AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿತವಾದ ಚಾಕು ಹಿಡಿದುಕೊಂಡು ಸೇನಾ ಜವಾನನೋರ್ವನಿಂದ ವಿಶೇಷ ಖುಕುರಿ ಡ್ಯಾನ್ಸ್; ಇಲ್ಲಿದೆ ವೈರಲ್ ವಿಡಿಯೋ

ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವಾನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯ ಪ್ರದರ್ಶಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಹರಿತವಾದ ಚಾಕು ಹಿಡಿದುಕೊಂಡು ಸೇನಾ ಜವಾನನೋರ್ವನಿಂದ ವಿಶೇಷ ಖುಕುರಿ ಡ್ಯಾನ್ಸ್; ಇಲ್ಲಿದೆ ವೈರಲ್ ವಿಡಿಯೋ
ಖುಕುರಿ ನೃತ್ಯ ಪ್ರದರ್ಶಿಸುತ್ತಿರುವ ಸೇವಾ ಜವಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jan 23, 2022 | 2:13 PM

ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವಾನರೊಬ್ಬರು ವಿಶೇಷ ನೃತ್ಯ ಪ್ರದರ್ಶಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ನೋಡುಗರ ಗಮನ ಸೆಳೆದಿದ್ದು, ಸಾಕಷ್ಟು ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಸೇನಾ ಜವಾನರೊಬ್ಬರು ಚಾಕು ಹಿಡಿದು ವಿಶೇಷವಾದ ‘ಖುಕುರಿ ನೃತ್ಯ’ವನ್ನು ಪ್ರದರ್ಶಿಸುತ್ತಿರುವುದನ್ನು ವಿಡಿಯೋದಲ್ಲಿ ನಾವು ಕಾಣಬಹುದಾಗಿ.

ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನಲ್ಲಿ ಸಂಪ್ರದಾಯವಾಗಿದ್ದು, ಮತ್ತು ವೀಕ್ಷಿಸಲು ಅಷ್ಟೇ ಆಕರ್ಷಕವಾಗಿದೆ. ಜವಾನರೊಬ್ಬರು ಹರಿತವಾದ ಅಪಾಯಕಾರಿ ಚಾಕುವಿನೊಂದಿಗೆ ಅತ್ಯಂತ ನಾಜುಕಿನಿಂದ ನೃತ್ಯ ಪ್ರದರ್ಶನ ಮಾಡಿದ್ದಾರೆ. ಅವರ ಪ್ರದರ್ಶನದ ನಂತರ, ಇತರೇ ಜವಾನರು ಚಪ್ಪಾಳೆ ತಟ್ಟುವ ಮೂಲಕ ಆ ಜವಾನನ್ನು ಶ್ಲಾಘಿಸಿತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಗೂರ್ಖಾ ಜವಾನನ ಖುಕುರಿ ನೃತ್ಯ. ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂದು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ವೀಡಿಯೊಗೆ ಶೀರ್ಷಿಕೆ ನೀಡಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಸದ್ಯ 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ್ದು, ಇನ್ನೂ ವೀಕ್ಷಿಸಲ್ಪಡುತ್ತಿದೆ. ನೆಟ್ಟಿಗರು ಸೇನಾ ಜವಾನನ ಡ್ಯಾನ್ಸ್ ನೋಡಿ ಬೆರಗಾಗಿದ್ದಾರೆ. ಅನೇಕರು ಗೂರ್ಖಾ ರೆಜಿಮೆಂಟ್‌ನ ಧೈರ್ಯ ಮತ್ತು ಉತ್ಸಾಹವನ್ನು ಶ್ಲಾಘಿಸಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ;

ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆಯುವ ಬದಲು ದತ್ತು ತೆಗೆದುಕೊಳ್ಳಿ: ವಿವಾದಕ್ಕೆ ಕಾರಣವಾದ ಬಾಂಗ್ಲಾ ಲೇಖಕಿ ತಸ್ಲೀಮಾ ಟ್ವೀಟ್

Viral Video:’ಕೊರೋನಾ ವಡೆ’ ತಯಾರಿಸಿ ರೆಸಿಪಿ ವಿಡಿಯೋ ಹಂಚಿಕೊಂಡ ಮಹಿಳೆ

Published On - 11:03 am, Sun, 23 January 22

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?