AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ

ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

Puri Ratha Yatra 2021: ಪುರಿ ಬೀಚ್​ನಲ್ಲಿ ಅರಳಿದ ಮರಳು ಕಲೆ! ಜಗನ್ನಾಥ ದೇವರನ್ನು ಚಿತ್ರಿಸಿದ ಕಲಾವಿದ
ಮರಳು ಕಲೆ
TV9 Web
| Edited By: |

Updated on: Jul 12, 2021 | 10:36 AM

Share

ಇಂದು ಸುಪ್ರಸಿದ್ಧ ಪುರಿ ಜಗನ್ನಾಥರ ರಥೋತ್ಸವ ನಡೆಯಲಿದೆ. ಈ ಪ್ರಯುಕ್ತ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆದ ಪದ್ಮಶ್ರೀ ಪುರಸ್ಕೃತ ಸುದರ್ಶನ್​ ಪಟ್ನಾಯಕ್​ ಅವರು ಪುರಿ ಬೀಚ್​ನಲ್ಲಿ ರಥದ ಚಿತ್ರವನ್ನು ರಚಿಸಿದ್ದಾರೆ. ಸರಿಸುಮಾರು 43.2 ಅಡಿ ಉದ್ದ ಮತ್ತು 25 ಅಡಿ ಅಗಲವಿರುವ ಭಗವಾನ್​ ಜಗನ್ನಾಥರ ರಥ 3ಡಿ ಮರಳು ಕಲೆಯನ್ನು ರಚಿಸಿದ್ದಾರೆ. 

ರಥಯಾತ್ರೆಯ ಸಂದರ್ಭದಲ್ಲಿ ಒಡಿಶಾದ ಪುರಿ ಬೀಚ್​ನಲ್ಲಿ 43.2 ಅಡಿ ಉದ್ದ ಮತ್ತು 35 ಅಡಿ ಅಗಲದ ಭಗವಾನ್​ ಜಗನ್ನಾಥರ ಅವರ ನಂದಿಗೋಸ ರಥದ ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್​ ರಥವನ್ನು ನಾವು ರಚಿಸಿದ್ದೇವೆ. ಇದೊಂದು ಹೊಸ ದಾಖಲೆಯಾಗಿದೆ ಎಂದು ನಾವು ಭಾವಿಸುತ್ತೇವೆ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಸುದರ್ಶನ್​ ಅವರು ಗಿನ್ನಿಸ್​ ದಾಖಲೆ ಸೇರಿದಂತೆ ಪದ್ಮಶ್ರೀ ಪುರಸ್ಕೃತ ಮರಳು ಕಲಾವಿದ ವಿಶ್ವದಾದ್ಯಂತ 60ಕ್ಕೂ ಹೆಚ್ಚು ಅಂತರಾಷ್ಟ್ರೀಯ ಚಾಂಪಿಯನ್​ಶಿಪ್​ಗಳು ಮತ್ತು ಉತ್ಸವಗಳಲ್ಲಿ ಭಾಗವಹಿಸಿದ್ದಾರೆ. ಜತೆಗೆ ದೇಶಕ್ಕಾಗಿ ಅನೇಕ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅತಿದೊಡ್ಡ 3ಡಿ ಸ್ಯಾಂಡ್​ ಆರ್ಟ್ ಸುಂದರವಾಗಿ ಗೋಚರಿಸುತ್ತಿದೆ. ಸಾಗರ ತೀರದ ಮರಳಿನಲ್ಲಿ ಬಣ್ಣದಿಂದ ಆವೃತವಾದ ಚಿತ್ರ ಜನರನ್ನು ಬೆರಗುಗೊಳಿಸಿದೆ.

ಕಳೆದ ವರ್ಷದಂತೆ ಈ ಬಾರಿಯೂ ಜು.12ರಂದು ಜಗನ್ನಾಥರ ರಥಯಾತ್ರೆಯಲ್ಲಿ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೆ ನಡೆಯಲಿದೆ. ಸುಪ್ರೀಂ ಕೋರ್ಟ್​ ಆದೇಶ ಮತ್ತು ಒಡಿಶಾ ರಾಜ್ಯ ಸರ್ಕಾರದ ಎಸ್​ಒಪಿ ಅನ್ವಯ ರಥಯಾತ್ರೆಯಲ್ಲಿ ಭಕ್ತರಿಗೆ ಅವಕಅಶ ನೀಡುತ್ತಿಲ್ಲ. ಇನ್ನು ಎರಡೂ ಡೋಸ್​ ಲಸಿಕೆ ಪಡೆದು, ಆರ್​-ಪಸಿಆರ್​ ನೆಗೆಟಿವ್​ ರಿಪೋರ್ಟ್​ ಹೊಂದಿರುವವರಿಗೆ ರಥ ಎಳೆಯಲು ಅವಕಅಶ ನೀಡಲಾಗುವುದು ಎಂದು ವರದಿ ತಿಳಿಸಿವೆ

ಇದನ್ನೂ ಓದಿ:

Jagannath Rath Yatra 2021: ಈ ಬಾರಿಯೂ ಭಕ್ತರಿಲ್ಲದೆ ನಡೆಯುತ್ತಿದೆ ಪುರಿ ಜಗನ್ನಾಥ ರಥಯಾತ್ರೆ; ನಿನ್ನೆಯಿಂದಲೇ ಜಾರಿಯಾಗಿದೆ ಕರ್ಫ್ಯೂ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ