AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್‌ನ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಆಟೋ ಚಾಲಕಿ

ಉತ್ತರ ಪ್ರದೇಶದ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್​ನ ಪ್ರತಿಷ್ಠಿತ ರಾಯಲ್ ಅವಾರ್ಡ್‌ಗೆ ಭಾಜನರಾಗಿದ್ದಾರೆ. ಸರ್ಕಾರದ ಪಿಂಕ್ ಇ-ರಿಕ್ಷಾ ಚಾಲನೆ ಮಾಡುವ ಮೂಲಕ ಇತರ ಯುವತಿಯರಿಗೆ ಸ್ಫೂರ್ತಿ ನೀಡಿದ್ದಕ್ಕಾಗಿ ಆರತಿ ಅವರನ್ನು ಗೌರವಿಸಲಾಗಿದೆ.

ಲಂಡನ್‌ನ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತದ ಆಟೋ ಚಾಲಕಿ
ಅಕ್ಷತಾ ವರ್ಕಾಡಿ
|

Updated on: May 24, 2024 | 11:45 AM

Share

ಲಂಡನ್: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಹಳ್ಳಿಯೊಂದರ 18 ವರ್ಷದ ರಿಕ್ಷಾ ಚಾಲಕಿ ಆರತಿ ಬ್ರಿಟನ್​​ನ ಪ್ರತಿಷ್ಠಿತ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಪ್ರಿನ್ಸ್ ಟ್ರಸ್ಟ್ ಅವಾರ್ಡ್ಸ್‌ನಲ್ಲಿ ವಿಶ್ವಪ್ರಸಿದ್ಧ ಮಾನವ ಹಕ್ಕುಗಳ ನ್ಯಾಯವಾದಿಯ ಹೆಸರಿನಲ್ಲಿ ಹೆಸರಿಸಲಾದ ಅಮಲ್ ಕ್ಲೂನಿ ಮಹಿಳಾ ಸಬಲೀಕರಣ ಪ್ರಶಸ್ತಿಯನ್ನು ಪಡೆದು ಆರತಿ ಬ್ರಿಟನ್ ರಾಜ ಕುಟುಂಬದ ಅರಮನೆ ಬಕಿಂಗ್‌ಹ್ಯಾಮ್ ಪ್ಯಾಲೇಸ್‌ನಲ್ಲಿ ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿಯಾಗಿದರು. ಸರ್ಕಾರದ ಪಿಂಕ್ ಇ-ರಿಕ್ಷಾ ಚಾಲನೆ ಮಾಡುವ ಮೂಲಕ ಇತರ ಯುವತಿಯರಿಗೆ ಮಾದರಿ ಮತ್ತು ಮಹಿಳಾ ಸಬಲೀಕರಣಕ್ಕೆ ಸ್ಪೂರ್ತಿಯಾದ ಆರತಿಗೆ ಬ್ರಿಟನ್ನ ಪ್ರತಿಷ್ಠಿತ ಪ್ರಶಸ್ತಿ ನೀಡಲಾಯಿತು.

“ಇದೇ ರೀತಿಯ ಸವಾಲುಗಳನ್ನು ಎದುರಿಸುವ ಇತರ ಹುಡುಗಿಯರನ್ನು ಪ್ರೇರೇಪಿಸಲು ನಾನು ಹೆಮ್ಮೆಪಡುತ್ತೇನೆ. ಸರ್ಕಾರ ಈ ಪಿಂಕ್​​ ರಿಕ್ಷಾ ಯೋಜನೆ ಜಗತ್ತನ್ನು ವಿಭಿನ್ನ ಬೆಳಕಿನಲ್ಲಿ ನೋಡಲು ನನಗೆ ಸಹಾಯ ಮಾಡಿದೆ. ಈಗ ನಾನು ನನ್ನ ಸ್ವಂತ ಕನಸುಗಳನ್ನು ಮಾತ್ರವಲ್ಲದೆ ನನ್ನ ಮಗಳ ಕನಸುಗಳನ್ನೂ ಈಡೇರಿಸಬಲ್ಲೆ” ಎಂದು ಸುದ್ದಿ ಏಜೆನ್ಸಿ ಪಿಟಿಐ ಆರತಿ ಹೇಳಿರುವುದಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ಪ್ರಿನ್ಸ್ ಆಫ್ ವೇಲ್ಸ್ ಎಂದು ಕಿಂಗ್ ಚಾರ್ಲ್ಸ್ ಸ್ಥಾಪಿಸಿದ ಪ್ರಿನ್ಸ್ ಟ್ರಸ್ಟ್ ಇಂಟರ್ನ್ಯಾಷನಲ್ ಅನ್ನು ಈಗ ಕಿಂಗ್ಸ್ ಟ್ರಸ್ಟ್ ಇಂಟರ್ನ್ಯಾಷನಲ್ ಎಂದು ಕರೆಯಲಾಗುತ್ತದೆ ಏಕೆಂದರೆ ಇದು ಉದ್ಯೋಗ, ಶಿಕ್ಷಣ ಮತ್ತು ಉದ್ಯಮ ಕಾರ್ಯಕ್ರಮಗಳ ಮೂಲಕ 20 ದೇಶಗಳಲ್ಲಿನ ಯುವಜನರಿಗೆ ಬೆಂಬಲ ನೀಡುತ್ತಿದೆ. ಪ್ರಿನ್ಸ್ ಟ್ರಸ್ಟ್ ಮಹಿಳಾ ಸಬಲೀಕರಣ ಪ್ರಶಸ್ತಿಯು ಸ್ವಾಭಿಮಾನಿ ಮಹಿಳೆಯರು ಮತ್ತು ಅವರ ಸಾಧನೆಗಳನ್ನು ಗುರುತಿಸಿ ಗೌರವಿಸುವ ಪ್ರಶಸ್ತಿಯಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ