AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೆರಳಿನಲ್ಲಿ ಮೂಡಿದ ರಾಮ ಮಂದಿರ, ಈ ಕಲಾಕೃತಿಗೆ ಹಳೆಯ ಟಿವಿ ಬಳಕೆ 

ಸಾಮಾಜಿಕ ಜಾಲತಾಣವು ಪ್ರತಿಭಾವಂತ ಕಲಾವಿದರು, ಚಿತ್ರಕಲಾವಿದರಿಗೆ ತಮ್ಮ ಅದ್ಭುತ ಪ್ರತಿಭೆ ಮತ್ತು ಸೃಜನಶೀಲ ಕಲ್ಪನೆಗಳನ್ನು ಅನಾವರಗೊಳಿಸಲು ಇರುವಂತಹ  ಒಂದು ವೇದಿಕೆಯಾಗಿದೆ.  ಇಂತಹ ಪ್ರತಿಭಾವಂತ ಕಲಾವಿದರ ಕುರಿತ ವಿಡಿಯೋಗಳು ಆಗಾಗ್ಗೆ ವೈರಲ್ ಆಗತ್ತಿರುತ್ತವೆ.  ಇದೀಗ ಚಿತ್ರ ಕಲಾವಿದ ಶಿಂಟು ಮೌರ್ಯ ಎಂಬವರು ಹಳೆಯ ಟಿವಿಯ ಬಿಡಿ ಭಾಗಗಳನ್ನು ಬಳಸಿಕೊಂಡು ವಿಭಿನ್ನ ರೀತಿಯಲ್ಲಿ ನೆರಳು ಬೆಳಕಿನಲ್ಲಿ ರಾಮ ಮಂದಿರದ ಸುಂದರ ಕಲಾಕೃತಿಯನ್ನು ರಚಿಸಿದ್ದಾರೆ.  ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇವರ ಕಲೆಗಾರಿಕೆಗೆ ನೆಟ್ಟಿಗರು ಪಿಧಾ ಆಗಿದ್ದಾರೆ. 

Viral Video: ನೆರಳಿನಲ್ಲಿ ಮೂಡಿದ ರಾಮ ಮಂದಿರ, ಈ ಕಲಾಕೃತಿಗೆ ಹಳೆಯ ಟಿವಿ ಬಳಕೆ 
ಮಾಲಾಶ್ರೀ ಅಂಚನ್​
| Edited By: |

Updated on: Jan 05, 2024 | 6:55 PM

Share

ಕಲೆ ಅನ್ನೋದು ಯಾರ ಸ್ವತ್ತು ಕೂಡ ಅಲ್ಲ. ಈ ಕಲೆ ಅಷ್ಟು ಸುಲಭವಾಗಿ ಎಲ್ಲರಿಗೂ ಒಲಿಯೋದಿಲ್ಲ. ಒಲಿದರೆ ಅದು ಎಂತವರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುತ್ತದೆ. ಇದಕ್ಕೆ ಸೂಕ್ತ ಉದಾಹರಣೆ  ಚಿತ್ರ ಕಲಾವಿದ ಶಿಂಟು ಮೌರ್ಯ. ಇವರೊಬ್ಬ ಅದ್ಭುತ ಕಲಾವಿದರಾಗಿದ್ದು, ಯಾವುದೇ ರೀತಿಯ ಪೈಂಟಿಗ್ ಬಳಸದೆ ಟೊಮೆಟೊ ಸಾಸ್, ಕೆಚಪ್ ಚಹಾ, ಶಾಂಪೂ ಇತ್ಯಾದಿಗಳನ್ನು ಬಳಸಿ ಅದ್ಭುತ ಚಿತ್ರಗಳನ್ನು ಬಿಡಿಸುತ್ತಾರೆ. ಅಷ್ಟೇ ಯಾಕೆ ವಿವಿಧ ವಸ್ತುಗಳನ್ನು ಬಳಸಿಕೊಂಡು ನೆರಳು ಬೆಳಕಿನ (ಶ್ಯಾಡೋ ಪೋರ್ಟರೈಟ್) ಕಲಾಕೃತಿಯನ್ನು ಸಹ ರಚಿಸುತ್ತಾರೆ. ಇವರು ತನ್ನ ಈ ವಿಶಿಷ್ಟ ಪ್ರತಿಭೆಯಿಂದ ಇದಾಗಲೇ ಭಾರಿ ಹೆಸರನ್ನು ಗಳಿಸಿದ್ದಾರೆ. ಇದೀಗ ಶಿಂಟು ಮೌರ್ಯ  ಹಳೆಯ ಟಿವಿಯ ಬಿಡಿ ಭಾಗಗಳನ್ನು ಉಪಯೋಗಿಸಿಕೊಂಡು ನೆರಳು ಬೆಳಕಿನಲ್ಲಿ ರಾಮ ಮಂದಿರದ ಸುಂದರ ಕಲಾಕೃತಿಯನ್ನು ರಚಿಸಿದ್ದಾರೆ.  ಈ ವಿಡಿಯೋ  ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇವರ ಅದ್ಭುತ ಕಲೆಗಾಗಿಕೆಗೆ ನೆಟ್ಟಿಗರು ತಲೆಬಾಗಿದ್ದಾರೆ.

ಶಿಂಟು ಮೌರ್ಯ  (@artist_shintu_mourya) ಈ ಸುಂದರ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಡಿದ್ದು, ವಿಡಿಯೋದಲ್ಲಿ ಅವರು ಹಳೆಯ ಟಿವಿಯ ಬಿಡಿ ಭಾಗಗಳನ್ನೆಲ್ಲಾ ಬಳಸಿಕೊಂಡು ರಾಮ ಮಂದಿರದ ಶ್ಯಾಡೋ ಪೋರ್ಟರೈಟ್ ಚಿತ್ರವನ್ನು ರಚಿಸುವುದನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ:

ವಿಡಿಯೋದಲ್ಲಿ ಕಲಾವಿದ ಶಿಂಟು ಮೌರ್ಯ ಹಳೆಯ ಟಿವಿಯನ್ನು ಹಿಡಿದುಕೊಂಡು ಇದ್ರಿಂದ ಸುಂದರ ಚಿತ್ರವೊಂದುನ್ನು ರಚಿಸಿಸೋಣ ಅಂತ ಹೇಳ್ತಾರೆ. ನಂತರ ಟಿವಿಯ  ಬಿಡಿ ಭಾಗಗಳನ್ನೆಲ್ಲಾ ತೆಗೆದುಕೊಂಡು, ಎಲ್ಲವನ್ನು ಒಂದೊಂದಾಗಿ ಜೋಡಿಸಿಕೊಂಡು ರಾಮ ಮಂದಿರ ಹಾಗೂ ಅದರ ಮೇಲ್ಗಡೆ ರಾಮ, ಸೀತಾ ದೇವಿ ಹಾಗೂ ಲಕ್ಷ್ಮಣರ ಅದ್ಭುತವಾದ ಶ್ಯಾಡೋ ಪೋರ್ಟರೈಟ್ ಕಲಾಕೃತಿಯನ್ನು  ರಚಿಸಿರುವಂತಹ ಅದ್ಭುತ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ: ವಂದೇ ಭಾರತ್ ಎಕ್ಸ್​​ಪ್ರೆಸ್​ ಟ್ರೈನ್ ಬರುವ ವೇಳೆ ಹಳಿ ದಾಟಿದ ವ್ಯಕ್ತಿ, ಮುಂದೆನಾಯ್ತು ನೋಡಿ? 

ಜನವರಿ 03 ರಂದು ಹಂಚಿಕೊಳ್ಳಲಾದ ಈ ವೈರಲ್ ವಿಡಿಯೋ  32.9 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  3.9 ಮಿಲಿಯನ್ ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿದೆ. ಒಬ್ಬ ಬಳಕೆದಾರರು ʼನಿಮ್ಮ ಈ ಅದ್ಭುತ ಕಲೆಯನ್ನು ನೋಡಿ ಮೈಯೆಲ್ಲಾ ರೋಮಾಂಚನವಾಯಿತುʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅದ್ಭುತ ಪ್ರತಿಭೆ ʼ ಎಂದು ಕಮೆಂಟ್ ಮಾಡಿದ್ದಾರೆ. ಅನೇಕರು ಶಿಂಟು ಮೌರ್ಯ ಅವರ ಈ ಅದ್ಭುತ ಕಲೆಗೆ ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ