AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ದೇಶದ ಎಲ್ಲೆಡೆ ಪೋಸ್ಟರ್ ತಯಾರಿ, ಸಿಹಿ ತಿಂಡಿಗಳ ತಯಾರಿ, ಆ ದಿನವನ್ನು ಹಬ್ಬದಂತೆ ಆಚರಿಸಲು ತಯಾರಿಗಳು ನಡೆಯುತ್ತಿವೆ. ಇನ್ನೊಂದೆಡೆ ರಾಮನ ಭಜನೆಗಳಿಗೆ ಡಾನ್ಸ್ ಮಾಡುವುದು, ಹಾಡು ಹಾಡುವುದು ಹೀಗೆ ಜನರು ತಮ್ಮ ಸಂಭ್ರಮವನ್ನು ಈ ಮೂಲಕ ತೋರ್ಪಡಿಸುತ್ತಿದ್ದಾರೆ. ಆದರೆ ಇದೀಗ ನಾಗ್ಪುರದ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆ ಹಾಡಿಗೆ ಮುದ್ದಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆಯುತ್ತಿದೆ.

Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು
ಸಾಯಿನಂದಾ
| Edited By: |

Updated on: Jan 20, 2024 | 6:14 PM

Share

ರಾಮ ಮಂದಿರ ಉದ್ಘಾಟನೆಯನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ  ಜನವರಿ 22ಕ್ಕಾಗಿ ಎದುರು ನೋಡುತ್ತಿದೆ. ಅಯೋಧ್ಯೆಯಲ್ಲಿ ಈಗಾಗಲೇ ಪ್ರತಿಷ್ಠಾಪನೆಗೂ ಮುನ್ನ ನಡೆಯಬೇಕಾದ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಇತ್ತ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಈ ನಡುವೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆಗೆ ಅದ್ಭುತವಾಗಿ ನೃತ್ಯ ಮಾಡಿದ್ದು, ಮಕ್ಕಳ ಜೊತೆಗೆ ಶಿಕ್ಷಕಿಯು ಹೆಜ್ಜೆ ಹಾಕಿದ್ದಾರೆ.

ಈ ವಿಡಿಯೋದಲ್ಲಿ ‘ರಾಮ್ ಆಯೇಂಗೆ’ ಭಜನೆ ಹಾಡಿಗೆ ಮಕ್ಕಳ ಜೊತೆಗೆ ಶಿಕ್ಷಕಿಯೂ ಕೂಡ ನೃತ್ಯ ಮಾಡಿದ್ದು, ವಿಡಿಯೋದಲ್ಲಿ ಶಿಕ್ಷಕಿಯೂ ಡಾನ್ಸ್ ಮಾಡುವುದನ್ನು ನೋಡುತ್ತಾ ವಿದ್ಯಾರ್ಥಿಗಳು ಕೂಡ ನೃತ್ಯ ಮಾಡುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ವಿಡಿಯೋವನ್ನು  ಎಎನ್ ಐ ಸುದ್ದಿ ಸಂಸ್ಥೆಯು  ಸೋಶಿಯಲ್ ಮೀಡಿಯಾ ಖಾತೆಯಲ್ಲಿ  ಪೋಸ್ಟ್ ಮಾಡಿದ್ದು,  ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಕಂಡಕ್ಟರನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಡ್ರೈವರಣ್ಣ, ಮುಂದೇನಾಯ್ತು ನೋಡಿ? 

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ನೋಡಿದ ಬಳಕೆದಾರನೊಬ್ಬ, “ಜೈ ಹೋ ಚಾರೋ ತರಫ್ ಉತ್ಸವ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, “ದಿನದ ಅತ್ಯುತ್ತಮ ವಿಡಿಯೋ, ದೇಶ್ ಬದಲ್ ರಾ ಹೈ” ಎಂದಿದ್ದಾರೆ.  ಇನ್ನೊಬ್ಬರು, “ಶಿಕ್ಷಕರು ವಿದ್ಯಾರ್ಥಿಗಳಿಗಿಂತ ಹೆಚ್ಚು ಆನಂದಿಸುತ್ತಿದ್ದಾರೆಂದು ತೋರುತ್ತದೆ. ಶಿಕ್ಷಕಿಯ ಮುಖದಲ್ಲಿನ ಸಂತೋಷವು ಅತಿವಾಸ್ತವಿಕವಾಗಿದೆ! ಅದ್ಭುತವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ