AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರನಾಥ ಮೇಘ ಸ್ಫೋಟ ವೇಳೆ ರಕ್ಷಣಾ ಕಾರ್ಯಗಳಿಗೆ ನೆರವಾದ ಸೇನಾಪಡೆಯ ಶ್ವಾನಕ್ಕೆ ಪ್ರಶಂಸೆ

ಸೇನಾಪಡೆಯ ಹೋಳಿ ಎಂದು ಹೆಸರಿನ ನಾಯಿ ಜಮ್ಮು ಕಾಶ್ಮೀರದ ಅಮರನಾಥದಲ್ಲಿ ಇತ್ತೀಚೆಗೆ ಮೇಘ ಸ್ಫೋಟ ಸಂಭವಿಸಿದಾಗ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿತ್ತು

ಅಮರನಾಥ ಮೇಘ ಸ್ಫೋಟ ವೇಳೆ ರಕ್ಷಣಾ ಕಾರ್ಯಗಳಿಗೆ ನೆರವಾದ ಸೇನಾಪಡೆಯ ಶ್ವಾನಕ್ಕೆ ಪ್ರಶಂಸೆ
ಶ್ವಾನ ಹೋಳಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 25, 2022 | 3:55 PM

Share

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಅಮರನಾಥ ಗುಹೆಯಲ್ಲಿ (Amarnath cave)  ಮೇಘ ಸ್ಫೋಟ (cloud burst) ಸಂಭವಿಸಿದಾಗ ರಕ್ಷಣೆ ಮತ್ತು ಪರಿಹಾರ ಕಾರ್ಯದಲ್ಲಿ ನೆರವಾದ ಸೇನಾಪಡೆಯ ನಾಯಿ ‘ಹೋಳಿ’ ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಭಾಗದ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಹೋಳಿ ಮಾಡಿದ ಕಾರ್ಯವನ್ನು ಶ್ಲಾಘಿಸಿ ಫೋಟೊವನ್ನು ಟ್ವೀಟ್ ಮಾಡಿದ್ದಾರೆ. ಸೇನಾಪಡೆಯ ಹೋಳಿ ಎಂದು ಹೆಸರಿನ ನಾಯಿ ಜಮ್ಮು ಕಾಶ್ಮೀರದ ಅಮರನಾಥದಲ್ಲಿ ಇತ್ತೀಚೆಗೆ ಮೇಘ ಸ್ಫೋಟ ಸಂಭವಿಸಿದಾಗ ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿತ್ತು ಎಂದು ಉತ್ತರ ಭಾಗದ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಕಲ್ ಉಪೇಂದ್ರ ದ್ವಿವೇದಿ ಟ್ವೀಟ್ ಮಾಡಿದ್ದಾರೆ. ಒಂದು ದಿನದ ಹಿಂದೆ ಮಾಡಿದ ಈ ಟ್ವೀಟ್​​ಗೆ 14,200 ಕ್ಕಿಂತಲೂ ಹೆಚ್ಚು ಲೈಕ್ ಸಿಕ್ಕಿದೆ. 1,200 ಬಾರಿ ಇದು ರೀಟ್ವೀಟ್ ಆಗಿದೆ.

ಈ ಟ್ವೀಟ್​​ಗೆ ಹಲವರು Awwww ಎಂದು ಟ್ವೀಟ್ ಮಾಡಿದ್ದು, ಅಧಿಕಾರಿಯನ್ನು ಅದು ನೋಡುತ್ತಿರುವುದು ನೋಡಿ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. ಮನುಷ್ಯನ ನಿಷ್ಠಾವಂತ ಗೆಳೆಯ ಎಂದು ಮತ್ತೊಬ್ಬರು ಕಾಮೆಂಟಿಸಿದ್ದರೆ, ಧೈರ್ಯ ಶಾಲಿ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

Published On - 3:11 pm, Mon, 25 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ