AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರಿತವಾದ ಚಾಕು ಹಿಡಿದುಕೊಂಡು ಸೇನಾ ಜವಾನನೋರ್ವನಿಂದ ವಿಶೇಷ ಖುಕುರಿ ಡ್ಯಾನ್ಸ್; ಇಲ್ಲಿದೆ ವೈರಲ್ ವಿಡಿಯೋ

ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವಾನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯ ಪ್ರದರ್ಶಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

ಹರಿತವಾದ ಚಾಕು ಹಿಡಿದುಕೊಂಡು ಸೇನಾ ಜವಾನನೋರ್ವನಿಂದ ವಿಶೇಷ ಖುಕುರಿ ಡ್ಯಾನ್ಸ್; ಇಲ್ಲಿದೆ ವೈರಲ್ ವಿಡಿಯೋ
ಖುಕುರಿ ನೃತ್ಯ ಪ್ರದರ್ಶಿಸುತ್ತಿರುವ ಸೇವಾ ಜವಾನ
TV9 Web
| Edited By: |

Updated on:Jan 23, 2022 | 2:13 PM

Share

ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನ ಸೇನಾ ಜವಾನರೊಬ್ಬರು ವಿಶೇಷ ನೃತ್ಯ ಪ್ರದರ್ಶಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ನೋಡುಗರ ಗಮನ ಸೆಳೆದಿದ್ದು, ಸಾಕಷ್ಟು ಚಪ್ಪಾಳೆ ಗಿಟ್ಟಿಸಿಕೊಂಡಿದೆ. ಸೇನಾ ಜವಾನರೊಬ್ಬರು ಚಾಕು ಹಿಡಿದು ವಿಶೇಷವಾದ ‘ಖುಕುರಿ ನೃತ್ಯ’ವನ್ನು ಪ್ರದರ್ಶಿಸುತ್ತಿರುವುದನ್ನು ವಿಡಿಯೋದಲ್ಲಿ ನಾವು ಕಾಣಬಹುದಾಗಿ.

ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್‌ನಲ್ಲಿ ಸಂಪ್ರದಾಯವಾಗಿದ್ದು, ಮತ್ತು ವೀಕ್ಷಿಸಲು ಅಷ್ಟೇ ಆಕರ್ಷಕವಾಗಿದೆ. ಜವಾನರೊಬ್ಬರು ಹರಿತವಾದ ಅಪಾಯಕಾರಿ ಚಾಕುವಿನೊಂದಿಗೆ ಅತ್ಯಂತ ನಾಜುಕಿನಿಂದ ನೃತ್ಯ ಪ್ರದರ್ಶನ ಮಾಡಿದ್ದಾರೆ. ಅವರ ಪ್ರದರ್ಶನದ ನಂತರ, ಇತರೇ ಜವಾನರು ಚಪ್ಪಾಳೆ ತಟ್ಟುವ ಮೂಲಕ ಆ ಜವಾನನ್ನು ಶ್ಲಾಘಿಸಿತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಗೂರ್ಖಾ ಜವಾನನ ಖುಕುರಿ ನೃತ್ಯ. ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂದು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ವೀಡಿಯೊಗೆ ಶೀರ್ಷಿಕೆ ನೀಡಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಸದ್ಯ 20,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದ್ದು, ಇನ್ನೂ ವೀಕ್ಷಿಸಲ್ಪಡುತ್ತಿದೆ. ನೆಟ್ಟಿಗರು ಸೇನಾ ಜವಾನನ ಡ್ಯಾನ್ಸ್ ನೋಡಿ ಬೆರಗಾಗಿದ್ದಾರೆ. ಅನೇಕರು ಗೂರ್ಖಾ ರೆಜಿಮೆಂಟ್‌ನ ಧೈರ್ಯ ಮತ್ತು ಉತ್ಸಾಹವನ್ನು ಶ್ಲಾಘಿಸಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ;

ಬಾಡಿಗೆ ತಾಯಿಯಿಂದ ಮಕ್ಕಳನ್ನು ಪಡೆಯುವ ಬದಲು ದತ್ತು ತೆಗೆದುಕೊಳ್ಳಿ: ವಿವಾದಕ್ಕೆ ಕಾರಣವಾದ ಬಾಂಗ್ಲಾ ಲೇಖಕಿ ತಸ್ಲೀಮಾ ಟ್ವೀಟ್

Viral Video:’ಕೊರೋನಾ ವಡೆ’ ತಯಾರಿಸಿ ರೆಸಿಪಿ ವಿಡಿಯೋ ಹಂಚಿಕೊಂಡ ಮಹಿಳೆ

Published On - 11:03 am, Sun, 23 January 22

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?