆ ಕೋಲಿನಿಂದ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ, ಆಗ್ರಾ ಪೊಲೀಸರು ಈ ವಿಡಿಯೋ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಹೊಸ ಆಗ್ರಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ವಿಜಯ್ ವಿಕ್ರಮ್ ಸಿಂಗ್,  ‘ಎಲ್‌ಐಸಿ ಅಧಿಕಾರಿ ಕಾಲೊನಿಯಲ್ಲಿ ಕೆಲಸ ಮಾಡುವ ಗಾರ್ಡ್ ಅಖಿಲೇಶ್ ಸಿಂಗ್ ಅವರು ದೂರು ನೀಡಿದ್ದಾರೆ. ವೈರಲ್ ವಿಡಿಯೋದಲ್ಲಿ ಥಳಿಸಿದ ಈ ಯುವತಿಯ ಮಾಹಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪಿಟಿಐಗೆ ತಿಳಿಸಿದ್ದಾರೆ.

ಈ ವ್ಯಕ್ತಿ ನ್ಯೂ ಆಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಐಸಿ ಆಫೀಸರ್ ಕಾಲೊನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ. ತಾನು ಮಾಜಿ ಸೈನಿಕ ಎಂದು ವಿಡಿಯೋದಲ್ಲಿ ಹೇಳಿರುವುದು ಕೇಳುತ್ತದೆ. ತಾನು ಕಾಲೊನಿಯಿಂದ ಬೀದಿನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದೆ ಎನ್ನುವುದೂ ಕೇಳಿಸುತ್ತದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ