AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಲಾವಿದ ಬಿಡಿಸಿದ ತನ್ನ ಚಿತ್ರ ಕಂಡು ಭಾವುಕರಾದ ಬಸ್‌ ಕಂಡಕ್ಟರ್;‌ ಹೃದಯಸ್ಪರ್ಶಿ ವಿಡಿಯೋ ವೈರಲ್

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನೋಡುಗರ ಕಣ್ಣಂಚಲಿ ನೀರು ತರಿಸುತ್ತವೆ. ಸದ್ಯ ಅಂತಹದೊಂದು ಹೃದಯಸ್ಪರ್ಶಿ ವಿಡಿಯೋ ಇದೀಗ ವೈರಲ್‌ ಆಗಿದೆ. ಬಸ್ಸಿನಲ್ಲಿ ಕುಳಿತು ಚಿತ್ರ ಕಲಾವಿದರೊಬ್ಬರು ಬಸ್‌ ನಿರ್ವಾಹಕನ ಸುಂದರ ಚಿತ್ರ ಬಿಡಿಸಿದ್ದು, ಕಲಾವಿದ ಬಿಡಿಸಿದ ತನ್ನ ಚಿತ್ರವನ್ನು ಕಂಡು ಕಂಡಕ್ಟರ್‌ ಭಾವುಕರಾಗಿದ್ದಾರೆ. ಸದ್ಯ ಈ ಸುಂದರ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

Viral Video: ಕಲಾವಿದ ಬಿಡಿಸಿದ ತನ್ನ ಚಿತ್ರ ಕಂಡು ಭಾವುಕರಾದ ಬಸ್‌ ಕಂಡಕ್ಟರ್;‌ ಹೃದಯಸ್ಪರ್ಶಿ ವಿಡಿಯೋ ವೈರಲ್
ಮಾಲಾಶ್ರೀ ಅಂಚನ್​
| Edited By: |

Updated on: Aug 04, 2024 | 6:01 PM

Share

ಪ್ರತಿಯೊಬ್ಬ ಮನುಷ್ಯನಿಗೂ ಕೆಲಸ, ಸಂಸಾರ, ಮಕ್ಕಳು ಅನ್ನೋ ಜವಬ್ದಾರಿ ಇದ್ದೇ ಇದೆ. ಈ ಎಲ್ಲಾ ಜವಬ್ದಾರಿಗಳು ಹೆಗಲೇರಿದಾಗ, ಒತ್ತಡ ಹೆಚ್ಚಾದಾಗ ಒಬ್ಬಂಟಿಯಾಗಿರುವ ಸಮಯದಲ್ಲಿ ನಾವು ಏನನ್ನೋ ಯೋಚಿಸುತ್ತಾ ಸುಮ್ಮನೆ ಕುಳಿತು ಬಿಡುತ್ತೇವೆ. ಅದೇ ರೀತಿ ಇಲ್ಲೊಬ್ಬ ಬಸ್‌ ಕಂಡಕ್ಟರ್‌ ಕೂಡಾ ಬಸ್‌ ಹೊರಡುವ ಮುನ್ನ ಏನನ್ನೋ ಯೋಚಿಸುತ್ತಾ ಬೇಸರದಿಂದ ಕುಳಿತಿದ್ದರು. ಈ ದೃಶ್ಯವನ್ನು ಕಂಡ ಚಿತ್ರ ಕಲಾವಿದರೊಬ್ಬರು ಕಂಡಕ್ಟರ್‌ ಮುಖದಲ್ಲಿ ನಗು ತರಿಸಬೇಕೆಂದು ಬಸ್ಸಿನಲ್ಲಿ ಕುಳಿತು ಅವರ ಚಿತ್ರವನ್ನು ಬಿಡಿಸಿದ್ದಾರೆ. ಕಲಾವಿದ ಬಿಡಿಸಿದ ತನ್ನ ಚಿತ್ರವನ್ನು ಕಂಡು ಕಂಡಕ್ಟರ್‌ ಮೊಗದಲ್ಲಿ ನಗು ಮೂಡಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಈ ಸುಂದರ ದೃಶ್ಯ ನೆಟ್ಟಿಗರ ಮನ ಗೆದ್ದಿದೆ.

ಈ ವಿಡಿಯೋವನ್ನು ಚಿತ್ರ ಕಲಾವಿದ ಆಕಾಶ್‌ ಸೆಲ್ವರಸು (imaginelife_official) ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಚಿತ್ರ ಕಲಾವಿದ ಆಕಾಶ್‌ ಏನೋ ಯೋಚಿಸುತ್ತಾ ಬೇಸರದಲ್ಲಿದ್ದ ಬಸ್‌ ಕಂಡಕ್ಟರ್‌ ಒಬ್ಬರ ಸುಂದರ ಚಿತ್ರವನ್ನು ಬಿಡಿಸುವ ದೃಶ್ಯವನ್ನು ಕಾಣಬಹುದು. ಚಿತ್ರ ಬಿಡಿಸಿದ ಬಳಿಕ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಈ ಸುಂದರ ಚಿತ್ರವನ್ನು ನೋಡಿ ಬಹಳ ಸಂತೋಷಪಟ್ಟರು. ಕೊನೆಯಲ್ಲಿ ಕಂಡಕ್ಟರ್‌ ತನ್ನ ಚಿತ್ರವನ್ನು ಕಂಡು ಭಾವುಕರಾಗಿ ಮನಸ್ಪೂರ್ವಕವಾಗಿ ನಕ್ಕಿದ್ದಾರೆ.

ಇದನ್ನೂ ಓದಿ: ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

ಐದು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 3.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕಂಡೆಕ್ಟರ್‌ ಸಾಹೆಬ್ರ ಆ ಒಂದು ನಗು ನಮ್ಮೆಲ್ಲರ ಮೊಗದಲ್ಲೂ ನಗು ತರಿಸಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಕಲೆಯಿಂದ ಒಬ್ಬರ ಮುಖದಲ್ಲಿ ನಗು ತರಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳುʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ