AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ದೇಶದ ಎಲ್ಲೆಡೆ ಪೋಸ್ಟರ್ ತಯಾರಿ, ಸಿಹಿ ತಿಂಡಿಗಳ ತಯಾರಿ, ಆ ದಿನವನ್ನು ಹಬ್ಬದಂತೆ ಆಚರಿಸಲು ತಯಾರಿಗಳು ನಡೆಯುತ್ತಿವೆ. ಇನ್ನೊಂದೆಡೆ ರಾಮನ ಭಜನೆಗಳಿಗೆ ಡಾನ್ಸ್ ಮಾಡುವುದು, ಹಾಡು ಹಾಡುವುದು ಹೀಗೆ ಜನರು ತಮ್ಮ ಸಂಭ್ರಮವನ್ನು ಈ ಮೂಲಕ ತೋರ್ಪಡಿಸುತ್ತಿದ್ದಾರೆ. ಆದರೆ ಇದೀಗ ನಾಗ್ಪುರದ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆ ಹಾಡಿಗೆ ಮುದ್ದಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆಯುತ್ತಿದೆ.

Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು
ಸಾಯಿನಂದಾ
| Edited By: |

Updated on: Jan 20, 2024 | 6:14 PM

Share

ರಾಮ ಮಂದಿರ ಉದ್ಘಾಟನೆಯನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ  ಜನವರಿ 22ಕ್ಕಾಗಿ ಎದುರು ನೋಡುತ್ತಿದೆ. ಅಯೋಧ್ಯೆಯಲ್ಲಿ ಈಗಾಗಲೇ ಪ್ರತಿಷ್ಠಾಪನೆಗೂ ಮುನ್ನ ನಡೆಯಬೇಕಾದ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಇತ್ತ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಈ ನಡುವೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆಗೆ ಅದ್ಭುತವಾಗಿ ನೃತ್ಯ ಮಾಡಿದ್ದು, ಮಕ್ಕಳ ಜೊತೆಗೆ ಶಿಕ್ಷಕಿಯು ಹೆಜ್ಜೆ ಹಾಕಿದ್ದಾರೆ.

ಈ ವಿಡಿಯೋದಲ್ಲಿ ‘ರಾಮ್ ಆಯೇಂಗೆ’ ಭಜನೆ ಹಾಡಿಗೆ ಮಕ್ಕಳ ಜೊತೆಗೆ ಶಿಕ್ಷಕಿಯೂ ಕೂಡ ನೃತ್ಯ ಮಾಡಿದ್ದು, ವಿಡಿಯೋದಲ್ಲಿ ಶಿಕ್ಷಕಿಯೂ ಡಾನ್ಸ್ ಮಾಡುವುದನ್ನು ನೋಡುತ್ತಾ ವಿದ್ಯಾರ್ಥಿಗಳು ಕೂಡ ನೃತ್ಯ ಮಾಡುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ವಿಡಿಯೋವನ್ನು  ಎಎನ್ ಐ ಸುದ್ದಿ ಸಂಸ್ಥೆಯು  ಸೋಶಿಯಲ್ ಮೀಡಿಯಾ ಖಾತೆಯಲ್ಲಿ  ಪೋಸ್ಟ್ ಮಾಡಿದ್ದು,  ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಕಂಡಕ್ಟರನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಡ್ರೈವರಣ್ಣ, ಮುಂದೇನಾಯ್ತು ನೋಡಿ? 

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ನೋಡಿದ ಬಳಕೆದಾರನೊಬ್ಬ, “ಜೈ ಹೋ ಚಾರೋ ತರಫ್ ಉತ್ಸವ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, “ದಿನದ ಅತ್ಯುತ್ತಮ ವಿಡಿಯೋ, ದೇಶ್ ಬದಲ್ ರಾ ಹೈ” ಎಂದಿದ್ದಾರೆ.  ಇನ್ನೊಬ್ಬರು, “ಶಿಕ್ಷಕರು ವಿದ್ಯಾರ್ಥಿಗಳಿಗಿಂತ ಹೆಚ್ಚು ಆನಂದಿಸುತ್ತಿದ್ದಾರೆಂದು ತೋರುತ್ತದೆ. ಶಿಕ್ಷಕಿಯ ಮುಖದಲ್ಲಿನ ಸಂತೋಷವು ಅತಿವಾಸ್ತವಿಕವಾಗಿದೆ! ಅದ್ಭುತವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?