AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!

ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!

Viral Video: ನಡು ರಸ್ತೆಯಲ್ಲಿ ರೀಲ್ಸ್​ ವಯ್ಯಾರ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಕ್ಷಣಾರ್ಧದಲ್ಲಿ ಚಿನ್ನದ ಸರ ಎಗರಿಸಿಕೊಂಡುಹೋದ!
ರೀಲ್ಸ್​ ಮಾಡ್ತಿದ್ದ ಯುವತಿ.. ಬೈಕಲ್ಲಿ ಬಂದವ ಚಿನ್ನದ ಸರ ಎಗರಿಸಿಕೊಂಡುಹೋದ!
TV9 Web
| Edited By: |

Updated on:Mar 25, 2024 | 2:53 PM

Share

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ನಡು ರಸ್ತೆಯಲ್ಲಿ ಯುವತಿಯೊಬ್ಬಳು ಸಾಮಾಜಿಕ ಜಾಲತಾಣಗಳಿಗೆ ವಯ್ಯಾರದಿಂದ ರೀಲ್ಸ್​​ ಮಾಡುತ್ತಿದ್ದಾಗ ಯಾವೊದೋ ಮಾಯದಲ್ಲಿ ಬಂದ ಬೈಕ್ ಸವಾರ ಆಕೆಯ ಕೊರಳಲ್ಲಿದ್ದ ಚೈನ್ ಕಿತ್ತೊಕೊಂಡು ಪರಾರಿಯಾಗಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕೆಲವರು ಇದನ್ನು ರೀಲ್ಸ್​​ ಹುಚ್ಚುತನ ಎಂದು ಜರಿದರೆ, ಇತರರು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ರಸ್ತೆ ಮಧ್ಯೆ ತಮ್ಮ ಮೊಬೈಲ್‌ನಲ್ಲಿ ರೀಲ್ಸ್​​ ಶೂಟ್ ಮಾಡುತ್ತಾ ಹೆಜ್ಜೆ ಮೇಲೆ ಹೆಜ್ಜೆ ಹಾಕುತ್ತಾ ಸಾಗಿದ್ದಾರೆ. ಆಕೆ ನಿಧಾನವಾಗಿ ಕ್ಯಾಮರಾ ಬಳಿ ಬರುತ್ತಿದ್ದಂತೆ ಬೈಕ್ ಸವಾರನೊಬ್ಬ ಬಂದು ಆ ಮಹಿಳೆಯ ಕತ್ತಿನಲ್ಲಿದ್ದ ಸರ ಕಿತ್ತುಕೊಂಡು ಬೈಕಲ್ಲಿ ಪರಾರಿಯಾಗಿದ್ದಾನೆ. ವಿಡಿಯೋ ನೋಡಿದಾಗ ಅದು ರೀಲ್ಸ್​ ಭಾಗವಾಗಿ ಕಂಡುಬಂದಿದೆ, ಆದರೆ ಮಹಿಳೆ ಭಯದಿಂದ ಕಿರುಚಿಕೊಂಡಿರುವುದನ್ನು ನೋಡಿದರೆ ಇದು ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಎಂದು ತಿಳಿದುಬಂದಿದೆ.

ಹೆಲ್ಮೆಟ್ ಹಾಕಿಕೊಂಡು ಬೈಕ್ ನಲ್ಲಿ ಬಂದ ದುಷ್ಕರ್ಮಿ ಸೀದಾ ಮಹಿಳೆಯ ಸಮೀಪಕ್ಕೆ ಬಂದು ಚೈನ್ ಎಳೆದವನೆ ಸ್ಥಳದಿಂದ ಪರಾರಿಯಾಗಿದ್ದಾನೆ. ಆಗಂತಕು ಮಹಿಳೆಯ ಕತ್ತಿನಲ್ಲಿದ್ದ ಮಂಗಳಸೂತ್ರ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ. ಹಗಲು ವೇಳೆಯೇ ರಸ್ತೆಯಲ್ಲಿ ಚೈನ್ ಸ್ನ್ಯಾಚ್ ಮಾಡುವ ಈ ಘಟನೆ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎಬ್ಬಿಸಿದರೆ, ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದರ ಪರಿವೆಯೇ ಇಲ್ಲದ ರೀತಿಯಲ್ಲಿ ರೀಲ್‌ಗಳಲ್ಲಿ ನಿರತರಾಗಿದ್ದಾರೆ ಎಂದು ಕೆಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು

ಈ ಘಟನೆಯನ್ನು ನೋಡಿದ ನೆಟಿಜನ್‌ಗಳು ವಿವಿಧ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಏತನ್ಮಧ್ಯೆ, ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 25 March 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ